ಅಜ್ಞಾನಿ ಚಕ್ರವರ್ತಿ ಸೂಲಿಬೆಲೆ, ಅಡ್ನಾಡಿ ಅನಂತಕುಮಾರ್‌ ಹೆಗಡೆ ಏಳು ತಿಂಗಳಿಗೆ ಹುಟ್ಟಿದಂಗೆ ಆಡುತ್ತಾರೆ: ರಮೇಶ್ ಬಾಬು ವಾಗ್ದಾಳಿ

Date:

ಇತ್ತೀಚಿನ ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಮನುಷ್ಯತ್ವ ಮರೆತು ಮಾತನಾಡುತ್ತಿದ್ದಾರೆ. ಈ ರೀತಿ ವರ್ತಿಸುವವರನ್ನು ನಮ್ಮ ಆಡು ಭಾಷೆಯಲ್ಲಿ ಅಡ್ನಾಡಿಗಳು ಎಂದು ಕರೆಯುತ್ತೇವೆ. ಇಲ್ಲಾ ಏಳು ತಿಂಗಳಿಗೆ ಹುಟ್ಟಿದವರು ಎಂದು ಕರೆಯುತ್ತೇವೆ ಎಂದು ಮಾಜಿ ಎಂಎಲ್‌ಸಿ ರಮೇಶ್ ಬಾಬು ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಒಬ್ಬ ರಾಷ್ಟ್ರ ನಾಯಕರನ್ನು ವೈಯಕ್ತಿಕವಾಗಿ ತೇಜೋವಧೆ ಮಾಡಿ, ಏಕವಚನದಲ್ಲಿ ಮಾತನಾಡುವ ಕೆಳ ಮಟ್ಟದ ನಡತೆಯನ್ನು ಬಿಜೆಪಿ ನಾಯಕರು ತೋರಿದ್ದಾರೆ. ವಾರದ ಹಿಂದೆ ಅನಂತಕುಮಾರ್‌ ಹೆಗಡೆಯವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದರು. ಅದರ ಮುಂದುವರೆದ ಭಾಗವಾಗಿ ಸೂಲಿಬೆಲೆಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಮಾತನಾಡಿದ್ದಾರೆ” ಎಂದರು.

“ಅನಂತಕುಮಾರ್‌ ಹೆಗಡೆ, ಸೂಲಿಬೆಲೆ ಹಾಗೂ ಇನ್ನೂ ಅನೇಕ ಬಿಜೆಪಿ ನಾಯಕರು ಸಿದ್ದರಾಮಯ್ಯನವರನ್ನು, ಮಲ್ಲಿಕಾರ್ಜುನ ಖರ್ಗೆಯವರನ್ನು ಡಿ.ಕೆ. ಶಿವಕುಮಾರ್‌ರವರನ್ನು ಟೀಕೆ ಮಾಡಿದರೆ ದೊಡ್ಡ ನಾಯಕರಾಗುತ್ತೇವೆ ಎಂದುಕೊಂಡಿದ್ದಾರೆ. ಆ ಕಾರಣಕ್ಕೆ ಕೆಳ ಮಟ್ಟದ ಟೀಕೆಗಳನ್ನು ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಮತ್ತು ರಾಷ್ಟ್ರದ ರಾಜಕೀಯದಲ್ಲಿ ಐದು ದಶಕಗಳ ಸುದೀರ್ಘ ರಾಜಕೀಯ ಅನುಭವವಿರುವ ಮಲ್ಲಿಕಾರ್ಜುನ ಖರ್ಗೆಯವರು ಯಾರನ್ನು ಕೀಳು ಮಟ್ಟದಲ್ಲಿ ಟೀಕೆ ಮಾಡಿದವರಲ್ಲ. ಇಂದಿಗೂ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಶಿಸ್ತು ಪರಿಪಾಲನೆ ಮಾಡಿಕೊಂಡು ಬಂದಿದ್ದಾರೆ. ಇಡೀ ದೇಶದಲ್ಲಿ ಬೇರೆ ಸಂಸದೀಯ ಪಟುಗಳಿಗೆ ಖರ್ಗೆಯವರು ಉತ್ತಮ ಮಾರ್ಗದರ್ಶಕರಾಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

“ಖರ್ಗೆಯವರ ಬಗ್ಗೆ ಅವರ ಕಾರ್ಯಗಳ ಬಗ್ಗೆ ಟೀಕೆ ಮಾಡಬೇಕಾದರೆ ಸೈದ್ಧಾಂತಿಕವಾಗಿ ಆರೋಗ್ಯಕರವಾಗಿ ಟೀಕೆ ಮಾಡಿದರೆ ನಾವು ಸ್ವೀಕಾರ ಮಾಡುತ್ತೇವೆ. ಹಿಂದೆ ಎಸ್‌ಎಂ ಕೃಷ್ಣರವರು ಕಾಂಗ್ರೆಸ್‌ನಲ್ಲಿದ್ದಾಗ ಸದಾನಂದ ಗೌಡರ ನಗುವಿನ ಬಗ್ಗೆ ಟೀಕೆಯ ಮಾತನಾಡಿ ಮತ್ತೆ ಅವರಲ್ಲಿ ಕ್ಷಮೆಯಾಚಿಸಿದ್ದರು. ದೇವೇಗೌಡರು ಯಡಿಯೂರಪ್ಪನವರ ಬಗ್ಗೆ ಕೀಳು ಭಾಷೆಯಲ್ಲಿ ಮಾತನಾಡಿ ಅವರೂ ಕೂಡ ವಿಷಾದ ವ್ಯಕ್ತಪಡಿಸಿದ್ದರು” ಎಂದು ನೆನಪು ಮಾಡಿಕೊಂಡರು.

“ಅಜ್ಞಾನಿ ಚಕ್ರವರ್ತಿ ಸೂಲಿಬೆಲೆಯಾಗಲಿ, ಅಡ್ನಾಡಿಯಾದಂತಹ ಅನಂತಕುಮಾರ್‌ ಹೆಗಡೆಯಾಗಲಿ ದೊಡ್ಡ ನಾಯಕರಿಗೆ ಕೆಳಮಟ್ಟದ ಭಾಷೆಯಲ್ಲಿ ಮಾತನಾಡಿ ನಾಯಕರಾಗುವ ಆಸೆ ಬಿಡಬೇಕು. ಸೂಲಿಬೆಲೆಯಾಗಲಿ, ಅನಂತ್‌ಕುಮಾರ್‌ ಹೆಗ್ಗಡೆಯಾಗಲಿ ನಾಥೂರಾಮ್‌ ಗೋಡ್ಸೆ ಮನಸ್ಥಿತಿಯಿಂದ ಹೊರಬಂದಿಲ್ಲ. ಇವೇ ಮನಸ್ಥಿತಿಗಳು ಮಲ್ಲಿಕಾರ್ಜುನ ಖರ್ಗೆಯವರ ಮನೆ ಸುತ್ತಾ ಓಡಾಡಿಕೊಂಡು ಅವರಿಗೆ ತೊಂದರೆ ಕೊಡುವ ಕೆಲಸ ಮಾಡಿದ್ದವು” ಎಂದು ಆರೋಪಿಸಿದರು.

“ನೀವು ಕೆನರಾ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ಗೆ ಆಕಾಂಕ್ಷಿಯಾಗಿದ್ದರೆ, ಹೋಗಿ ಅಮಿತ್‌ ಶಾರವರಿಗೋ, ನಡ್ಡಾರವರಿಗೋ, ಮೋದಿಯವರಿಗೊ ಅಡ್ಡಬಿದ್ದರೆ ನಿಮಗೆ ಟಿಕೆಟ್‌ ಸಿಗಬಹುದು. ಸುಮ್ಮನೆ ಖರ್ಗೆಯವರನ್ನು ಟೀಕೆ ಮಾಡುವುದು ಬಿಡಿ. ನೀವು ಮೊದಲು ಈ ದೇಶದ ಪಾಠ ಕಲಿತುಕೊಳ್ಳಿ. ನಾಗಪುರದ ನಿಮ್ಮ ಸಂಘ ಪರಿವಾರದಲ್ಲಿ 52 ವರ್ಷಗಳ ಕಾಲ ಭಾರತದ ತ್ರಿವರ್ಣ ಧ್ಜಜವನ್ನು ಹಾರಿಸಿರಲಿಲ್ಲ. ನಿಮಗೆ ಸೈದ್ಧಾಂತಿಕವಾಗಿ ಖರ್ಗೆಯವರನ್ನು ಎದುರಿಸುವ ಶಕ್ತಿ ಇಲ್ಲದಿದ್ದರೆ ನಿಮ್ಮ ಸೋಲನ್ನು ಒಪ್ಪಿಕೊಳ್ಳಿ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...