ಬಿಜೆಪಿ ಸರ್ಕಾರ ಬಿಟ್ ಕಾಯಿನ್ ಬಿಟ್ಟಿದೆ, ನಾವು ಮರು ತನಿಖೆ ಮಾಡುತ್ತೇವೆ: ಸಚಿವ ಪರಮೇಶ್ವರ್‌

Date:

  • ರಾಜ್ಯದಲ್ಲಿ ಸದ್ಯ ಸಿಐಡಿ ಹೆಚ್ಚು ಶಕ್ತಿಯುತವಾಗಿದೆ
  • ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ತನಿಖೆ

ಬಿಟ್ ಕಾಯಿನ್ ಬಗ್ಗೆ ಹಿಂದಿನ ಸರ್ಕಾರ ತನಿಖೆ ಮುಕ್ತಾಯಗೊಳಿಸಿದೆ. ಈಗ ನಾವು ಈ ಬಗ್ಗೆ ಮರುತನಿಖೆ ಮಾಡಿ ಸತ್ಯ ಹೊರಹಾಕುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, “ಬಿಟ್ ಕಾಯಿನ್ ತನಿಖೆಯನ್ನು ಸಿಐಡಿಗೆ ಕೊಡಬೇಕಾ ಅಥವಾ ಬೇರೆ ತನಿಖಾ ಸಂಸ್ಥೆಗೆ ಕೊಡಬೇಕಾ ಎಂಬುದನ್ನು ನಿರ್ಧರಿಸುತ್ತೇವೆ” ಎಂದರು.

“ರಾಜ್ಯದಲ್ಲಿ ಸದ್ಯ ಸಿಐಡಿ ಹೆಚ್ಚು ಶಕ್ತಿಯುತವಾಗಿದೆ. ಬೇರೆ ಬೇರೆ ಏಜೆನ್ಸಿಗಳ ಸಹಕಾರವನ್ನು ಸಿಐಡಿಗೆ ನೀಡಿ, ತನಿಖೆಯನ್ನು ಸಿಐಡಿಗೆ ಕೊಡುವ ಬಗ್ಗೆ ತೀರ್ಮಾನ ಮಾಡಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ಬಾರಿ ಬಿಟ್ ಕಾಯಿನ್ ಹಗರಣ ಕುರಿತು ಸಭೆ ನಡೆಸಲಾಗಿದೆ. ತಾಂತ್ರಿಕವಾಗಿ ಯಾರಿಗೆಲ್ಲ ಹಣ ಹೋಗಿದೆ? ಕಾನೂನುಬಾಹಿರವಾಗಿ ಸಾವಿರಾರು ಕೋಟಿ ಹಣ ವರ್ಗಾವಣೆಯಾಗಿದೆ. ಕೆಲವೊಂದು ವಿಚಾರಗಳನ್ನು ಹೇಳಲು ಆಗಲ್ಲ. ಯಾವ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ತನಿಖೆ ಮಾಡಿಸುತ್ತೇವೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ ನಡೆಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪಿಎಸ್ಐ ಪ್ರಕರಣ

“ಪಿಎಸ್ಐ ಪ್ರಕರಣವನ್ನು ನ್ಯಾಯಾಲಯ ತೀರ್ಪಿನ ಆಧಾರದಲ್ಲಿ ನಿರ್ಧಾರ ಮಾಡುತ್ತೇವೆ. ಯಾವ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಆ ಬಗ್ಗೆ ತನಿಖೆ ಮಾಡಿಸುತ್ತೇವೆ. ಇದೇ ಮಾತನ್ನು ಸಿಎಂ ಕೂಡ ಹೇಳಿದ್ದಾರೆ” ಎಂದರು.

ಫೇಕ್ ನ್ಯೂಸ್ ಹರಡುವವರಿಗೆ ಶಿಕ್ಷೆ

“ಫೇಕ್ ನ್ಯೂಸ್ ಹರಡುವುದರಲ್ಲಿ ಕೆಲವರು ನಿರತರಾಗಿದ್ದಾರೆ. ಅದು ರಾಜಕೀಯ ಇರಬಹುದು ಅಥವಾ ಸಮಾಜದ ಶಾಂತಿ ಕದಡುವ ವಿಚಾರ ಇರಬಹುದು. ಸುಳ್ಳು ಸುದ್ದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದನ್ನು ಗಮನಿಸಿದ್ದೇವೆ. ಫೇಕ್ ನ್ಯೂಸ್ ಹರಡುವವರಿಗೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಸೂಕ್ತ ಕಾನೂನು ಜಾರಿಗೆ ತರಲಾಗುವುದು” ಎಂದು ಇದೇ ವೇಳೆ ಪರಮೇಶ್ವರ್‌ ತಿಳಿಸಿದರು.

“ಸಂಬಂಧವೇ ಇಲ್ಲದ ಫೋಟೋಗಳನ್ನು ಹಾಕಿ ಸಂಬಂಧ ಕಲ್ಪಿಸುವುದು ನಡೆಯುತ್ತಿದೆ. ಸರ್ಕಾರ ರಚನೆ ಆದಮೇಲೆ ಫೇಕ್ ನ್ಯೂಸ್ ಗಮನಿಸಿದ್ದೇವೆ. ಇದನ್ನು ಇಲ್ಲಿಗೆ ನಿಲ್ಲಿಸದಿದ್ದರೆ ಬಹಳಷ್ಟು ಸಮಸ್ಯೆ ಎದುರಿಸಲಿದ್ದಾರೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...