“ಒಂದೇ ಜಾತಿ, ಒಂದೇ ಮತ, ಒಂದೇ ದೈವ ಮನುಜಗೆ’ ಎಂಬ ಮಹತ್ವಪೂರ್ಣ ಸಂದೇಶವನ್ನು ಜಗತ್ತಿಗೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ಚಿತ್ರದುರ್ಗ ಜಿಲ್ಲಾ ಸಮಿತಿ ವತಿಯಿಂದ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಆಚರಿಸಲಾಯಿತು. ಇದೇ ವೇಳೆ ಚಿತ್ರದುರ್ಗ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಅಂದಿನ ಕಾಲದಲ್ಲಿ ಹಿಂದುಳಿದವರನ್ನು ಶೋಷಣೆ ಮಾಡಲಾಗುತ್ತಿತ್ತು. ಜೊತೆಗೆ ದೇವಸ್ಥಾನಗಳಿಗೆ ಪ್ರವೇಶವಿರಲಿಲ್ಲ. ಮೇಲು ಜಾತಿಯವರು ನಡೆಯುವ ದಾರಿಯಲ್ಲಿ ನಡೆಯುವಂತಿರಲಿಲ್ಲ. ಮಹಿಳೆಯರು ಕುಪ್ಪಸ ತೊಡುವಂತಿರಲಿಲ್ಲ. ಆಭರಣ ಧರಿಸುವಂತಿರಲಿಲ್ಲ. ಕಾಲಿಗೆ ಚಪ್ಪಲಿ ಹಾಕುವಂತಿರಲಿಲ್ಲ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸುಧಾರಣೆಗಾಗಿ ಬಂದ ಗುರುಗಳು ಅಸಮಾನತೆ ತೊಲಗಿಸಲು, ಕಂದಾಚಾರ, ಮೂಢನಂಬಿಕೆಗಳನ್ನು ಹೋಗಲಾಡಿಸಿ ಸಾಮಾಜಿಕ ಕ್ರಾಂತಿ ಮಾಡಿದವರು ನಾರಾಯಣ ಗುರು” ಎಂದು ಮುಖಂಡರು ಸ್ಮರಿಸಿದರು.
ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ರಾಮಚಂದ್ರ ಅವರ ಮಾರ್ಗದರ್ಶನದಲ್ಲಿ ರಾಜ್ಯ ಸಮಿತಿ ಹಾಗೂ ಚಿತ್ರದುರ್ಗ ಜಿಲ್ಲಾ ಸಮಿತಿಯು ರಾಜ್ಯ ಹಿರಿಯ ಸಲಹಾಗಾರರನ್ನಾಗಿ ತಿಪ್ಪೇಸ್ವಾಮಿ ಪಿ. ಎಂ. ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷರನ್ನಾಗಿ ಸಾಧಿಕ್ (ಸೀಮೆಎಣ್ಣೆ) ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ದಾದಾಪೀರ್ ಎಸ್. ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷರನ್ನಾಗಿ ಶರಣಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾಗಿ ನಾಗರಾಜ್ ಕೆ, ಚಿತ್ರದುರ್ಗ ಜಿಲ್ಲಾ ಯುವ ಘಟಕದ ನೂತನ ಪದಾಧಿಕಾರಿಗಳಾಗಿ ಯುವ ಘಟಕ ಗೌರವಾಧ್ಯಕ್ಷರನ್ನಾಗಿ ಗೌತಮ್ ಎಚ್, ಯುವ ಘಟಕ ಉಪಾಧ್ಯಕ್ಷರನ್ನಾಗಿ ನಿತಿನ್, ಯುವ ಘಟಕ ಪ್ರಧಾನ ಕಾರ್ಯದರ್ಶಿ ಅಭಿಷೇಕ್, ಯುವ ಘಟಕ ಕಾರ್ಯದರ್ಶಿಯನ್ನಾಗಿ ಮಾರುತಿ, ಯುವ ಘಟಕ ಕಾರ್ಯದರ್ಶಿಯನ್ನಾಗಿ ಗಂಗೂಲಿ, ಯುವ ಘಟಕ ಕಾರ್ಯದರ್ಶಿಯನ್ನಾಗಿ ವೆಂಕಟೇಶ್ ಇವರುಗಳನ್ನು ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಯುವ ಘಟಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೈದ್ಯಕೀಯ ಕಾಲೇಜಿನಲ್ಲಿ ಅನಿವಾಸಿ ಕೋಟಾವು ಶಿಕ್ಷಣ ವಿರೋಧಿ: ಶಿಕ್ಷಣ ಉಳಿಸಿ ಸಮಿತಿ
ಸಭೆಯಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರಾಮಚಂದ್ರ ಕೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಆರ್, ರಾಜ್ಯ ಕಾರ್ಯದರ್ಶಿಗಳಾದ ಮಾರುತಿ ಎನ್, ರಾಜ್ಯ ಕಾರ್ಯದರ್ಶಿ ರೇವಣ್ಣಸಿದ್ದಪ್ಪ. ಬಿ. ಕಲ್ಕುಂಟೆ ರಾಜ್ಯ ಕಾನೂನು ಸಲಹೆಗಾರರಾದ ಗೋಣೆಪ್ಪ ಸಂಗೊಳ್ಳಿ, ಬೆಂಗಳೂರು ವಿಭಾಗ ಅಧ್ಯಕ್ಷರಾದ ನರಸಿಂಹಸ್ವಾಮಿ, ಜಿಲ್ಲಾಧ್ಯಕ್ಷರಾದ ಆರ್ ಶಿವರಾಜ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲೇಶ್, ಯುವ ಘಟಕ ಜಿಲ್ಲಾಧ್ಯಕ್ಷರಾದ ಮಳ್ಳಪ್ಪ, ಎಸ್ಟಿ ಘಟಕ ಜಿಲ್ಲಾಧ್ಯಕ್ಷರಾದ ಓ ರಾಮಣ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ತಿಪ್ಪೇಸ್ವಾಮಿ, ಹಿರಿಯೂರು ತಾಲೂಕು ಅಧ್ಯಕ್ಷರಾದ ಓಂಕಾರ್ ಮೂರ್ತಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕ ಜಿಲ್ಲಾ ಕಾರ್ಯದರ್ಶಿಯಾದ ಮೆಹಬೂಬ್ ಬಾಷ ಸೇರಿದಂತೆ ಇತರರು ಉಪಸ್ಥಿತರಿದ್ದರು.





