ಬೆಂಗಳೂರು ವಿಶ್ವವಿದ್ಯಾಲಯ | ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

Date:

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ವಾಹನಗಳ ಸಂಚಾರ ಏರಿಕೆಯಾಗುತ್ತಲೇ ಇದೆ. ಇದರಿಂದ ಆವರಣದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪಘಾತದ ಭೀತಿಯಲ್ಲಿಯೇ ಆವರಣದಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆ, ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕಬೇಕೆಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಲವು ಬಾರಿ ಪ್ರತಿಭಟನೆ ಮಾಡಿದ್ದಾರೆ. ಇದೀಗ, ಈ ಒತ್ತಡ ಜಾಸ್ತಿಯಾಗಿದೆ.

ಸದ್ಯ ಜ್ಞಾನಭಾರತಿ ಆವರಣದಲ್ಲಿ ವಾಹನ ಸಂಚಾರ ದಟ್ಟಣೆ ಏರಿಕೆಯಾಗಿದೆ. ವಿದ್ಯಾರ್ಥಿಗಳ ಅಪಘಾತಗಳ ಸಂಖ್ಯೆ ಸಹ ಹೆಚ್ಚಾದ ಹಿನ್ನೆಲೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಸಿಟಿಯ ಮಧ್ಯೆ ಇದ್ದು, ಉಲ್ಲಾಳ, ಮಲ್ಲತ್‌ಹಳ್ಳಿಯಿಂದ ನಾಗರಭಾವಿಗೆ ತೆರಳಲು ಅನುಕೂಲವಾಗಿದೆ. ಅಲ್ಲದೇ, ಮಲ್ಲತ್‌ಹಳ್ಳಿಯಿಂದ ನಾಯಂಡಹಳ್ಳಿಗೆ ತೆರಳಲು ಅನುಕೂಲಕರವಾಗಿದೆ. ಇದೀಗ, ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಜನರ ಸಂಚಾರ ಹೆಚ್ಚಾಗಿದೆ. ಹೀಗಾಗಿ, ಅಪಘಾತ ಉಂಟಾಗುವ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಾಗಿ ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಬೇಕು. ಪರ್ಯಾಯ ವ್ಯವಸ್ಥೆ ರೂಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆವರಣದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ಬೈಕ್, ಕಾರು, ಆಟೋ, ಬಸ್ ಸೇರಿದಂತೆ ಇನ್ನಿತರ ವಾಹನಗಳು ಕ್ಯಾಂಪಸ್‌ನಲ್ಲಿ ಸಂಚಾರ ಮಾಡುತ್ತಿವೆ. ಕ್ಯಾಂಪಸ್‌ನ ಹಾಸ್ಟೆಲ್‌ನಲ್ಲಿ ನೆಲೆಸಿರುವ ವಿದ್ಯಾರ್ಥಿಗಳು ನಿತ್ಯ ರಸ್ತೆ ದಾಟಲು ಪರದಾಡುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆ | ರಾಮಮಂದಿರದಲ್ಲಿ ಗುಂಡಿನ ಸದ್ದು; ಎಸ್​ಎಸ್​ಎಫ್ ಯೋಧ ಸಾವು

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದು, “ಜ್ಞಾನಭಾರತಿ ವಿವಿಯ ವಾಹನಗಳ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದು, ಸಾರ್ವಜನಿಕರಿಗೆ ಪರ್ಯಾಯ ರಸ್ತೆ ಕಲ್ಪಿಸಬೇಕು” ಎಂದು ಒತ್ತಾಯ ಮಾಡಿದ್ದಾರೆ.

ವಿದ್ಯಾರ್ಥಿಗಳ ಮನವಿ ಬಗ್ಗೆ ಬೆಂವಿವಿ ಕೂಡಾ ಗಂಭೀರವಾಗಿ ಪರಿಗಣಿಸಿದ್ದು, ಪರ್ಯಾಯ ರಸ್ತೆ ಕಲ್ಪಿಸುವ ಬಗ್ಗೆ ಕೂಡಾ ಯೋಜಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...