ಸ್ವತಂತ್ರ ‘ಮನ್ಸ’ ಜಾತಿ ಘೋಷಣೆಯಾಗುವವರೆಗೆ ಸಮೀಕ್ಷೆ ಬಹಿಷ್ಕಾರ : ತುಳುನಾಡ್‌ ಮನ್ಸ ಸಮಾಜ ಸೇವಾ ಸಂಘ

Date:

ರಾಜ್ಯದ ಕರಾವಳಿ, ಮಳೆನಾಡು ಹಾಗೂ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಚದುರಿಕೊಂಡಿರುವ ‘ಮನ್ಸ’ ಜಾತಿಯು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿದ ಪ್ರತ್ಯೇಕ ಜಾತಿಯಾಗಿದ್ದು, ಒಳ ಮೀಸಲಾತಿ ಸಮೀಕ್ಷೆಯಲ್ಲಿ ನಮ್ಮನ್ನು ಪ್ರತ್ಯೇಕ ‘ಮನ್ಸ’ ಜಾತಿ ಎಂದು ನೋಂದಣಿಗೆ ಅವಕಾಶ ಮಾಡಿಕೊಡಬೇಕು ಎಂದು ತುಳುನಾಡ್‌ ಮನ್ಸ ಸಮಾಜ ಸೇವಾ ಸಂಘದ ನಾಯಕರು ಆಗ್ರಹಿಸಿದರು.

ಬೆಂಗಳೂರು ಪ್ರೆಸ್‌ಕ್ಲಬ್‌ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ʼತುಳುನಾಡ್‌ ಮನ್ಸ ಸಮಾಜ ಸೇವಾ ಸಂಘʼದ ಗೌರವ ಸಲಹೆಗಾರ ಅಚ್ಯುತ್‌ ಎಸ್‌ ಅವರು, ಮನ್ಸ ಎಂಬುದು ಪರಿಶಿಷ್ಟ ಜಾತಿಗೆ ಸೇರಿದ ಸ್ವತಂತ್ರ ಜಾತಿಯಾಗಿದೆ. ನಾವು ಯಾವುದೇ ಜಾತಿಯ ಉಪ ಜಾತಿ ಅಲ್ಲ. ನಮಗೆ ಯಾವುದೇ ಉಪ ಜಾತಿಯೂ ಇಲ್ಲ. ಹಾಗಾಗಿ ರಾಜ್ಯ ಸರಕಾರ ನಮ್ಮನ್ನು ಪ್ರತ್ಯೇಕ ಮನ್ಸ ಜಾತಿ ಎಂದು ಘೋಷಿಸಬೇಕು. ಆ ವರೆಗೆ ರಾಜ್ಯದಲ್ಲಿ ನಡೆಯುತ್ತಿರುವ ಒಳ ಮೀಸಲಾತಿ ಸಮೀಕ್ಷೆಯನ್ನು ನಾವು ಬಹಿಷ್ಕರಿಸಿದ್ದೇವೆ ಎಂದು ಹೇಳಿದರು.

ಉದ್ಯೋಗ ಹರಸಿಕೊಂಡು ವಲಸೆ ಹೋಗಿರುವ ನಮ್ಮ ಜಾತಿಯ ಜನರು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ನೆಲೆಸಿಕೊಂಡಿದ್ದಾರೆ. ರಾಜ್ಯದಲ್ಲಿ ಸುಮಾರು 5 ಲಕ್ಷಕ್ಕೂ ಅಧಿಕ ಮನ್ಸ ಜಾತಿಯ ಜನಸಂಖ್ಯೆ ಇದೆ. ನಮ್ಮನ್ನು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಪ್ರತ್ಯೇಕ ಮನ್ಸ ಜಾತಿ ಎಂದು ಘೋಷಿಸಿ ನ್ಯಾಯ ಒದಗಿಸಿ ಎಂದು ಕಳೆದ 30 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಅವರು ಖೇದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನ್ಸ ಜಾತಿಯವರು ಪ್ರತ್ಯೇಕ ಅಸ್ಮಿತೆ ಹೊಂದಿರುವ ಜನಾಂಗದವರಾಗಿದ್ದಾರೆ. ಕಾನದ – ಕಟದ  ಎಂಬ ಸಾಂಸ್ಕೃತಿಕ ಅವಳಿ ವೀರರನ್ನು ತಮ್ಮ ಕುಲ ದೈವಗಳು ಎಂದು ಆರಾಧಿಸಿಕೊಂಡು ಬರುತ್ತಿದ್ದೇವೆ. ಮನ್ಸ ಜಾತಿಯನ್ನು ಪ್ರತ್ಯೇಕ ಜಾತಿಯಾಗಿ ಘೋಷಿಸದ ಕಾರಣ ಬೇರೆ ದಾರಿಯಿಲ್ಲದೆ ಅನಿವಾರ್ಯವಾಗಿ ನಮ್ಮ ಹಿರಿಯರು ಪರಿಶಿಷ್ಟ ಜಾತಿಯಲ್ಲಿರುವ ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಎಂಬ ಹೆಸರಿನಲ್ಲಿ ಗುರುತಿಸಿಕೊಂಡು ಅದೇ ಹೆಸರಿನಲ್ಲಿ ನಾವು ಜಾತಿ ದೃಢೀಕರಣ ಪತ್ರ ಪಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೃಷಿ ಕಾರ್ಮಿಕರಾಗಿ ಬದುಕುತ್ತಿರುವ ನಮ್ಮ ಸಮುದಾಯದ ಜನರನ್ನು ಈ ಆಧುನಿಕ ಯುಗದಲ್ಲೂ ಅಸ್ಪೃಶ್ಯರಲ್ಲಿ ಅಸ್ಪೃಶ್ಯರಂತೆ ಕಾಣಲಾಗುತ್ತಿದೆ. ಕಾಂತರಾಜು ಮತ್ತು ಸದಾಶಿವ ಆಯೋಗದಲ್ಲಿಯೂ ನಮ್ಮ ಜಾತಿಯನ್ನು ಮನ್ಸ ಎಂದು ಉಲ್ಲೇಖ ಮಾಡಲಾಗಿದೆ. ಹೀಗಾಗಿ ನಮ್ಮನ್ನು ಪ್ರತ್ಯೇಕ ಜಾತಿ ಎಂದು ಘೋಷಿಸಲು ಸರಕಾರ ಕುಲಶಾಸ್ತ್ರ ಅಧ್ಯಾಯನ ಮಾಡಬೇಕು. ಆ ಬಳಿಕ ನಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿದ ಪ್ರತ್ಯೇಕ ಮನ್ಸ ಜಾತಿ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಒದಗಿಸಲು ರಾಜ್ಯ ಸರಕಾರ ನಡೆಸುತ್ತಿರುವ ಸಮೀಕ್ಷೆಯನ್ನು ಸ್ಥಗಿತಗೊಳಿಸಬೇಕು. ನಮ್ಮನ್ನು ಪ್ರತ್ಯೇಕ ಮನ್ಸ ಜಾತಿ ಎಂದು ಸಮೀಕ್ಷಾ ನಮೂನೆಯಲ್ಲಿ ಸೇರ್ಪಡೆಗೊಳಿಸಿದ ಬಳಿಕ ಸಮೀಕ್ಷೆ ನಡೆಸಬೇಕು. ಆ ಮೂಲಕ ತಲ ತಲಾಂತರದಿಂದ ಶೋಷಣೆಗೆ ಒಳಗಾದ ನಮಗೆ ನ್ಯಾಯ ದೊರಕಲಿದೆ ಎಂದು ಅವರು ತಿಳಿಸಿದರು.

ಒಳ ಮೀಸಲಾತಿಗಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ನಮ್ಮನ್ನು ಮನ್ಸ ಜಾತಿಗೆ ಸೇರಿಸುವಂತೆ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಆದರೆ ನಮ್ಮ ಮನವಿಗೆ ಸ್ಪಂದನೆ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯ ನಡೆಯುತ್ತಿರುವ ಸಮೀಕ್ಷೆಯನ್ನು ನಾವು ಬಹಿಷ್ಕರಿಸಿದ್ದೇವೆ. ಮನ್ಸ ಪ್ರತ್ಯೇಕ ಜಾತಿ ಎಂದು ಘೋಷಿಸಿ ಜಾತಿ ಕಾಲಂನಲ್ಲಿ ನಮ್ಮನ್ನು ಪ್ರತ್ಯೇಕ ಜಾತಿ ಎಂದು ಸೇರಿಸಿದ ಬಳಿಕವಷ್ಟೇ ನಾವು ಸಮೀಕ್ಷೆಯಲ್ಲಿ ಭಾಗವಹಿಸುತ್ತೇವೆ ಎಂದರು.

ಸಂಘದ ಗೌರದ ಅಧ್ಯಕ್ಷ ಎಂ ಶಾಂತಾರಾಂ, ಅಧ್ಯಕ್ಷ ವೆಂಕಣ್ಣ ಕೊಯ್ಯೂರು, ಉಪಾಧ್ಯಕ್ಷ ಸಂಜೀವ, ಪ್ರಧಾನ ಕಾರ್ಯದರ್ಶಿ ಉದಯ, ಸಂಘಟನಾ ಕಾರ್ಯದರ್ಶಿ ಎಂ.ರಮೇಶ್‌ ಬೋಧಿ, ಸಮಿತಿ ಸದಸ್ಯ ಬಿ.ಕೆ.ವಸಂತ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...