ಪರಿಶಿಷ್ಟ ಜಾತಿ, ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮಕೈಗೊಂಡಿಲ್ಲ: ಪ್ರಲ್ಹಾದ್‌ ಜೋಶಿ

Date:

ಎಲ್ಲ ಜನರನ್ನು ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್​ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ಪರಿಶಿಷ್ಟ ಜಾತಿ ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಮೇಲೆ ಇದೆಲ್ಲ ಸಾಧ್ಯವಾಯಿತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಭಾರತೀಯ ಜನತಾ ಪಕ್ಷ ಕರ್ನಾಟಕದ ಪರಿಶಿಷ್ಟ ಪಂಗಡಗಳ ಮಹಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಬಸವರಾಜ ಬೊಮ್ಮಾಯಿ ಸರ್ಕಾರ ಇದ್ದಾಗ ಯಡಿಯೂರಪ್ಪ ಅವರ ಆಶೀರ್ವಾದದಿಂದ ಎಸ್ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಸಿದ್ದೇವೆ” ಎಂದರು.

“ಬಿರ್ಸಾ ಮುಂಡಾ ಯಾರು ಅಂತಾ ಮರೆತೇ ಹೋಗಿತ್ತು. ಅವರನ್ನು ಮರೆತು ಹೋಗುವಂತೆ ಮಾಡಿದ್ದ ನೀಚ ಪಾರ್ಟಿ ಕಾಂಗ್ರೆಸ್. ಎಲ್ಲಿ ತಪ್ಪಿದೆ ಅದನ್ನ ಸರಿಪಡಿಸಿಕೊಂಡು ಜನರಿಗೆ ಮಾಹಿತಿ ಕೊಡಲು ನಾವು ಇಲ್ಲಿ ಸೇರಿದ್ದೇವೆ. ಭಗವಾನ್ ಬಿರ್ಸಾ ಮುಂಡಾ ಅವರು ಬ್ರಿಟಿಷರ ನಿದ್ದೆಗೆಡಿಸಿದ್ದ ಪರಿಶಿಷ್ಟ ಪಂಗಡದವರು, ಆದಿವಾಸಿಗಳ ನೇತೃತ್ವ ವಹಿಸಿದ್ದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

“ಎಲ್ಲಿ ತಪ್ಪಾಗಿದೆ ಅಂತಾ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಪಕ್ಷದಲ್ಲಿ ಎಸ್​ಟಿ ಸಮುದಾಯದವರು ಯಾರು ಗೆದ್ದಿಲ್ಲ. ಪರಿಶಿಷ್ಟ ಪಂಗಡದ ಆಕ್ಷನ್ ಕಮಿಟಿಗೆ 1.8 ಲಕ್ಷ ಭೂಮಿಯನ್ನು ವಿತರಿಸಿದ್ದೇವೆ. ಮುದ್ರಾ ಯೋಜನೆಯಡಿ ಎಸ್​ಟಿ ಎಸ್​ಸಿ ಸಮುದಾಯದವರಿಗೆ ಶೇ.50ರಷ್ಟು ಸಾಲ ಸಿಕ್ಕಿದೆ. ಏಕಲವ್ಯ ಶಾಲೆಯನ್ನ ನಿರ್ಲಕ್ಷ್ಯ ಮಾಡಲಾಗಿತ್ತು. 38 ಸಾವಿರ ಶಿಕ್ಷಕರನ್ನು ನೇಮಿಸಿದ್ದು ನರೇಂದ್ರ ಮೋದಿ ಸರ್ಕಾರ” ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಿದ ವಿಚಾರವಾಗಿ ಮಾತನಾಡಿದ ಜೋಶಿ, “ಕಾನೂನು ಸಂವಿಧಾನ‌ ಪ್ರಕಾರವಾಗಿ ಬೊಮ್ಮಾಯಿ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ಮುಂದೆ ಏನಾದರೂ ನಮ್ಮದು ಜವಾಬ್ದಾರಿ ಇದ್ದರೆ ಮಾಡುತ್ತೇವೆ. ಸರ್ಕಾರ ಏನು ಪ್ರಸ್ತಾವನೆ ಕೊಟ್ಟಿದೆ ಎಂದು ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...