ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಿ ರಾಜ್ಯದಲ್ಲಿ ಬಿಜೆಪಿ ಹಾಳಾಗಿದೆ: ದಿಂಗಾಲೇಶ್ವರ ಸ್ವಾಮೀಜಿ

Date:

  • ಯಡಿಯೂರಪ್ಪ ಕಣ್ಣೀರಿನಲ್ಲಿ ಕೊಚ್ಚಿ ಹೋದ ಬಿಜೆಪಿ ಸರ್ಕಾರ’
  • ‘ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡರು’

“ಯಡಿಯೂರಪ್ಪ ಅವರ ಕಣ್ಣೀರನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಅಕ್ಷರಶಃ ನಿಜವಾಗಿದೆ. ಜೊತೆಗೆ ರಾಜಕೀಯ ವಾಸ್ತವ ಏನು ಎಂಬುದು ಆ ಪಕ್ಷದ ನಾಯಕರಿಗೆ ಅರಿವಾಗಿದೆ” ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಹುಬ್ಬಳ್ಳಿ ತಾಲೂಕಿನ ನೂಲ್ವಿ ಹೊರವಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಅಧಿಕಾರ ಸಿಕ್ಕ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿನ್ನುತ್ತಾರೆ. ಈಗ ಅದನ್ನು ಅನುಭವಿಸುವಂತಾಗಿದೆ” ಎಂದು ತಿಳಿಸಿದರು.

“ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕು ಎಂದಿದ್ದರು. ಆದರೆ ಯಾವುದೋ ಕೆಟ್ಟ ಉದ್ದೇಶ ಅಥವಾ ಸ್ವಾರ್ಥಕ್ಕೆ ತೆಗೆದುಕೊಂಡ ಅಂದಿನ ನಿರ್ಧಾರ ಬಿಜೆಪಿಯ ಈ ಹೀನಾಯ ಸೋಲಿಗೆ ಕಾರಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾಮೀಜಿಗಳು ಗಂಭೀರ ಹೇಳಿಕೆ ನೀಡಿದಾಗ, ಚಿಂತನ‌ ಮಂಥನ ಮಾಡಬೇಕು. ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು, ಖಾವಿಧಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ” ಎಂದು ಕಿಡಿ ಕಾರಿದರು.

“ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೇ ಬಿಜೆಪಿ‌ ಸೋಲಿಗೆ ಮುಖ್ಯ ಕಾರಣ. ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್, ಕೆ.ಎಸ್‌.ಈಶ್ವರಪ್ಪ ಅವರನ್ನು ಕಡೆಗಣಿಸಿ ಬಿಜೆಪಿ ಪರಿತಪಿಸುತ್ತಿದೆ. ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಿ ರಾಜ್ಯದಲ್ಲಿ ಹಾಳಾಗಿದೆ” ಎಂದು ಪರೋಕ್ಷವಾಗಿ ಬಿ ಎಲ್ ಸಂತೋಷ್ ವಿರುದ್ಧ ಕುಟುಕಿದರು.

“ಬ್ರಾಹ್ಮಣರ ಬಗ್ಗೆ ಮಾತನಾಡುವುದಕ್ಕೆ ನನಗೆ ಯಾವುದೇ ಭಯವಿಲ್ಲ. ನನಗೆ ಯಾರ ಅಂಕುಶವೂ ಇಲ್ಲ. ರಾಜ್ಯದ ನಾಯಕರನ್ನು ಬಹಳ‌ ಕೆಟ್ಟ ರೀತಿಯಲ್ಲಿ ‌ನೋಡಿಕೊಂಡರು. ಹಾಗೆಯೇ ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ” ಎಂದು ಹರಿಹಾಯ್ದರು.

“ಕಾಂಗ್ರೆಸ್‌ನಲ್ಲಿ ಈ ಬಾರಿ ಲಿಂಗಾಯತ ನಾಯಕನಿಗೆ ಡಿಸಿಎಂ ಸ್ಥಾನ ‌ನೀಡಬೇಕು. ಸಮರ್ಥ, ಯೋಗ್ಯ ವ್ಯಕ್ತಿ ಮುಖ್ಯಮಂತ್ರಿಯಾಗಬೇಕು. ಇದು ನಮ್ಮ ಅಭಿಪ್ರಾಯ” ಎಂದು ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...