ಸೈಬರ್ ವಂಚನೆ | ರಿಯಾಯಿತಿ ದರದಲ್ಲಿ ಶೇರು ನೀಡುವುದಾಗಿ ನಂಬಿಸಿ ಉದ್ಯಮಿಗೆ ₹6 ಕೋಟಿ ವಂಚನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಇದೀಗ, ಕಂಪನಿ ಷೇರು ಮತ್ತು ಐಪಿಒಗಳನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಫೇಸ್‌ಬುಕ್‌ನಲ್ಲಿ ಪರಿಚಯವಾದವರನ್ನು ನಂಬಿದ ಉದ್ಯಮಿಯೊಬ್ಬರು ಬರೋಬ್ಬರಿ ₹6.01 ಕೋಟಿ ಕಳೆದುಕೊಂಡ ಘಟನೆ ನಡೆದಿದೆ.

ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗೋಲ್ಡ್ಮನ್ ಸ್ಯಾಚ್ಸ್ ಇಕ್ವಿಟಿ ಅಸೆಟ್ ಮ್ಯಾನೇಜ್ಮೆಂಟ್ ಗ್ರೂಪ್ – 109, EQT ಕ್ಲಬ್ Q92 ಮತ್ತು ಸ್ಕೈರಿಮ್ ಕ್ಯಾಪಿಟಲ್-ಎಮಿಲಿ ಕುನಾಲ್ ಕಂಪನಿಯ ಪ್ರತಿನಿಧಿಗಳೆಂದು ಫೇಸ್‌ಬುಕ್ ಮೂಲಕ 72 ವರ್ಷದ ದೂರದಾರ ಉದ್ಯಮಿಗೆ ಆರೋಪಿಗಳು ಪರಿಚಯವಾಗುತ್ತಾರೆ.

72 ವರ್ಷದ ಉದ್ಯಮಿಗೆ ನಾನಾ ಕಂಪನಿಗಳ ‍ಷೇರುಗಳು ಹಾಗೂ ಐಪಿಒಗಳನ್ನು ರಿಯಾಯಿತಿ ದರದಲ್ಲಿ ಕೊಡುವುದಾಗಿ ನಂಬಿಸಿದ್ದಾರೆ. ಫೇಸ್‌ಬುಕ್‌ ನಂತರ ವಾಟ್ಸ್‌ಆಪ್‌ನಲ್ಲಿ ಸಂಪರ್ಕದಲ್ಲಿದ್ದ ಆರೋಪಿಗಳು ಫೆಬ್ರುವರಿ 8 ರವರೆಗೆ ಹಂತ ಹಂತವಾಗಿ ₹6.01 ಕೋಟಿ ವರ್ಗಾವಣೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇರಳದ ಹೂಡಿಕೆದಾರರೊಬ್ಬರು ಈ ಕಂಪನಿಗಳ ವಿರುದ್ಧ ದೂರು ಸಲ್ಲಿಸಿರುವುದು ತಿಳಿದು ಬಂದಾಗ ಇದು ವಂಚನೆಯ ಜಾಲ ಎಂದು ಅನುಮಾನಗೊಂಡಿದ್ದಾರೆ. ಬಳಿಕ, ಉದ್ಯಮಿ ಆರೋಪಿಗಳಿಗೆ ತಮ್ಮ ಹಣ ವಾಪಸ್ ಮಾಡುವಂತೆ ಕೇಳಿದ್ದಾರೆ. ಆರೋಪಿಗಳು ಹಣ ನೀಡದೇ, ವಿಳಂಬ ಮಾಡುತ್ತಿವೆ” ಎಂದು 72 ವರ್ಷದ ಉದ್ಯಮಿ ಠಾಣೆಗೆ ದೂರು ನೀಡಿದ್ದಾರೆ.

“ಆರೋಪಿಗಳು ಉದ್ಯಮಿಗೆ ಷೇರುಗಳು, ಐಪಿಒಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 26 ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ. ಪ್ರತಿನಿತ್ಯ ಈ ರೀತಿ ಷೇರು ಟ್ರೇಡಿಂಗ್ ಹೆಸರಿನಲ್ಲಿ ವಂಚಿಸುತ್ತಿರುವ 3ರಿಂದ 4 ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ಪರಿಚಯವಾಗುವ ಆರೋಪಿಗಳು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಆಹ್ವಾನಿತರಾಗುತ್ತಾರೆ. ವಾಟ್ಸ್‌ಆಪ್‌ ಗ್ರೂಪ್‌ನಲ್ಲಿರುವ ಉಳಿದ ಸದಸ್ಯರು ಹೊಸದಾಗಿ ಬಂದವರನ್ನು ಹುರುದುಂಬಿಸುವ ಸಂದೇಶ ಕಳುಹಿಸುತ್ತಾರೆ. ಬೇರೆ ಬೇರೆ ಖಾತೆಗಳಿಗೆ ಹಣ ಹಾಕಿಸಿಕೊಂಡು ಲಾಭ ಬಂದಂತೆ ತೋರಿಸಿ ವಂಚಿಸುತ್ತಿದ್ದಾರೆ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಾರ್ಚ್‌ 4ರಿಂದ ಸಾರಿಗೆ ನೌಕರರ ಅಹೋರಾತ್ರಿ ಮುಷ್ಕರ

ಸದ್ಯ ಹಣ ಕಳೆದುಕೊಂಡಿರುವ ಉದ್ಯಮಿ ಆರೋಪಿ‌ ಕಂಪನಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...