ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆಯೋ ಅದನ್ನು ಕಾಂಗ್ರೆಸ್ ವಿರೋಧಿಸುತ್ತಾ?: ಬೊಮ್ಮಾಯಿ ಸವಾಲು

Date:

  • ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್‌ ನಾಯಕರಿಗೆ ಸಹಿಸಲಾಗುತ್ತಿಲ್ಲ
  • ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ, ಅವರನ್ನು ಇಡಬ್ಲುಎಸ್‌ಗೆ ಸೇರಿಸಿದ್ದೇವೆ

ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್‌ ಹೇಳಲಿ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.

ಸೋಮವಾರ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್ ನವರಿಗೆ ಸಹಿಸಲಿಕ್ಕೆ ಆಗುತ್ತಿಲ್ಲ. ಹೀಗಾಗಿ ಅವರು ವಿರೋಧ ಮಾಡುತ್ತಿದ್ದಾರೆ” ಎಂದರು.

“ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಅವರನ್ನು ಇಡಬ್ಲುಎಸ್ ವರ್ಗದಲ್ಲಿ ಸೇರಿಸಿದ್ದೇವೆ. ಅಲ್ಲಿ ಶೇ.10% ಮೀಸಲಾತಿ ಇದೆ. ನಮ್ಮ ಸಂವಿಧಾನದಲ್ಲಿ ಧಾರ್ಮಿಕ ಆಧಾರದಲ್ಲಿ ಮಿಸಲಾತಿ ಇಲ್ಲ. ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ

“ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದಾರೆ. ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು  ಸ್ಥಾಪಿಸಲಾಗುತ್ತಿದೆ. ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅಭಿವೃದ್ಧಿ ಮಾಡಲಾಗಿದೆ. ರಾಮನಗರದಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಒಳ ಮೀಸಲಾತಿ ಜಾರಿಗೆ ಬೊಮ್ಮಾಯಿ ಸಚಿವ ಸಂಪುಟ ಸದಸ್ಯರಿಂದಲೇ ವಿರೋಧ

ಶಂಕರ್ ನಾಗ್ ಕನಸು ನನಸು

ನಂದಿಬೆಟ್ಟಕ್ಕೆ ರೋಪ್ ವೇ ಆಗಬೇಕೆಂದು ದಿವಂಗತ ನಟ  ಶಂಕರನಾಗ್ ಅವರು ಕಂಡ ಕನಸು ಈಗ ನನಸಾಗುತ್ತಿದೆ.  ರೋಪ್ ವೇ ಮಾಡಿದರೆ  ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕುಲವಾಗುತ್ತದೆ‌. ಈ ಭಾಗದಲ್ಲಿ ಸಾಕಷ್ಟು  ಪ್ರವಾಸಿ ತಾಣಗಳಿವೆ. ನಂದಿ ಬೆಟ್ಟದ  ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ಇದೊಂದು ಪ್ರವಾಸಿ ಸರ್ಕಿಟ್ ಆಗಲು ಅನುಕೂಲವಾಗಲಿದೆ” ಎಂದು ತಿಳಿಸಿದರು.

“ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ‌.  ಇದರಿಂದ ನಮ್ಮ‌ಆತ್ಮವಿಶ್ವಾಸ ಹೆಚ್ಚಾಗಿದೆ‌. ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಸುಧಾಕರ್ ಅವರು ಪ್ರಾಣಾಳಿಕೆ  ಸಮಿತಿ  ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...