ಬಿಬಿಎಂಪಿ | ನಾಮಫಲಕಗಳಲ್ಲಿ ಕನ್ನಡ ಅಳವಡಿಸದ 49,241 ಮಳಿಗೆಗಳಿಗೆ ನೋಟಿಸ್

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, “ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದ್ದು, 16,813 ಮಳಿಗೆಗಳು ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿವೆ. 32,428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕಿದೆ. ಫೆಬ್ರುವರಿ ಅಂತ್ಯದೊಳಗಾಗಿ ಎಲ್ಲ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಆದ್ಯತೆ ಮೇರೆಗೆ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಮಳಿಗೆಗಳಿಗೆ ತಿಳಿವಳಿಕೆ ಪತ್ರ ನೀಡಿದ ಬಳಿಕ 7 ದಿನ ಕಾಲಾವಕಾಶ ನೀಡಿದ ಬಳಿಕವೂ ಕನ್ನಡ ನಾಮಫಲಕ‌ ಅಳವಡಿಸದಿದ್ದಲ್ಲಿ ಅಂತಹ ಮಳಿಗೆಯ ಮೇಲೆ ಶಿಸ್ತು ಕ್ರಮ ಜರುಗಿಸಿ ಕೂಡಲೇ ನಾಮಫಲಕ ಅಳವಡಿಸುವಂತೆ ಮಾಡಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಾಯ 2.0ರಲ್ಲಿ ಬರುವ ದೂರುಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ

“ಪಾಲಿಕೆಯ ಸಹಾಯ 2.0ರಲ್ಲಿ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಬೇಕು. ದೂರುಗಳು ಬಂದ ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು” ಎಂದು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

“ಆಯಾ ವಲಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಸದ ಸಮಸ್ಯೆ, ಬೀದಿ ದೀಪಗಳ ಅಳವಡಿಕೆ ಹಾಗೂ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ದೂರುಗಳು ಬರುತ್ತವೆ. ಬರುವಂತಹ ದೂರುಗಳನ್ನು ಆದ್ಯತೆ ಮೇರೆಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕು” ಎಂದು ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಉಪ ಆಯುಕ್ತ ಮಂಜುನಾಥ ಸ್ವಾಮಿ, ಕಂದಾಯ ವಿಭಾಗದ ಜಂಟಿ ಆಯುಕ್ತೆ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...