ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

Date:

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ ಕೆಪಿಎಸ್‌ ಶಾಲೆಗಳನ್ನು ತೆರೆಯಲು ಹೊರಟಿದೆ. ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ ಸಂಘಟನೆಗೆ ಬಲ ಕೊಡಲು ಹೊರಟಂತೆ ಕಾಣುತ್ತದೆ” ಎಂದು ಶಿಕ್ಷಣ ತಜ್ಞರಾದ ವಿ.ಪಿ. ನಿರಂಜನಾರಾಧ್ಯ ಅಭಿಪ್ರಾಯಪಟ್ಟರು.

ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಇಂದು(ಫೆ.10) ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದನ್ನು ವಿರೋಧಿಸಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

“ಕಾಂಗ್ರೆಸ್‌ನಲ್ಲಿ ಅನೇಕರು ʼಆರ್‌ಎಸ್‌ಎಸ್‌ʼನವರಿದ್ದಾರೆ. ಅದಕ್ಕಾಗಿಯೇ ಎನ್‌ಸಿಇಆರ್‌ಟಿ ಪುಸ್ತಕವನ್ನು ಕರ್ನಾಕಟದ ಮಕ್ಕಳಿಗೆ ಕೊಡಲು ಹೊರಟಿದ್ದಾರೆ. ಈಗಾಗಲೇ ಮ್ಯಾಗ್ನೇಟ್‌ ಶಾಲೆ ಯೋಜನೆ ತಯಾರಿಸಲು 18 ಕೋಟಿ ಹಣವನ್ನು ಕೊಡಲಾಗಿದೆ. ಜವಾಬ್ದಾರಿಯಿಂದ ವರ್ತಿಸಬೇಕಾದ ಸಚಿವರು ಬೇಕಾಬಿಟ್ಟು ಮಾತನಾಡುತ್ತಾರೆ. ಸಚಿವ ಮಧುಬಂಗಾರಪ್ಪ ಯಾವುದೇ ಕಾರ್ಯಕ್ರಮಕ್ಕೆ ಬಂದರೆ, ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿರೋಧ ತೋರಬೇಕು. ನೀವು ಸಚಿವ ಸ್ಥಾನದಲ್ಲಿ ಕೂರಲು ಯೋಗ್ಯರಲ್ಲ ಎನ್ನಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ ಸಂಘಟನೆಯ ಪ್ರಮುಖರಾದ ಸುನಂದಾ ಮಾತನಾಡಿ “6 ಸಾವಿರ ಶಾಲೆಗಳನ್ನು ತೆರೆಯುವ ಆಸೆ ತೋರಿಸಿ, 40ಸಾವಿರ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಇದರ ಜೊತೆಗೆ 69 ಸಾವಿರ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಆತಂಕ ಕಾಡುತ್ತಿದೆ” ಎಂದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ರೀತಿ ಕೆಲಸ ಮಾಡುತ್ತಿವೆ. ಒಂದೆಡೆ ರೈತ ಮತ್ತು ಕಾರ್ಮಿಕ ವಿರೋಧಿ ಕರಾಳ ನೀತಿಗಳ ಮೂಲಕ ದುಡಿಯುವ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ.  ಇನ್ನೊಂದೆಡೆ ಬಡವರ ಮಕ್ಕಳ ಶಿಕ್ಷಣವನ್ನು ನುಂಗಲು ಹುನ್ನಾರ ನಡೆಸುತ್ತಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Shikshana

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಸಂಘಟನೆ (CITU) ಯ ರಾಜ್ಯ ಕಾರ್ಯದರ್ಶಿ ಮಾಲಿನಿ ಮೇಸ್ತ ಅವರು ಮಾತನಾಡಿ “ಕರ್ನಾಟಕದಲ್ಲಿ ಈಗಾಗಲೇ ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆ ಶೇಕಡಾ 22ಕ್ಕೆ ಏರಿದೆ. ಒಂದೇ ಒಂದು ಮಗುವಿದ್ದರೂ ಶಾಲೆ ಮುಚ್ಚುವುದಿಲ್ಲ ಎಂದು ಹೇಳುತ್ತಿರುವ ಶಿಕ್ಷಣ ಮಂತ್ರಿಗಳು ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ 25,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಈ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ಶಾಲೆಯಿಂದ ಹೊರಗೊಳಿಯುತ್ತಾರೆ. ಅಷ್ಟೇ ಅಲ್ಲದೆ 40,000ಕ್ಕೂ ಅಧಿಕ ಬಿಸಿಯೂಟದ ಕಾರ್ಯಕರ್ತರು ಕೆಲಸ ಹೋಗಿ ಅವರ ಬದುಕು ಬೀದಿಗೆ ಬೀಳುತ್ತದೆ. ಇದರ ವಿರುದ್ಧ ಐಕ್ಯ ಹೋರಾಟವೇ ಸರ್ಕಾರವನ್ನು ಹಿಮ್ಮಟಿಸುವ ದಾರಿ” ಎಂದು ಅಭಿಮತ ವ್ಯಕ್ತಪಡಿಸಿದರು.

ಅಂಗನವಾಡಿ-ಬಿಸಿಯೂಟ ಸಂಘಟನೆಯ ರಾಜ್ಯ ಸಂಚಾಲಕರಾದ ಅಮ್ಜದ್ ಮಾತನಾಡಿ, “ಒಂದೆಡೆ ಬಿಜೆಪಿ ಸರ್ಕಾರದ ಎನ್ಇಪಿ-2020 ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರವು ಥೋರಟ್ ಸಮಿತಿ ನೀಡಿರುವ ಎಸ್‌ಇಪಿ ವರದಿಯ ಬಗ್ಗೆ ಚಕಾರ ಎತ್ತುತ್ತಿಲ್ಲ. ಎನ್ಇಪಿ ಮಾದರಿಯಲ್ಲೇ ಶಾಲೆಗಳನ್ನು ಮುಚ್ಚಿ ಇಡೀ ಶೈಕ್ಷಣಿಕ ವಲಯವನ್ನೇ ಮುಗಿಸುವ ಹುನ್ನಾರ ನಡೆಸುತ್ತಿದೆ” ಎಂದು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಸಮಾವೇಶದ ನಂತರ ಕೆಪಿಎಸ್ ಮ್ಯಾಗ್ನೆಟ್ ವಿರೋಧಿಸಿ ಸಭೆಯು ನಿರ್ಣಯವನ್ನು ಕೈಗೊಂಡಿತು.

-ಶಿಕ್ಷಣ ತಜ್ಞರು, ಪೋಷಕರ ಸಂಘದ ಅಧ್ಯಕ್ಷರು, ವಿದ್ಯಾರ್ಥಿ ಸಂಘಟನೆಯ ಮುಖಂಡರೊಂದಿಗೆ ಮುಖ್ಯಮಂತ್ರಿಗಳಿಗೆ ನಿಯೋಗ ಭೇಟಿ ಮಾಡುವುದು.

-ರಾಜ್ಯಾದ್ಯಂತ ಎಲ್ಲ ತಾಲೂಕು, ಹಳ್ಳಿಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಶಾಲೆ ಉಳಿಸಿ ಹೋರಾಟವನ್ನು ಕೈಗೊಳ್ಳುವುದು.

-ಮಾರ್ಚ್ ಬಜೆಟ್ ಅಧಿವೇಶನದ ಪೂರ್ವದಲ್ಲಿ ಎಲ್ಲಾ ಎಡ ವಿದ್ಯಾರ್ಥಿ ಸಂಘಟನೆಗಳಿಂದ ರಾಜ್ಯ ಮಟ್ಟದ ಜಂಟಿ ಬೃಹತ್ ಪ್ರತಿಭಟನೆ ನಡೆಸುವುದು

-ರಾಜ್ಯ ಸರ್ಕಾರವು ಎಡಿಬಿಯಿಂದ ಪಡೆದಿರುವ ಸಾಲ ಮತ್ತು ಷರತ್ತುಗಳನ್ನು ಸಾರ್ಜನಿಕವಾಗಿ ಬಹಿರಂಗಪಡಿಸಬೇಕು.

-ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯುವುದಾಗಿ ಬಜೆಟ್ ಭಾಷಣದಲ್ಲಿ ಪೋಷಿಸಬೇಕು.

ಸಭೆಯಲ್ಲಿ ಎಐಟಿಯುಸಿಯ ಶಾಂತರಾಜ್‌ ಜೈನ್‌, ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಶೋಭಾ ಎಸ್‌, ಎಐವೈಎಫ್‌ ರಾಜ್ಯಾಧ್ಯಕ್ಷರಾದ ಸಂತೋಷ್‌, ಎಐಎಸ್‌ಎಫ್‌ ರಾಜ್ಯ ಕಾರ್ಯದರ್ಶಿ ದೊಡ್ಡ ಬಸವರಾಜ್‌, AISF, SFI, AIDSO ಮತ್ತು AISA ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...