ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ಒಬ್ಬೊಬ್ಬ ಅಭ್ಯರ್ಥಿಗೂ ₹10 ಕೋಟಿ ಸಾಗಿಸುತ್ತಿದೆ: ದಿನೇಶ್ ಗುಂಡೂರಾವ್

Date:

  • ಬಿಜೆಪಿ ಸರ್ಕಾರ, ಐಟಿ ಅಧಿಕಾರಿಗಳ ವಿರುದ್ಧ ಗುಡುಗಿದ ದಿನೇಶ್‌ ಗುಂಡೂರಾವ್‌
  • ʼಸೋಲುವ ಭೀತಿಯಿಂದ ತೊಂದರೆ ಕೊಡಬೇಕು ಎಂಬುದು ಬಿಜೆಪಿ ದುರುದ್ದೇಶ’

ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ರೂ.ಹಣ ನೀಡುತ್ತಿದೆ. ಅದು ನಮಗಿರುವ ಮಾಹಿತಿ ಪ್ರಕಾರ ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಸರ್ಕಾರ ಆ ಹಣ ಸಾಗಿಸುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರಿದ್ದಾರೆ.

ಗಾಂಧಿನಗರದ ತಮ್ಮ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಬಿಜೆಪಿಗೆ ಅಧಿಕಾರಿಗಳೆಲ್ಲರೂ ರಕ್ಷಣೆ ಕೊಡುತ್ತಿದ್ದಾರೆ. ಎಲ್ಲಿಲ್ಲಿ ಹಣ ಇಡಬೇಕು, ಎಲ್ಲಿಗೆ ಕಳುಹಿಸಬೇಕು ಎನ್ನುವುದು ಅವರಿಗೆ ಸರಿಯಾಗಿ ಗೊತ್ತಿದೆ” ಎಂದರು.

“ಐಟಿ, ಇಡಿ, ಸಿಬಿಐ ಬಿಜೆಪಿಯ ಖಾಸಗಿ ವಿಭಾಗಗಳಾಗಿವೆ. ಅಭ್ಯರ್ಥಿಗಳಿಗೆ ಪೊಲೀಸ್ ವಾಹನಗಳಲ್ಲಿ ಅಥವಾ ಐಟಿ ಅಧಿಕಾರಿಗಳೇ ನೇರವಾಗಿ ತಲುಪಿಸಬಹುದು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

“ಐಟಿ, ಇಡಿ ಅಧಿಕಾರಿಗಳ ಬಗ್ಗೆ ಕಾಂಗ್ರೆಸ್‍ಗೆ ಯಾಕೆ ಭಯ ಎಂಬ ಪ್ರಶ್ನೆ ಸಿಎಂ ಬೊಮ್ಮಾಯಿ ಕೇಳಿದ್ದಾರೆ. ಭಯ ನಮಗಿಲ್ಲ, 2018, 2019ರ ಚುನಾವಣೆ ಸಂದರ್ಭದಲ್ಲಿ ನಾವೂ ನೋಡಿದ್ದೇವೆ. ಆಗ ಕಾಂಗ್ರೆಸ್-ಜೆಡಿಎಸ್‍ನವರು ಮಾತ್ರ ಐಟಿ, ಇಡಿ ಕಣ್ಣಿಗೆ ಕಾಣಿಸಿದ್ದು. ಈ ಬಾರಿಯೂ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಸೋಲುವ ಭೀತಿಯಿಂದ ಹೇಗಾದರೂ ತೊಂದರೆ ಕೊಡುವುದು ಬಿಜೆಪಿಯ ದುರುದ್ದೇಶ” ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಗಾದಿಯ ಪೈಪೋಟಿ ವಿಚಾರವಾಗಿ ಪ್ರತಿಕ್ರಿಯಿಸಿ, “ಎಲ್ಲ ಪಕ್ಷದಲ್ಲೂ ಸಿಎಂ ಕುರ್ಚಿಗೆ ಪೈಪೋಟಿ ಇದ್ದೇ ಇರುತ್ತದೆ. ಪೈಪೋಟಿ ಇಲ್ಲದೇ ಹೋದರೆ ಅದು ರಾಜಕೀಯ ಅನ್ನಿಸಿಕೊಳ್ಳುವುದಿಲ್ಲ. ಆದರೆ, ಸ್ಪರ್ಧೆ ಆರೋಗ್ಯಕರವಾಗಿ ಇರಬೇಕು. ಇನ್ನು ಕಾಂಗ್ರೆಸ್‍ನ ಯಾವುದೇ ಹುದ್ದೆಗಳಿಗೆ ಪೈಪೋಟಿ ನಡೆದರೂ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...