ಬೆಂಗಳೂರು | ಸಸ್ಯಕಾಶಿ ಲಾಲ್‌ಬಾಗ್‌ನ 6 ಎಕರೆ ಜಾಗದಲ್ಲಿ ಪಶ್ಚಿಮ ಘಟ್ಟದ ಕಾಡು ನಿರ್ಮಾಣ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನ 6 ಎಕರೆಯ ಕಲ್ಲು ಬಂಡೆಯಂತಹ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಬಗೆಯ ನಿತ್ಯ ಹರಿದ್ವರ್ಣ ಗಿಡಗಳನ್ನು ಹಾಕಿದ್ದು, ಪಶ್ಚಿಮ ಘಟ್ಟದ ರೀತಿ ಅಭಿವೃದ್ದಿ ಪಡಿಸಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

ಈಗಾಗಲೇ ಈ ಗಿಡಗಳನ್ನ ಹಾಕಿ 5 ರಿಂದ 6 ತಿಂಗಳು‌ ಕಳೆದಿದ್ದು, ಇನ್ನು ಐದು ವರ್ಷದಲ್ಲಿ ಈ ಗಿಡಗಳು ದೊಡ್ಡದಾಗಿ ಬೆಳೆದು ದಟ್ಟ ಕಾಡಿನಂತೆಯೇ ನಿರ್ಮಾಣವಾಗಲಿವೆ.

ಅಳಿವಿನಂಚಿನಲ್ಲಿರುವ ಗಿಡಗಳನ್ನು ನೆಟ್ಟು, ಹೊಸ ವೈವಿಧ್ಯತೆಯನ್ನ ಸೃಷ್ಟಿಮಾಡಲು ತೋಟಾಗಾರಿಕಾ ಇಲಾಖೆ ಮುಂದಾಗಿದ್ದು, ಉಳುಗೇರಿ, ಪ್ರುತ್ರಂಜೀವ, ಎಣ್ಣೆ ಮರ, ಗಾರ್ಸಿನಿಯಾ, ಮ್ಯಾಂಗೋ ಸ್ಟೀನ್, ನವಿಲಾಡಿ, ದೂಪದ ಮರ, ಡಯಾಸ್ ಸ್ಪರಸ್, ಪಾಲ್ಸ ಹಣ್ಣು,‌ ಸ್ರೋಪ್ ಪೈನ್, ಅಂಟುವಾಳ, ಮಡ್ಡಿ ದೀಪದ ಮರ, ಸ್ಫೈಸ್ ಮರಗಳು, ರುದ್ರಾಕ್ಷಿ ಮರ, ತಾರೇ ಮರ, ಆರ್​ಡಿಸಿಯಾ ಎಮಿಲಿಸಿಸ್‌ ಸೇರಿದಂತೆ ಹಲವು ರೀತಿಯ ಅಪರೂಪದ ಗಿಡಗಳನ್ನು ಹಾಕಲಾಗಿದೆ. ಬೆಂಗಳೂರಿನ ಪ್ರಮುಖ ಪ್ರವಾಸಿ ತಾಣವಾಗಿರುವ ಲಾಲ್‌ಬಾಗ್‌ನಲ್ಲಿ ಮಿನಿ ಪಶ್ಚಿಮ ಘಟ್ಟಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯೋಜನೆಗೆ ಸುಮಾರು ₹45 ಲಕ್ಷ ಖರ್ಚು ಮಾಡಲಾಗಿದೆ. ಸದ್ಯ ಬಾಟಾನಿಕಲ್ ಗಾರ್ಡಾನ್ ಬಗ್ಗೆ ಸಂಶೋಧನೆ ಮಾಡುವ ವಿಧ್ಯಾರ್ಥಿಗಳಿಗೆ ನೋಡುವುದಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಪಕ್ಷಿಗಳು ಜೀವಿಸಲು ಅನುಕೂಲವಾಗುವ ರೀತಿಯಲ್ಲಿ ‌ಪಶ್ಚಿಮ ಘಟ್ಟದ ಕಾಡನ್ನ ನಿರ್ಮಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ನಾಲ್ವರು ಶಂಕಿತರು ಪೊಲೀಸ್‌ ವಶಕ್ಕೆ

ಕಳೆದ ಹಲವು ವರ್ಷಗಳಿಂದ ತೋಟಗಾರಿಕೆ ಇಲಾಖೆ ಸಿಬ್ಬಂದಿ ಮಣ್ಣಿನ ಫಲವತ್ತತೆ ಕುರಿತು ಕೆಲಸ ಮಾಡುತ್ತಿದ್ದು, ಸಹ್ಯಾದ್ರಿ ಬೆಟ್ಟದಿಂದ ತರಿಸಿದ್ದ 300 ಸಸಿಗಳನ್ನು ವಿದ್ಯಾರ್ಥಿ ಸ್ವಯಂಸೇವಕರ ನೆರವಿನಿಂದ ನೆಡಲಾಗಿದೆ.

ಮುಂದಿನ ದಿನಗಳಲ್ಲಿ, ಜಲಚರಗಳು ಮತ್ತು ಅಂತರ್ಜಲ ಮಟ್ಟ ಸುಧಾರಣೆಗಾಗಿ ಸಣ್ಣ ಕೊಳಗಳನ್ನು ಸಹ ರಚಿಸಲು ಚಿಂತನೆ ಇದೆ. ಇದು ಮರಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಘಟ್ಟದ ಪೊದೆಗಳು, ಗಿಡಮೂಲಿಕೆಗಳ ಸಸ್ಯಗಳನ್ನು ನೇಡಲು ಯೋಜಿಸಲಾಗಿದೆ. ಇಲ್ಲಿ ನೆಟ್ಟ ಮರಗಳು ದೊಡ್ಡದಾದ ಬಳಿಕ ಪ್ರವಾಸಿಗರಿಗೆ ನೋಡಲು ಅವಕಾಶ ಮಾಡಿಕೊಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...