ರೇಣುಕಸ್ವಾಮಿ ಕೈಮುಗಿದ ಫೋಟೊ ಸಂಗ್ರಹ: ನಟ ದರ್ಶನ್ ವಿರುದ್ಧ ಪ್ರಬಲ ಸಾಕ್ಷ್ಯ?

Date:

ಚಿತ್ರದುರ್ಗದ ರೇಣುಕಸ್ವಾಮಿ ಅವರು ಕೊಲೆಗೀಡಾಗುವ ಮುನ್ನ, ಹಲ್ಲೆಕೋರರ ಎದುರು ಕೈಮುಗಿದು ಕಣ್ಣೀರಿಡುತ್ತಿರುವ ಫೋಟೊ, ನಾಲ್ಕು ಮತ್ತು ಎಂಟು ಸೆಕೆಂಡಿನ ಎರಡು ವಿಡಿಯೊಗಳನ್ನು ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್‌) ತಜ್ಞರು ಮರು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 17 ಆರೋಪಿಗಳಿಂದ ಜಪ್ತಿ ಮಾಡಲಾಗಿದ್ದ ಮೊಬೈಲ್‌ನಲ್ಲಿದ್ದ ದತ್ತಾಂಶ ಮರು ಸಂಗ್ರಹಕ್ಕೆ ಹೈದರಾಬಾದ್‌ ಹಾಗೂ ಬೆಂಗಳೂರಿನ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿತ್ತು. ಪ್ರದೂಷ್‌ ಸೇರಿದಂತೆ ಇಬ್ಬರು ಆರೋಪಿಗಳ ಐ–ಫೋನ್‌ನಲ್ಲಿದ್ದ ದತ್ತಾಂಶವನ್ನು ಎಫ್ಎಸ್‌ಎಲ್‌ ತಜ್ಞರು ಮರುಸಂಗ್ರಹಿಸಲು ಯಶಸ್ವಿ ಆಗಿದ್ದಾರೆ.

ಆರೋಪಿ ದರ್ಶನ್‌, ಪವಿತ್ರಾಗೌಡ ಅವರ ಮೊಬೈಲ್‌ನಲ್ಲಿ ದತ್ತಾಂಶ ಮರುಸಂಗ್ರಹ ಕಾರ್ಯ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್‌ 8ರ ಮಧ್ಯಾಹ್ನ ಚಿತ್ರದುರ್ಗದಿಂದ ರೇಣುಕಸ್ವಾಮಿ ಅವರನ್ನು ಅಪಹರಿಸಿ ನಗರದ ಪಟ್ಟಣಗೆರೆಯ ಶೆಡ್‌ಗೆ ಕರೆತಂದಿದ್ದ ಆರೋಪಿಗಳು, ಬ್ಯಾಟ್‌ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಎಲೆಕ್ಟ್ರಿಕ್‌ ಶಾಕ್‌ ನೀಡಿ ಹತ್ಯೆ ಮಾಡಿದ್ದರು. ನಂತರ, ರಾಜಕಾಲುವೆಗೆ ಮೃತದೇಹ ಎಸೆದಿದ್ದರು. ಶೆಡ್‌ನಲ್ಲಿ ಹಲ್ಲೆ ನಡೆಸುವಾಗ ಕೆಲವು ಆರೋಪಿಗಳು ಮೊಬೈಲ್‌ನಲ್ಲಿ ಫೋಟೊ ತೆಗೆದುಕೊಂಡಿದ್ದರು. ವಿಡಿಯೊ ಚಿತ್ರೀಕರಿಸಿಕೊಂಡಿದ್ದರು. ರೇಣುಕಸ್ವಾಮಿ ಮೃತಪಟ್ಟ ಮೇಲೆ ಮೊಬೈಲ್‌ ಶಾಪ್‌ಗೆ ತೆರಳಿ ಎಲ್ಲ ಫೋಟೊ ಹಾಗೂ ವಿಡಿಯೊ ಡಿಲಿಟ್‌ ಮಾಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

ದರ್ಶನ್‌ ವಿರುದ್ಧ ಪ್ರಬಲ ಸಾಕ್ಷ್ಯ?

ಕೊಲೆ ಪ್ರಕರಣದಲ್ಲಿ ತನಿಖೆ ನಡೆಸಿದ ಪಶ್ಚಿಮ ವಿಭಾಗದ ಪೊಲೀಸರಿಗೆ ನಟ ದರ್ಶನ್‌ ಅವರ ವಿರುದ್ಧ ಪ್ರಬಲವಾದ ಸಾಕ್ಷ್ಯಗಳು ಲಭಿಸಿವೆ ಎನ್ನಲಾಗಿದೆ. ತಾಂತ್ರಿಕ ಸಾಕ್ಷ್ಯಾಧಾರ, ಎಫ್‌ಎಸ್ಎಲ್‌ ವರದಿ ಸಹಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ.

‘ಕೊಲೆ ಪ್ರಕರಣದ ಆರಂಭಿಕ ತನಿಖೆಯಲ್ಲಿ ಲಭಿಸಿದ ಸಾಕ್ಷ್ಯಾಧಾರ ದಂತೆ ಪವಿತ್ರಾಗೌಡ ಅವರನ್ನು ಮೊದಲನೇ ಆರೋಪಿ, ದರ್ಶನ್‌ ಅವರನ್ನು ಎರಡನೇ ಆರೋಪಿ ಮಾಡಿ ನ್ಯಾಯಾಲಯಕ್ಕೆ ರಿಮ್ಯಾಂಡ್‌ ಅರ್ಜಿ ಸಲ್ಲಿಸಲಾಗಿತ್ತು. ಪ್ರದೂಷ್‌ ಐ–ಫೋನ್‌ನಲ್ಲಿ ಎರಡು ವಿಡಿಯೊಗಳು ಮರುಸಂಗ್ರಹವಾಗಿದ್ದು, ಇವು ದರ್ಶನ್‌ ಪಾತ್ರದ ಬಗ್ಗೆ ಪ್ರಬಲ ಸಾಕ್ಷ್ಯವಾಗಿವೆ. ಈಗ ದರ್ಶನ್‌ ಅವರನ್ನೇ ಮೊದಲ ಆರೋಪಿಯಾಗಿಸಿ ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ’ ಎಂದು ಮೂಲಗಳು ತಿಳಿಸಿವೆ.

ಕೊಲೆ ಪ್ರಕರಣದ ತನಿಖೆಯು ಅಂತಿಮ ಹಂತಕ್ಕೆ ಬಂದಿದ್ದು, ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಸೆಪ್ಟೆಂಬರ್‌ ಮೊದಲ ವಾರದಲ್ಲಿ 24ನೇ ಎಸಿಸಿಎಂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ಬೆಂಗಳೂರು ಹಾಗೂ ಹೈದರಾಬಾದ್‌ನ ಎಫ್ಎಸ್‌ಎಲ್‌ ನಿಂದ ಶೇ 70ರಷ್ಟು ವರದಿ ಗಳು ತನಿಖಾಧಿಕಾರಿಗಳ ಕೈಸೇರಿವೆ. ಉಳಿದ ವರದಿಗಳು ಬಂದ ಕೂಡಲೇ ಅಂತಿಮ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತನಿಖಾ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧುರಂಧರ್ 2 ನೋಡಿ, ಹಣ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ; ನಟಿ ರಮ್ಯಾ ಖಡಕ್ ಹೇಳಿಕೆ

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಹಾಗೂ ಆದಿತ್ಯ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

‘ಬೋಳು ತಲೆಯೇ ನನ್ನ ಬಲ, ಎಷ್ಟೇ ಹಣ ಕೊಟ್ಟರೂ ಕೂದಲು ನಾಟಿ ಬೇಡ’: ನಟ ಅನುಪಮ್ ಖೇರ್

'ನಾನು ಪ್ರತಿಯೊಂದು ಕೂದಲು ನಾಟಿ ಮಾಡುವ ಕಂಪನಿ ಮತ್ತು ವೈದ್ಯರ ಪಾಲಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...