ನ್ಯಾಯ ಸಿಗದೆ ಇದ್ದಿದ್ದಕ್ಕೆ ನೊಂದ ಯುವಕನೊಬ್ಬ ಕೋರ್ಟ್ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಮಲ್ಲಿಕಾರ್ಜುನ (34) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಕಡೂರು ತಾಲೂಕಿನ ದೇವರಕಾರೇಹಳ್ಳಿಯ ನಿವಾಸಿ. ಜಮೀನು ವಿವಾದದ ಹಿನ್ನೆಲೆ, ಮಲ್ಲಿಕಾರ್ಜುನ್ ನ್ಯಾಯಾಲಯ ಮೆಟ್ಟಿಲೇರಿದ್ದರು.
ನ್ಯಾಯಾಲಯದಲ್ಲಿ ವಿಚಾರಣೆ ಬಳಿಕ ತಮ್ಮ ಪರವಾಗಿ ತೀರ್ಪು ಬಾರದ ಹಿನ್ನೆಲೆ, ಕೋರ್ಟ್ ಆವರಣದಲ್ಲಿಯೇ ವಿಡಿಯೋ ರೆಕಾರ್ಡ್ ಮಾಡಿ ವಿಷ ಸೇವನೆ ಮಾಡಿದ್ದಾನೆ. ಬಳಿಕ, ಅಸ್ವಸ್ಥಗೊಂಡ ಯುವಕನನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
“ತಂದೆಯ ನಿಧನದ ಬಳಿಕ ಜಮೀನು ಲಪಟಾಯಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೇ, ನಮ್ಮ ವಕೀಲರು ಕೂಡ ಇದರಲ್ಲಿ ಶಾಮೀಲಾಗಿದ್ದಾರೆ” ಎಂದು ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಐದು ಕಡೆ ಪ್ರವೇಶ, ನಿರ್ಗಮನ ಜತೆಗೆ 18 ಕಿ.ಮೀ ಸುರಂಗ ರಸ್ತೆ ನಿರ್ಮಾಣ; ಬಿಬಿಎಂಪಿ ಪ್ರಸ್ತಾಪ
ನಾನು ಕೈ ಕಾಲು ಮುಗಿದರೂ ನ್ಯಾಯಾಲಯದಲ್ಲಿ ನನ್ನನ್ನು ಏನು ಕೇಳಲಿಲ್ಲ. ಜಮೀನು ಉಳಿಸಿಕೊಳ್ಳಲು ₹20 ಲಕ್ಷ ಸಾಲ ಮಾಡಿದ್ದೇನೆ. ಅಲ್ಲದೇ, ಈ ಬಗ್ಗೆ ಸಿಎಂ, ಡಿಸಿಎಂ ಹಾಗೂ ಸಚಿವರಿಗೆ ಪತ್ರ ಬರೆದಿದ್ದೇನೆ. ಆದರೂ, ನನ್ನ ಪತ್ರಕ್ಕೆ ಸ್ಪಂದನೆ ಸಿಕ್ಕಿಲ್ಲ. ಅಮ್ಮ ನನ್ನನ್ನು ಕ್ಷಮಿಸು, ನೀನು ಚೆನ್ನಾಗಿರು. ನನ್ನ ಸಾವಿಗೆ ಎಂ.ಬಿ.ಷಡಕ್ಷರಪ್ಪ ತಮ್ಮಂದಿರು, ಅವರ ಅಣ್ಣನ ಮಕ್ಕಳು ಮತ್ತು ರಾಜು ಕಾರಣ” ಎಂದು ಹೇಳಿದ್ದಾರೆ.
“ನನಗೆ ನ್ಯಾಯ ಸಿಕ್ಕಿಲ್ಲ. ಈ ಔಷಧಿ ಕುಡಿದು ನ್ಯಾಯಾಲಯದಲ್ಲೇ ಸಾಯುತ್ತಿದ್ದೇನೆ” ಎಂದು ಮಲ್ಲಿಕಾರ್ಜುನ್ ವಿಷ ಸೇವಿಸಿದ್ದಾರೆ.




