ಯುವಜನರನ್ನು ವಂಚಿಸಿದ ಕಾಂಗ್ರೆಸ್ ಸ‌ರ್ಕಾರ: ಕೋಟಾ ಶ್ರೀನಿವಾಸ ಪೂಜಾರಿ

Date:

ರಾಜ್ಯ ಸರಕಾರವು ಯುವನೀತಿ ಅನುಷ್ಠಾನದ ವೇಳೆ ಕರ್ನಾಟಕದ ಯುವಜನರನ್ನು ವಂಚಿಸಿದೆ ಎಂದು ರಾಜ್ಯ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಆರೋಪಿಸಿದರು.

ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಯುವನೀತಿ ಕುರಿತ ಪ್ರಣಾಳಿಕೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ, ಡಿಪ್ಲೊಮಾ ಮಾಡಿದ ನಿರುದ್ಯೋಗಿಗೆ ಒಂದೂವರೆ ಸಾವಿರ ಕೊಡುವುದಾಗಿ ಹೇಳಿದ್ದರು. ಡಿಗ್ರಿ ಮತ್ತು ಡಿಪ್ಲೊಮಾ ಆದ 40 ಲಕ್ಷ ಜನರಿದ್ದಾರೆ. ಆದರೆ, ಬಿಜೆಪಿ ಯುವನೀತಿ ಅನುಷ್ಠಾನ ವಿಳಂಬದ ಕುರಿತು ಟೀಕಿಸಿದ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ” ಎಂದು ಆಕ್ಷೇಪಿಸಿದರು.

“2022-23ರಲ್ಲಿ ಡಿಗ್ರಿ ಪಡೆದ 4 ಲಕ್ಷ ಯುವಕರು, 48 ಸಾವಿರ ಜನ ಡಿಪ್ಲೊಮಾ ಪಡೆದವರು ಎಂದು ಅಂದಾಜು ಮಾಡಿದ್ದಾರೆ. ಅದರಲ್ಲಿ ಉದ್ಯೋಗ ಪಡೆದವರನ್ನು ಕೈಬಿಟ್ಟು ಹೆಚ್ಚು ಕಡಿಮೆ 3 ರಿಂದ 3.5 ಲಕ್ಷ ನಿರುದ್ಯೋಗಿಗಳಿಗೆ 600- 700 ಕೋಟಿ ಖರ್ಚು ಮಾಡಿ ಯುವನೀತಿ ಅನುಷ್ಠಾನ ಮಾಡಿದ್ದಾಗಿ ಹೇಳಿ ಹೆಮ್ಮೆಪಡುವ ಕೆಲಸ ಮಾಡಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೆ, ಪದವಿ- ಡಿಪ್ಲೊಮಾ ಪಡೆದ ಎಲ್ಲ ನಿರುದ್ಯೋಗಿಗಳಿಗೆ ಭತ್ಯೆ ಕೊಡುವ ಘೋಷಣೆ ಮಾಡಿದ್ದರು. ಈಗ 2022-23ನೇ ಸಾಲು ಎಂದಿದ್ದಾರೆ. ನೈಜ ಮಾನದಂಡದ ಪ್ರಕಾರ ಅನುಷ್ಠಾನ ಆದರೆ, 10 ಸಾವಿರ ಕೋಟಿಯಾದರೂ ಬೇಕಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ? ಎಲ್ಲರನ್ನು ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ?: ಪ್ರಿಯಾಂಕ್ ಖರ್ಗೆ

“ಕೇವಲ ಮತಕ್ಕಾಗಿ ಪಂಚ ಗ್ಯಾರಂಟಿ ಜಾರಿ ಮಾಡಿದ್ದಾರೆ. ನಿಜವಾಗಿ ಗ್ಯಾರಂಟಿ ಅನುಷ್ಠಾನದಲ್ಲಿ ಸರಕಾರ ವಿಫಲವಾಗಿದೆ. ಇನ್ನು ತಮ್ಮ ಪಕ್ಷದಲ್ಲಿ ಯಾವುದೇ ಶಿಸ್ತು ಮತ್ತು ಅಶಿಸ್ತು ಸೇರಿದಂತೆ ಪಕ್ಷದ ಮುಖಂಡರ ಎಲ್ಲ ಚಟುವಟಿಕೆಗಳನ್ನು ರಾಜ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ತಂಡಗಳು ಕಾಲಕಾಲಕ್ಕೆ ಗಮನಿಸಲಿವೆ. ಸಕಾಲದಲ್ಲಿ ಸರಿಯಾದ ನಿರ್ಧಾರ ಆಗಲಿದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಅದರಲ್ಲಿ ಎರಡು ಮಾತಿಲ್ಲ. ಆದರೆ, ಸರಕಾರವು ಹಿಂಸಾಚಾರ ಇಲ್ಲದೆ ಇದನ್ನು ಅನುಷ್ಠಾನಕ್ಕೆ ತರಬೇಕಿದೆ. ಸರಕಾರವು ಹಿಂಸಾಚಾರಕ್ಕೆ ಎಡೆ ಕೊಡದಿರಲಿ. ಆದರೆ, ಕನ್ನಡದ ಸಾರ್ವಭೌಮತೆಗಾಗಿ ಬೀದಿಯಲ್ಲಿ ನಿಂತು ಕೂಗುವ ಪರಿಸ್ಥಿತಿಯೂ ಬರಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...