ಯುವತಿ ಜತೆಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ: ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ವಿರುದ್ಧ ದೂರು ದಾಖಲು

Date:

ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದಡಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ವಿರುದ್ದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

2019ರಲ್ಲಿ ಸಂತ್ರಸ್ತ ಯುವತಿಗೆ 17 ವರ್ಷ ಇರುವಾಗಲೇ ಆರೋಪಿ ವರುಣ್ ಮದುವೆಯಾಗುವುದಾಗಿ ನಂಬಿಸಿ, ಆಕೆಯ ಜತೆಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾಳೆ.

ಯುವತಿ ನೀಡಿದ ದೂರಿನಲ್ಲೇನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2016-17ನೇ ಸಾಲಿನಲ್ಲಿ ನ್ಯಾಷನಲ್ ಸೆಂಟರ್ ಆಗಿ ಎಕ್ಸಿಲೆನ್ಸ್​ನಿಂದ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದಲ್ಲಿ ಸಂತ್ರಸ್ತ ಯುವತಿ ತರಬೇತಿ ಪಡೆಯುತ್ತಿದ್ದರು. ಈ ಸಮಯದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾಸ್ಟೆಲ್‌ವೊಂದರಲ್ಲಿ ನೆಲೆಸಿದ್ದಳು.

ಸಾಮಾಜಿಕ ಜಾಲತಾಣದ ಮೂಲಕ ಹಾಕಿ ಆಟಗಾರ ವರುಣ್ ಕುಮಾರ್ ಸಂತ್ರಸ್ತ ಯುವತಿಗೆ ಪರಿಚಯವಾಗಿದ್ದಾನೆ. ಈ ಸಮಯದಲ್ಲಿ ಯುವತಿಯು 17 ವರ್ಷದವಳಾಗಿದ್ದಳು. ಯುವತಿಯ ಜತೆಗೆ ಸ್ನೇಹಿತನಾದ ವರುಣ್ ಬಳಿಕ ಆಕೆಯನ್ನು ಪ್ರೀತಿಸುವುದಾಗಿ ತಿಳಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ?  ಕೆಎಸ್‌ಆರ್‌ಟಿಸಿಯಿಂದ 100 ಹೊಸ ವಿನ್ಯಾಸದ ‘ಅಶ್ವಮೇಧ’ ಬಸ್‌ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

“ಯುವತಿ 17 ವರ್ಷದವಳು ಇರುವಾಗಲೇ 2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜತೆಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಇದಲ್ಲದೇ, ನಿರಂತರ ಐದು ವರ್ಷಗಳ ಕಾಲ ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತ ಯುವತಿ ಜತೆಗೆ ಆರೋಪಿ ವರುಣ್ ದೈಹಿಕ ಸಂಪರ್ಕ ಮಾಡಿದ್ದನು” ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಂದು ವರ್ಷದ ಹಿಂದೆ ಸಂತ್ರಸ್ತ ಯುವತಿಯ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ವರುಣ್ ಸಾಂತ್ವನ ಹೇಳಿ ಹೋಗಿದ್ದನು. ಆ ಘಟನೆ ಬಳಿಕ ವರುಣ್ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...