ಬೆಂಗಳೂರು | ನೀರಿನ ಸಮಸ್ಯೆ : ಬೇಸಿಗೆ ಮುಗಿಯುವವರೆಗೂ ಕಟ್ಟಡ ಪ್ರದೇಶದ ಕೊಳವೆಬಾವಿಗಳು ಜಲಮಂಡಳಿ ಸುಪರ್ದಿಗೆ

Date:

ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿ, ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಕಟ್ಟಡ ನಿರ್ಮಾಣಕ್ಕೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸುವಂತೆ ಹಾಗೂ ತಮ್ಮಲ್ಲಿರುವ ಕೊಳವೆಬಾವಿಯ ಮೂಲದ ನೀರನ್ನು ಬೇಸಿಗೆ ಕಾಲದವರೆಗೆ ಮಂಡಳಿಯ ಉಪಯೋಗಕ್ಕೆ ಕಡ್ಡಾಯವಾಗಿ ಹಸ್ತಾಂತರಿಸುವಂತೆ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮಲೀಕರಿಗೆ ಜಲಮಂಡಳಿ ಸೂಚಿಸಿದೆ.

ಈ ಬಗ್ಗೆ ಕಡ್ಡಾಯ ಆದೇಶ ಹೊರಡಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ), “ಬೆಂಗಳೂರು ಮಹಾನಗರದ ನೀರು ಸರಬರಾಜು ವ್ಯವಸ್ಥೆಯ ನಿರ್ವಹಣೆಯನ್ನು ಹೊತ್ತಿರುವ ಮಂಡಳಿಯು ನಗರದ ಎಲ್ಲ ನಾಗರೀಕರಿಗೆ ಸಮರ್ಪಕವಾಗಿ ನೀರು ಪೂರೈಸಬೇಕಾಗಿದೆ” ಎಂದಿದೆ.

“ಈ ನಿಟ್ಟಿನಲ್ಲಿ ಪ್ರಸ್ತುತ 20,000 ಚದರ ಅಡಿ ಮೇಲ್ಪಟ್ಟು ಕಟ್ಟಡ ನಿರ್ಮಾಣ ಮಾಡುವ ಮಾಲೀಕರುಗಳೊಂದಿಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸುವಂತೆ ಹಾಗೂ ತಮ್ಮಲ್ಲಿರುವ ಕೊಳವೆಬಾವಿಯ ಮೂಲದ ನೀರನ್ನು ಬೇಸಿಗೆ ಕಾಲದವರೆಗೆ ಮಂಡಳಿಯ ಉಪಯೋಗಕ್ಕೆ ಹಸ್ತಾಂತರಿಸಿ ಬೆಂಗಳೂರು ನಾಗರೀಕರ ನೀರು ಸರಬರಾಜಿಗೆ ಅನುವು ಮಾಡಿಕೊಡುವಂತೆ ಕೋರಿದೆ. ಈ ವೇಳೆ ಸಭೆಯಲ್ಲಿ ಎಲ್ಲರೂ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“20,000 ಚದರ ಅಡಿ ಮೇಲ್ಪಟ್ಟು ಕಟ್ಟಡ ನಿರ್ಮಾಣದ ಪ್ರದೇಶದಲ್ಲಿರುವ ಕೊಳವೆ ಬಾವಿಗಳ ಸಂಬಂಧ ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ನೀಡಲಾಗಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ತನಿಖಾ ಸಂಸ್ಥೆ ಬಳಸಿ ಕೇಜ್ರಿವಾಲ್‌ರನ್ನು ಬಂಧಿಸಿದ್ದಾರೆ: ಮುಖ್ಯಮಂತ್ರಿ ಚಂದ್ರು

“ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ಹಾಗೂ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11 ರನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಬೇಸಿಗೆ ಕಾಲ ಮುಗಿಯುವವರೆಗೆ ಅಥವಾ ಮುಂದಿನ ಆದೇಶದವರೆಗೆ 20,000 ಚದರ ಅಡಿ ಮೇಲ್ಪಟ್ಟು ಕಟ್ಟಡ ನಿರ್ಮಾಣದ ಪ್ರದೇಶದಲ್ಲಿರುವ ಕೊಳವೆ ಬಾವಿಗಳನ್ನು ಮಂಡಳಿಯ ಸುರ್ಪದಿಗೆ ನೀಡಬೇಕು” ಎಂದು ಕಟ್ಟಡ ಮಾಲೀಕರಿಗೆ ಜಲಮಂಡಳಿ ಆದೇಶಿಸಿದೆ.

ಮುಂದುವರೆದು, ಕಟ್ಟಡ ನಿರ್ಮಾಣ ಕಾಮಗಾರಿಗೆ ಆದೇಶಿಸಿರುವಂತೆ ಸಂಸ್ಕರಿಸಿದ ನೀರನ್ನು ಪಡೆಯಬಹುದಾಗಿದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...