ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪ, ಪಿಎಸ್ಐ ಪ್ರಕರಣ ತನಿಖೆ ಮಾಡಲಿ: ಬೊಮ್ಮಾಯಿ‌ ಆಗ್ರಹ

Date:

  • ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ’
  • ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ದೊಡ್ಡ ಜವಾಬ್ದಾರಿ ಇದೆ

ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸವಾಲ್ ಹಾಕಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, “ಬಿಜೆಪಿ ಅವಧಿಯ ಹಗರಣಗಳ ತನಿಖೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಗೆ, ನಾನು ಸ್ಪಷ್ಟವಾಗಿ ಹೇಳುತ್ತಿದ್ದೇ‌ನೆ. ದಯವಿಟ್ಟು ಎಲ್ಲ ತನಿಖೆ ಮಾಡಲಿ. 40% ಕಮೀಷನ್ ಆರೋಪವನ್ನು ನಮ್ಮ ಮೇಲೆ ಅವರು ಹೊರೆಸಿದ್ದಾರೆ. 40% ಆಗಿದೆ ಅಂತ ಅವರು ಪುರಾವೆ ಸಮೇತ ತೋರಿಸಬೇಕು” ಎಂದು ಒತ್ತಾಯಿಸಿದರು.

“ಗುತ್ತಿಗೆದಾರರ ಸಂಘದವರೂ 40% ಕಮೀಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. 40% ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಇನ್ಮೇಲೆ ಕೆಂಪಣ್ಣ ತಮ್ಮೆಲ್ಲ ಸಂಘದವರಿಗೂ 40% ಕಮ್ಮಿಗೆ ಟೆಂಡರ್ ಹಾಕುವಂತೆ ಹೇಳಬೇಕು. ಕೆಂಪಣ್ಣ ಇದುವರೆಗೆ 40% ದಾಖಲೆ ಕೊಡಲಿಲ್ಲ. ಕೋರ್ಟ್‌ಗೂ ಕೊಡಲಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಕಾಂಗ್ರೆಸ್‌ನವರು ಅದರ ಲಾಭ ತೆಗೆದುಕೊಂಡಿದ್ದಾರೆ” ಎಂದು ದೂರಿದರು.

“ನಮ್ಮ ಕಾಲದ, ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ. ಅದರ ಜೊತೆಗೆ ಪಿಎಸ್ಐ ಪ್ರಕರಣವನ್ನೂ ತನಿಖೆ ಮಾಡಲಿ. ಎಲ್ಲ ಪ್ರಕರಣಗಳ ಸತ್ಯ ಹೊರಗೆ ಬರಲಿ. ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ” ಎಂದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ₹2000 ನೋಟು ರದ್ದತಿಯು ಮತ್ತೊಂದು ದುರಂತ ಪ್ರಹಸನಕ್ಕೆ ನಾಂದಿ ಆಗದಿರಲಿ

ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ

“ಗ್ಯಾರಂಟಿ ಸ್ಕೀಂ ಬಗ್ಗೆಯೂ ಬಹಳ ಜನ ಹೇಳಿದ್ದಾರೆ. ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಕಾರ್ಯಕರ್ತರು ಜನರ ಬಳಿ ಹೋಗಿ ಹೇಳಿಲ್ಲ. ಅದರ ಬಗ್ಗೆ ಯಾವುದೋ ಬ್ಯಾಂಕ್ ನಿಂದ, ಕಂಪೆನಿಯಿಂದ ಬಂದವರ ರೀತಿ ಹೋಗಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಸಿ ಆಫೀಸ್ ನಿಂದ ಅಂತ ಕರೆ ಮಾಡಿ ಸುಳ್ಳು ಹೇಳಿದ್ದಾರೆ. ಯಾವ ಡಿಸಿ ಆಫೀಸ್ ಅಂದರೆ, ಡಿಸ್ಟ್ರಿಕ್ಟ್ ಕಾಂಗ್ರೆಸ್ ಆಫೀಸ್ ಅಂತ ಹೇಳಿದ್ದಾರೆ. ಈ ತರಹ ಮೋಸ ಮಾಡಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಎಲ್ಲವೂ ಮುಂದೆ ಬೆಳಕಿಗೆ ಬರಲಿದೆ” ಎಂದರು.

ಲೋಕಸಭಾ ಚುನಾವಣೆ ತಯಾರಿ

“ನಿನ್ನೆ ಬಿಜೆಪಿ ಆತ್ಮಾವಲೋಕ ಸಭೆ ನಡೆಸಿದ್ದೇವೆ. ಎಲ್ಲ ಜಿಲ್ಲೆಗಳಿಂದ ವರದಿ ತರಿಸಿದ್ದೇವೆ. ಒಂದೊಂದು ಜಿಲ್ಲೆಗಳಲ್ಲಿ ಒಂದೊಂದು ರೀತಿ ಚುನಾವಣೆ ನಡೆದಿದೆ. ಕೆಲವು ಕಡೆ ಲೋಪದೋಷಗಳಾಗಿದ್ದು, ಸರಿಪಡಿಸಲು ತೀರ್ಮಾನ ಮಾಡಿದ್ದೇವೆ. ಮುಂದೆ ಪಕ್ಷ ಪುನರ್ ಸಂಘಟನೆ, ಲೋಕಸಭೆ ಚುನಾವಣೆ ತಯಾರಿ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನಾಯಕರು, ಪದಾಧಿಕಾರಿಗಳು ರಾಜ್ಯ ಪ್ರವಾಸ ಮಾಡಲು ತೀರ್ಮಾನಿಸಲಾಗಿದೆ. ಚುನಾವಣೆ ಸೋಲಿಗೆ ಹಲವು ಕಾರಣಗಳನ್ನು ಕಂಡುಕೊಂಡಿದ್ದೇವೆ. ಕೆಲವು ಕಡೆ ಅಭ್ಯರ್ಥಿಗಳು ಕಾರಣ, ಕೆಲವು ಕಡೆ ಸಂಘಟನೆ ಕಾರಣ ಎನ್ನುವುದು ತಿಳಿದು ಬಂದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...