ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದ ಜಾತಿ ಲೆಕ್ಕಾಚಾರ ಹೀಗಿದೆ

Date:

ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ಲಿಂಗಾಯತರ ಖೋಟಾದಲ್ಲಿ ಸಚಿವರಾಗಿದ್ದಾರೆ.

ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.

ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ಮುಖ್ಯ ಸಚೇತಕರಾಗಿರುವುದರಿಂದ ಕಡೆ ಗಳಿಗೆಯ ಒತ್ತಡದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ.

ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.

ಹೀಗೆ ಸಚಿವರ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುವಾಗ ಪ್ರಾದೇಶಿಕ ನ್ಯಾಯ ಸಮತೋಲನ ತಪ್ಪದಂತೆಯೂ ಎಚ್ಚರ ವಹಿಸಿರುವುದು ಸಿದ್ದರಾಮಯ್ಯ ಅವರ ಆಯ್ಕೆ ಸಮತೂಕದಲ್ಲಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆತಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ.

ಹಿಂದಿನ ಬಿಜೆಪಿ ಅವಧಿಯಲ್ಲಿ ಬಿಜೆಪಿ ಜಾತಿವಾರು ಪ್ರಾತಿನಿಧ್ಯವನ್ನು ಕಡೆಗಣಿಸಿದ್ದ ಅಸಮಾಧಾನ ಹಲವು ಸಮುದಾಯಗಳಲ್ಲಿ ಹೆಪ್ಪುಗಟ್ಟಿತ್ತು. ಹಾಲಿ ಸಿದ್ದರಾಮಯ್ಯ ಅವರ ಆಯ್ಕೆ ಜಾತಿ ಲೆಕ್ಕಾಚಾರ ಮತ್ತು ಚುನಾಯಿತ ಶಾಸಕರ ಲೆಕ್ಕದಲ್ಲೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಂಡಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...