ರಾಜ್ಯಾದ್ಯಂತ ಗುಡುಗು ಸಿಡಿಲಿನ ಜತೆಗೆ ಮುಂದುವರೆದ ಮಳೆ

Date:

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ.

ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್‌ಮಂಡ್​​ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ ಹಲವೆಡೆ ತುಂತುರು ಮಳೆಯಾಗಿದೆ. ರಾಜ್ಯದ ಹಲವೆಡೆ ಗುಡುಗು ಸಿಡಿಲಿನ ಜತೆಗೆ ಮಳೆ ಆರಂಭವಾಗಿದೆ.

ರಾಜ್ಯದಲ್ಲಿಯೂ ಕೂಡ ಮಳೆಯ ಅಬ್ಬರ ಜೋರಾಗಿದ್ದು, ಹಾಸನ ಜಿಲ್ಲೆಯಲ್ಲಿ ಸಿಡಿಲಿನಿಂದ ಮೂವರು ಮೃತಪಟ್ಟಿದ್ದರು. ಬಾಗಲಕೋಟೆಯ ಕುಳಗೇರಿ ಕ್ರಾಸ್‌ನಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಮನೆಯ ವಸ್ತುಗಳೆಲ್ಲ ನೀರಿನಲ್ಲಿ ತೇಲಿ ಹೋಗಿವೆ. ಜನರು ರಾತ್ರಿಯೆಲ್ಲಾ ಜಾಗರಣೆ ಮಾಡಿ ಪರದಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಯಲ್ಲಮ್ಮ ದೇವಿಯ ಗುಡ್ಡದಲ್ಲಿ ಗುಡುಗು, ಮಿಂಚು ಸಮೇತ ಜೋರು ಮಳೆಯ ಆಗಮನವಾಗಿದೆ. ಇದರಿಂದ ದೇವಸ್ಥಾನದ ಒಳಕ್ಕೆ ಮಳೆ ನೀರು ಜಲಪಾತದ ನೀರಿನಂತೆ ಭೋರ್ಗರೆದಿದೆ. ದೇವಸ್ಥಾನ ತಗ್ಗು ಪ್ರದೇಶದಲ್ಲಿ ಇರುವುದರಿಂದ ಗುಡ್ಡದ ಮೇಲೆ ಬಿದ್ದ ಮಳೆ ನೀರು ಸರಾಗವಾಗಿ ದೇವಸ್ಥಾನಕ್ಕೆ ನುಗ್ಗಿತು. ಇದರಿಂದ ದೇವಾಲಯ ನೀರಿನಿಂದ ಸಂಪೂರ್ಣ ಜಲಾವೃತವಾಗಿತ್ತು. ದೇವಸ್ಥಾನಕ್ಕೆ ಏಕಾಏಕಿ ಮಳೆನೀರು ನುಗ್ಗಿದ ಕಾರಣ ಭಕ್ತಾದಿಗಳು ಪರದಾಡುವಂತಾಯಿತು. ಅಲ್ಲದೇ, ರಾಮದುರ್ಗದ ಮಾಗನೂರಿನಲ್ಲಿ ಮಳೆಯಿಂದಾಗಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಸಂತ್ರಸ್ತೆ ಅಪಹರಣ ಪ್ರಕರಣ | ಭವಾನಿ ರೇವಣ್ಣ‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಕೋಲಾರದ ಮಾಲೂರು ತಾಲೂಕಿನ ಹುಣಸಿನ ಕೋಟೆಯಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮತ್ತೊಂದೆಡೆ, ಶ್ರೀನಿವಾಸಪುರ‌ ತಾಲೂಕಿನಲ್ಲಿ ರೈಲ್ವೆ ಅಂಡರ್ ಪಾಸ್ ಜಲಾವೃತಗೊಂಡಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಚಾಮರಾಜನಗರದ ಅಂಡಿಪಾಳ್ಯ ಬಳಿ ಜಡೆತಡಿ ಹಳ್ಳ ಉಕ್ಕಿ ಹರಿದಿದೆ. ಇದರಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಬೆಂಗಳೂರಿನಲ್ಲಿ ಗುರುವಾರ ರಾತ್ರಿಯೂ ಕೂಡ ಮಳೆಯಾಗಿದೆ. ಜೂನ್ 7ರಂದು ಬೆಳಗ್ಗೆ ಕೂಡ ಜಿಟಿ ಜಿಟಿ ಮಳೆ ಇದೆ. ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ‘ಯೆಲ್ಲೋ ಅಲರ್ಟ್’​ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...