ಬೆಂಗಳೂರು | ಮುಖ್ಯ ರಸ್ತೆಯಲ್ಲಿ ಯುವಕನ ಅಪಾಯಕಾರಿ ವ್ಹೀಲಿಂಗ್: ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಈ ಯುವಕರ ಹುಚ್ಚಾಟಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ, ನಗರದ ಹೊಸೂರು ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ಯುವಕನೊಬ್ಬ ಅಪಾಯಕಾರಿ ದ್ವಿಚಕ್ರ ವಾಹನದ ವ್ಹೀಲಿಂಗ್ ಮಾಡುತ್ತಿದ್ದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಾರ್ಚ್ 13ರಂದು ಬೆಳಿಗ್ಗೆ 9:50ರ ಸುಮಾರಿಗೆ ನಗರದ ಹೊಸೂರು ರಾಷ್ಟ್ರೀಯ ಹೆದ್ದಾರಿ ಚಂದಾಪುರ ಜಂಕ್ಷನ್ ಬಳಿ ಯುವಕನೊಬ್ಬ ಈ ಅಪಾಯಕಾರಿ ವ್ಹೀಲಿಂಗ್ ಮಾಡಿದ್ದಾನೆ. ಈ ಯುವಕ ವ್ಹೀಲಿಂಗ್ ಮಾಡೋದಕ್ಕೆ ನಂಬರ್ ಫ್ಲೇಟ್ ಇಲ್ಲದ ದ್ವಿಚಕ್ರ ವಾಹನ ಬಳಕೆ ಮಾಡಿದ್ದಾನೆ. ಈತ ಪ್ರಮುಖ ರಸ್ತೆಯಲ್ಲಿ ಮುಂದೆ ವೀಲ್ಹಿಂಗ್ ಮಾಡುತ್ತಿದ್ದರೇ, ಆತನ ಇತರ ಮೂರು ಜನ ಸ್ನೇಹಿತರು ಹೆಲ್ಮೆಟ್‌ ಹಾಕದೇ ಒಂದೇ ಬೈಕ್‌ನಲ್ಲಿ ಕುಳಿತು ಆತನನ್ನು ಹಿಂಬಾಲಿಸಿ, ವಿಡಿಯೋ ಮಾಡಿದ್ದಾರೆ. ಈ ಯುವಕನ ಹುಚ್ಚಾಟವನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸ್‌ನ ‘ಥರ್ಡ್‌ ಐ’ ಎಂಬ ಹೆಸರಿನ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ಈ ಅಪಾಯಕಾರಿ ಸಾಹಸವನ್ನು ಮಾರ್ಚ್‌ 13ರಂದು ಬೆಳಿಗ್ಗೆ 9:50ರ ಸುಮಾರಿಗೆ ಹೊಸೂರು ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ನಡೆಸಲಾಯಿತು. ಸ್ಟಂಟ್ ಮಾಡಿದ ಸವಾರ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದು, ಬೈಕ್ ಹಿಂಬಾಲಿಸಿಕೊಂಡು ಬಂದ ಆತನ ಸ್ನೇಹಿತರು ವಿಡಿಯೋ ಶೂಟ್ ಮಾಡಿದ್ದಾರೆ. ಅವರ ವಾಹನ ಸಂಖ್ಯೆ AP39 EC1411” ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಈ ವಿಡಿಯೋವನ್ನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸರು, ಈ ಪ್ರಕರಣ ಗಮನಿಸುವಂತೆ ಬೆಂಗಳೂರು ಗ್ರಾಮಾಂತರದ ಎಸ್​ಪಿಗೆ ಟ್ಯಾಗ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...