ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

Date:

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಕಲ್ಲುತೂರಾಟ ನಡೆಸಿ, ಮತ ಯಂತ್ರಗಳನ್ನು ಸುಟ್ಟು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮತದಾನ ಬಹಿಷ್ಕಾರ ಹಾಕಿದ್ದ ಮತದಾರರ ಮನವೊಲಿಸಲು ಗ್ರಾಮಕ್ಕೆ ತಹಶೀಲ್ದಾರ್ ಆಗಮಿಸಿದ್ದ ವೇಳೆ ಘರ್ಷಣೆ ಆರಂಭವಾಗಿದೆ. ತಹಸೀಲ್ದಾರ್ ಗುರುಪ್ರಸಾದ್ ನೇತೃತ್ವದ ಅಧಿಕಾರಿಗಳ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಅಧಿಕಾರಿಗಳ ಜೊತೆ ಮಾತಿನ‌ ಚಕಮಕಿ ನಡೆಸಿದ್ದಾರೆ.

ಇನ್ನು ಇದೇ ವೇಳೆ ಮತಗಟ್ಟೆ ಧ್ವಂಸ ಮಾಡಿರುವುದಷ್ಟೇ ಅಲ್ಲ, ಘಟನಾ ಸ್ಥಳದಲ್ಲಿ ಲಾಠಿ ಪ್ರಹಾರ ಹಾಗೂ ಕಲ್ಲು ತೂರಾಟ ಕೂಡ ನಡೆದಿದೆ. ಈ ಘಟನೆಯಲ್ಲಿ ಹಲವು ಮಹಿಳೆಯರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗ್ರಾಮದಲ್ಲಿ ಸುಮಾರು 800ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರು ಇಂಡಿಗನತ್ತ ಗ್ರಾಮಕ್ಕೆ ಇಲ್ಲಿಯವರೆಗೂ ಮೂಲಭೂತ ಸೌಲಭ್ಯ ಒದಗಿಸಿಲ್ಲ. ಈ ಹಿನ್ನೆಲೆ, ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್, ತಹಸೀಲ್ದಾರ್ ಗುರು ಪ್ರಸಾದ್, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಇಒ ಉಮೇಶ್, ಪೊಲೀಸ್ ಇನ್ಸ್ ಪೆಕ್ಟರ್ ಜಗದೀಶ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನೀವು ಮತದಾನ ಮಾಡಿ ಎಂದು ಮನವಿ ಮಾಡಿದ್ದರು.

ಈ ವೇಳೆ ಅಧಿಕಾರಿಗಳ ಒತ್ತಾಯದ ಮೇರೆಗೆ ಮತ ಚಲಾವಣೆ ಮಾಡಲು ಕೆಲವು ಮತದಾರರು ಮುಂದೆ ಬಂದಿದ್ದರು. ಈ ಸಂದರ್ಭದಲ್ಲಿ ಮತ್ತೊಂದು ಗುಂಪಿನವರು ಮತದಾನ ಬಹಿಷ್ಕಾರ ಮಾಡಿರುವ ಕುರಿತು ಪೋಲಿಸ್ ಇಲಾಖೆಗೆ ಮಾಹಿತಿ ನೀಡಲಾಗಿದೆ. ಇಷ್ಟಾದರೂ ಏಕೆ ನಮಗೆ ಇಷ್ಟೊಂದು ಒತ್ತಾಯ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು. ಈ ವೇಳೆ ಮಾತಿನ‌ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಕೆಲ ಮಂದಿ ಮತಗಟ್ಟೆಗೆ ನುಗ್ಗಿ ಪೀಠೋಪಕರಣ ಹಾಗೂ ವಿದ್ಯುನ್ಮಾನ ಮತ ಯಂತ್ರ ನಾಶ ಪಡಿಸಿ ಮತಗಟ್ಟೆ ಧ್ವಂಸ ಮಾಡಿದ್ದಾರೆ. ಈ ವೇಳೆ ಪೋಲಿಸರು‌ ಮತ್ತು ಸ್ಥಳೀಯ ವಾಸಿಗಳ ನಡುವೆ ನಡೆದ ಗದ್ದಲದಲ್ಲಿ ಹಲವು‌ ಮಂದಿ ಮಹಿಳೆಯರ ತಲೆಗೆ ಪೆಟ್ಟಾಗಿದೆ.

ಮತ ಹಾಕುವವರಿಗೆ ನೀವು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳು ಹೇಳುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿ, ಮತಯಂತ್ರ ಹಾಗೂ ಮತದಾನಕ್ಕೆ ತೆಗೆದುಕೊಂಡು ಹೋಗಲಾಗಿದ್ದ ಪರಿಕರಗಳನ್ನು ಸುಟ್ಟು ಹಾಕಿದ್ದಲ್ಲದೆ ಶಾಲೆಯ ಕಿಟಕಿ ಹಾಗೂ ಹಲವು ಸಾಮಗ್ರಿಗಳನ್ನು ಧ್ವಂಸ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಲ್ಲುತೂರಾಟದಲ್ಲಿ ತಹಸೀಲ್ದಾರ್ ಗುರುಪ್ರಸಾದ್ ಇನ್ಸ್‌ಪೆಕ್ಟರ್ ಜಗದೀಶ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...