ಪ್ರಧಾನಿ ಮೋದಿ ರಾಜಕೀಯ ರ‍್ಯಾಲಿಗೆ ಬಿಬಿಎಂಪಿ ಹಣ ಖರ್ಚು ಮಾಡಿದೆ: ಕಾಂಗ್ರೆಸ್‌ ಆರೋಪ

Date:

  • ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಬಿಬಿಎಂಪಿ
  • ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಪಿ ಅರ್‌ ರಮೇಶ್‌, ರಮೇಶ್‌ ಬಾಬು ಆಗ್ರಹ

ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಕಾರ್ಯಕ್ರಮಕ್ಕೆ ಸ್ವತಃ ಬಿಬಿಎಂಪಿ ಹಣ ಖರ್ಚು ಮಾಡಿದ್ದು, ಈ ಮೂಲಕ ಕಾನೂನು ಉಲ್ಲಂಘನೆಯಾಗಿದೆ. ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯ ಪಿ ಅರ್‌ ರಮೇಶ್‌ ಮತ್ತು ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಅವರು ಈ ಕುರಿತು ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

“ವಿಧಾನಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿದೆ. ಯಾವುದೇ ಸರ್ಕಾರಿ ಕಾರ್ಯಕ್ರಮವನ್ನು ಸರ್ಕಾರಿ ವೆಚ್ಚದಲ್ಲಿ ನಡೆಸಲು ಅವಕಾಶವಿಲ್ಲ. ಇಂತಹ ಯಾವುದೇ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗದ ಪೂರ್ವಾನುಮತಿ ಬೇಕಾಗುತ್ತದೆ. ಆದರೆ, ನರೇಂದ್ರ ಮೋದಿ ಅವರು ಬಿಜೆಪಿಯ ಪ್ರಚಾರಕ್ಕಾಗಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ರ‍್ಯಾಲಿ ನಡೆಸಿದ್ದು, ಸುಮಾರು ಮೂರು ಕೋಟಿ ರೂಪಾಯಿಗಳ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. ಇದರ ಜೊತೆಗೆ ಐದು ಕಿಲೋ ಮೀಟರ್ ರಸ್ತೆ ವ್ಯಾಪ್ತಿಯಲ್ಲಿ ಚುನಾವಣಾ ರ‍್ಯಾಲಿಯ ವ್ಯವಸ್ಥೆಗೆ ಬಿಬಿಎಂಪಿ ಹಾಗೂ ಇತರ ಸರ್ಕಾರಿ ಸಂಸ್ಥೆಗಳ ಸೇವೆ ಬಳಸಿಕೊಳ್ಳಲಾಗಿದೆ” ಎಂದು ಪಿ ಅರ್‌ ರಮೇಶ್‌ ಮತ್ತು ರಮೇಶ್‌ ಬಾಬು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬಿಬಿಎಂಪಿ

ಈ ಸುದ್ದಿ ಓದಿದ್ದೀರಾ?: ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

“ಅನಧಿಕೃತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಸಾಮಗ್ರಿ ಬಳಸುವುದರ ಮೂಲಕ ಬಿಜೆಪಿ ಬಿಬಿಎಂಪಿಗೆ ಪಾವತಿ ಮಾಡಬೇಕಾಗಿದ್ದ ಅನುಮತಿ ಶುಲ್ಕವನ್ನು ಪಾವತಿ ಮಾಡದೆ ಬಿಬಿಎಂಪಿಗೆ ವಂಚಿಸಿದೆ” ಎಂದು ಆರೋಪಿಸಿದ್ದಾರೆ.

“ನೀತಿ ಸಂಹಿತೆ ಅನ್ವಯ ಬಿಜೆಪಿ, ರಸ್ತೆ ಬದಿಯಲ್ಲಿ ಮತ್ತು ರಸ್ತೆಯ ಉದ್ದಕ್ಕೂ ಮತ್ತು ಪ್ರಮುಖ ಸ್ಥಳಗಳಲ್ಲಿ ಪಕ್ಷದ ವಿವಿಧ ಪ್ರಚಾರ ಸಾಮಗ್ರಿಗಳು, ಭಾವಚಿತ್ರ, ರಾಜಕೀಯ ಪಕ್ಷದ ಕಮಾನುಗಳು, ಅಭ್ಯರ್ಥಿಗಳ ಭಾವಚಿತ್ರ, ಪಕ್ಷದ ಪ್ರಚಾರ ಚಿಹ್ನೆ ಅಳವಡಿಸಿದ್ದು, ಯಾವುದೇ ಪ್ರಚಾರ ಸಾಮಗ್ರಿಗೆ ಪೂರ್ವಾನುಮತಿ ಪಡೆದಿರುವುದಿಲ್ಲ. ದೊಡ್ಡ ಪ್ರಮಾಣದಲ್ಲಿ ಹಣ ಖರ್ಚು ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳನ್ನು ಯಾವುದೇ ಅನುಮತಿ ಇಲ್ಲದೆ ವಿರೂಪಗೊಳಿಸಲಾಗಿದೆ” ಎಂದಿದ್ದಾರೆ.

“ಸದರಿ ಪ್ರಚಾರ ಕಾರ್ಯಕ್ಕೆ ಸರ್ಕಾರಿ ಸಂಸ್ಥೆಗಳು ಯಾವುದೇ ಹಣ ವೆಚ್ಚ ಮಾಡಲು ಅಥವಾ ಈ ಸಂಸ್ಥೆಗಳ ವತಿಯಿಂದ ಉಸ್ತುವಾರಿ ಮಾಡಲು ಅವಕಾಶ ಇರುವುದಿಲ್ಲ. ಇದು ಒಂದು ರಾಜಕೀಯ ಪಕ್ಷದ ಕಾರ್ಯಕ್ರಮವಾಗಿದ್ದು ಇದಕ್ಕೆ ತಗಲುವ ಎಲ್ಲ ಖರ್ಚು-ವೆಚ್ಚಗಳನ್ನು ಕಾರ್ಯಕ್ರಮ ಆಯೋಜನೆ ಮಾಡುವ ರಾಜಕೀಯ ಪಕ್ಷಗಳು ಭರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಕೂಡಲೇ ಚುನಾವಣಾ ಆಯೋಗವು ಬಿಜೆಪಿಯ ಅನುಮತಿಯಿಲ್ಲದ ಇಂತಹ ಕಾನೂನು ಬಾಹಿರವಾದ ಕ್ರಮಗಳನ್ನು ನಿಯಂತ್ರಿಸಬೇಕು ಮತ್ತು ಬಿಬಿಎಂಪಿ ಅಧಿಕಾರಿಗಳು ಬಿಜೆಪಿ ಪರವಾಗಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡದಂತೆ ನಿರ್ದೇಶನ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...