ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

Date:

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸಮುದಾಯ ಮಳೆ ಕೋಯ್ಲು (ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌) ಪ್ರಾರಂಭಿಸಲು ಚಿಂತಿಸಿದೆ.

“ಬೆಂಗಳೂರು ನಗರದಲ್ಲಿ ಕಟ್ಟಡಗಳಲ್ಲಿ ಮಳೆ ನೀರು ಕೋಯ್ಲು ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ಕಟ್ಟಡಗಳಲ್ಲಿನ ಜಾಗದ ಕೊರತೆ ಹಾಗೂ ನಿರ್ಲಕ್ಷದಿಂದ ಇದರ ಸರಿಯಾದ ಅನುಷ್ಠಾನ ಸಾಧ್ಯವಾಗಿಲ್ಲ. ಬಹುತೇಕ ಕಡೆಗಳಲ್ಲಿ ಕೇವಲ ಅಗತ್ಯ ಅನುಮತಿ ಪಡೆದುಕೊಳ್ಳಲು ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿದ್ದು, ಮಳೆ ನೀರನ್ನ ಸಂಗ್ರಹಿಸಿ ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ” ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

“ಇದರಿಂದ ಮಳೆಗಾಲದಲ್ಲಿ ಒಳಚರಂಡಿ ವ್ಯವಸ್ಥೆ ಒತ್ತಡಕ್ಕೆ ಒಳಗಾಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಅಲ್ಲದೇ, ಇದರಿಂದ ಅಮೂಲ್ಯ ನೀರು ವ್ಯರ್ಥವಾಗಿ ಹರಿದು ಚರಂಡಿ ಪಾಲಾಗುತ್ತಿದೆ. ನೀರು ವ್ಯರ್ಥವಾಗದಂತೆ ಅಮೂಲ್ಯ ಮಳೆ ನೀರನ್ನ ಸಂಗ್ರಹಿಸಿ ಅದನ್ನ ಅಂತರ್ಜಲ ವೃದ್ದಿಗೆ ಬಳಸಿಕೊಳ್ಳಲು ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ ಯೋಜನೆಯನ್ನು ಜಲಮಂಡಳಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

“ಅಪಾರ ಪ್ರಮಾಣದಲ್ಲಿ ಹರಿದು ಹೋಗುವ ಮಳೆ ನೀರನ್ನ ಸಮರ್ಪಕವಾದ ವ್ಯವಸ್ಥೆಯ ಮೂಲಕ ಕೆರೆಗಳಿಗೆ ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಅದರಲ್ಲೂ ಕೆರೆಗಳಿಂದ 500 ಮೀಟರ್‌ ಸುತ್ತಳತೆಯಲ್ಲಿರುವಂತಹ ಅಪಾರ್ಟ್‌ಮೆಂಟ್‌ಗಳು, ಸಾರ್ವಜನಿಕ ಪ್ರದೇಶಗಳು ಹಾಗೂ ದೊಡ್ಡ ಕಟ್ಟಡಗಳಿಂದ ಪೈಪ್‌ಲೈನ್‌ ಮೂಲಕ ಕೆರೆಗಳಿಗೆ ನೇರವಾಗಿ ಮಳೆ ನೀರನ್ನ ತುಂಬಿಸುವ ಚಿಂತನೆ ನಮ್ಮದಾಗಿದೆ” ಎಂದಿದ್ದಾರೆ.

“ಇದರಿಂದ ಕೆರೆಗಳಿಗೆ ಅಮೂಲ್ಯ ಮಳೆ ನೀರು ತುಂಬುವ ವ್ಯವಸ್ಥೆ ಮಾಡುವುದು ಸಾಧ್ಯವಾಗಲಿದ್ದು, ಅಂತರ್ಜಲ ವೃದ್ದಿಗೂ ಸಹಕಾರಿಯಾಗಲಿದೆ. ಮೊದಲ ಹಂತದಲ್ಲಿ ವರ್ತೂರು, ಬೆಳ್ಳಂದೂರು ಭಾಗದಲ್ಲಿ ಈ ಯೋಜನೆಯನ್ನ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಂಡಳಿ ಚಿಂತನೆ ನಡೆಸಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...