ಮಂಡ್ಯದಲ್ಲಿ ಭಗವಾಧ್ವಜ | ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕುಮಾರಸ್ವಾಮಿ ಕುತಂತ್ರ: ಸಿದ್ದರಾಮಯ್ಯ

Date:

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅವರು ಸೋಮವಾರ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ. ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ಬರೆದುಕೊಟ್ಟಿದ್ದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ” ಎಂದರು.

ಇಬ್ಬರಿಗೆ ಲಾಠಿ ಚಾರ್ಜ್ ವೇಳೆ ಗಾಯವಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ. ಪೋಲಿಸಿನವರಿಗೆ ಹೊಡೆದರೆ ಏನು ಮಾಡುತ್ತಾರೆ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧ್ವಜದ ವಿಚಾರದಲ್ಲಿ ನಕಲಿ ದಾಖಲೆ ಸೃಷಿಯಾಗಿದ್ದು, ಘಟನೆಗೆ ಜಿಲ್ಲಾಧಿಕಾರಿ ಕಾರಣ, ಅವರು ಅಮಾನತು ಆಗುವವರೆಗೆ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ, “ಕುಮಾರಸ್ವಾಮಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನು ಗೊತ್ತಿದೆ. ಅವರು ಹೇಳಿದ್ದನ್ನು ಈವರೆಗೆ ಸಾಬೀತು ಮಾಡಿದ್ದಾರೆಯೇ? ಸುಮ್ಮನೆ ಆರೋಪ ಮಾಡಬೇಕೆಂದು ಮಾಡುತ್ತಿದ್ದಾರೆ ಎಂದರು. ಕಾನೂನನ್ನು ಯಾರೇ ಕೈಗೆತ್ತಿಕೊಂಡರೆ ಸರ್ಕಾರ ಅದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕುಮಾರಸ್ವಾಮಿ ಈಗ ಬಿಜೆಪಿ ವಕ್ತಾರರು

“ಹೆಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗ ಬಿಜೆಪಿಯ ವಕ್ತಾರರಾಗಿದ್ದಾರೆ. ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯಾತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯಾತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ ಇವರನ್ನು ಏನೆಂದು ಕರೆಯಬೇಕು” ಎಂದು ಪ್ರಶ್ನಿಸಿದರು.

ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ

“ಹೆಸರಿನಲ್ಲಿ ರಾಮ ಇದ್ದರೆ ಸಾಲದು ನಡವಳಿಕೆ ಸರಿಯಾಗಿರಬೇಕು ಎಂದಿರುವ ಕುಮಾರಸ್ವಾಮಿಯವರು ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ ಎಂದು ತಿರುಗೇಟು” ನೀಡಿದರು.

“ಕೋಮುವಿಷಯಗಳನ್ನು ಮುನ್ನೆಲೆಗೆ ತರುತ್ತಾರೆ ನಿನ್ನೆ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶದಿಂದಾಗಿ ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅದಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಯಾವುದೇ ವಿಷಯವಿಲ್ಲದೇ ಇಲ್ಲದಲ್ಲಿ ಅಂಥ ಕಡೆ ಕೋಮುವಿಷಯಗಳನ್ನು ಮುಂದಕ್ಕೆ ತರುತ್ತಾರೆ” ಎಂದರು.

ಸರ್ಕಾರ ಹೇಗೆ ಬೀಳುತ್ತದೆ?

ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಸರ್ಕಾರ ಬಿದ್ದುಹೋಗಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, “ನಾವು 136 ಜನ ಗೆದ್ದಿದ್ದೇವೆ ಶೇ 43% ರಷ್ಟು ಮತಗಳು ನಮಗೆ ಬಂದಿವೆ ಹೇಗೆ ಬಿದ್ದುಹೋಗುತ್ತದೆ” ಎಂದು ಮರುಪ್ರಶ್ನಿಸಿದರು.

ತುಮಕೂರಿನವರೆಗೆ ಮೆಟ್ರೋ ವಿಸ್ತರಣೆಯಾಗಬೇಕೆಂದು ಗೃಹ ಸಚಿವ ಜಿ.ಪರಮೇಶ್ವರ್ ಬೇಡಿಕೆ ಇಟ್ಟುರುವ ಬಗ್ಗೆ ಪ್ರತಿಕ್ರಿಯೆ ನೀಡಿ. ಅದನ್ನು ಸಚಿವ ಸಂಪುಟದಲ್ಲಿಟ್ಟು ತೀರ್ಮಾನಿಸಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...