ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಿಗೆ ನಿತ್ಯ 1 ಲಕ್ಷ ಲೀಟರ್‌ ಕಾವೇರಿ ನೀರು ಉಚಿತ ಸರಬರಾಜು: ಜಲಮಂಡಳಿ ಅಧ್ಯಕ್ಷ

Date:

“ಬೆಂಗಳೂರಿನ ಬಹುತೇಕ ಪ್ರದೇಶಗಳಿಗೆ ಭೇಟಿ ನೀಡಿ, ನೀರಿನ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಬಡ ಜನರು ಹೆಚ್ಚಾಗಿ ವಾಸಿಸುವ ಕೊಳಚೆ ಪ್ರದೇಶಗಳು ಹಾಗೂ ಜನಸಾಂದ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿನಿತ್ಯ ಈ ಪ್ರದೇಶಗಳಿಗೆ 1 ಲಕ್ಷ ಲೀಟರ್‌ಗಳಷ್ಟು ಕುಡಿಯುವ ನೀರನ್ನ ಉಚಿತವಾಗಿ ಸರಬರಾಜು ಮಾಡಲಾಗುತ್ತಿದೆ” ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ. ವಿ.ರಾಮ್‌ ಪ್ರಸಾತ್ ಮನೋಹರ್ ತಿಳಿಸಿದರು.

ನಗರದ ನಾಯಂಡಹಳ್ಳಿ-ಪಂತರಪಾಳ್ಯದ ಅಂಬೇಡ್ಕರ್ ಸ್ಲಂ, ಗಾಂಧಿನಗರ ಮತ್ತು ಬಂಗಾರಪ್ಪ ನಗರ ಸ್ಲಂಗಳಿಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿ, ಕುಡಿಯುವ ನೀರಿನ ಪೂರೈಕೆಯ ಬಗ್ಗೆ ಬಗ್ಗೆ ಪರಿಶೀಲನೆ ನಡೆಸಿದರು.

“ಅಂಬೇಡ್ಕರ್ ಸ್ಲಂ ನಲ್ಲಿ 34 ಬ್ಲಾಕ್‌ಗಳಲ್ಲಿ 1,088 ಮನೆಗಳಿದ್ದು, ಸುಮಾರು 8 ಸಾವಿರ ಜನರು ವಾಸಿಸುತ್ತಿದ್ದಾರೆ. ಸ್ಲಂ ಬೋರ್ಡ್ ವತಿಯಿಂದ ಕೊರೆಸಲಾಗಿದ್ದ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿದಿದೆ. 22 ಸಿಂಟೆಕ್ಸ್‌ ಟ್ಯಾಂಕ್‌ಗಳನ್ನು ಈ ಪ್ರದೇಶಧ ವಿವಿಧೆಡೆ ಇಡಲಾಗಿದ್ದು, ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನ ಪೂರೈಸಲಾಗುತ್ತಿದೆ. ಪ್ರತಿ ದಿನ ಎರಡು ಬಾರಿ ಸಿಂಟೆಕ್ಸ್‌ ಟ್ಯಾಂಕ್‌ಗಳಿಗೆ ನೀರು ತುಂಬಿಸಲಾಗುತ್ತಿದ್ದು, ಪ್ರತಿ ದಿನ ಒಂದು ಲಕ್ಷ ಲೀಟರ್ ನೀರು ಪೂರೈಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಪ್ರದೇಶದಲ್ಲಿರುವವರು ಖಾಸಗಿ ಟ್ಯಾಂಕರ್‌ಗಳನ್ನು ಅವಲಂಬಿಸಿಲ್ಲ, ಅವರಿಗೆ ಆರ್ಥಿಕವಾಗಿ ಹೊರೆ ಆಗಬಾರದು ಎನ್ನುವ ಹಿನ್ನಲೆಯಲ್ಲಿ ಜಲಮಂಡಳಿ ವತಿಯಿಂದಲೇ ಉಚಿತವಾಗಿ ಕುಡಿಯುವ ನೀರು ಪೂರೈಸಲಾಗುತ್ತಿದೆ” ಎಂದರು.

“ಅಂಬೇಡ್ಕರ್ ಸ್ಲಂಗೆ ದಿನಕ್ಕೆ ಎರಡು ಬಾರಿ ನೀರು ಸರಬರಾಜು ಮಾಡಲಾಗುತ್ತಿದೆ. ಹೆಚ್ಚಿನ ನೀರಿನ ಬೇಡಿಕೆ ಬರುತ್ತಿದ್ದು, ಆದ್ಯತೆ ನೋಡಿಕೊಂಡು ತಕ್ಷಣವೇ ನೀರು ಪೂರೈಸಲಾಗುವುದು” ಎಂದು ಭರವಸೆ ನೀಡಿದರು.

“ನಗರದ ಜನತೆಗೆ ಕುಡಿಯುವ ನೀರನ್ನ ಪೂರೈಸುವ ದೃಷ್ಟಿಯಿಂದ ಜಲಮಂಡಳಿಯ ಶ್ರಮಜೀವಿಗಳು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಕಾವೇರಿ ನೀರು ಸರಬರಾಜು ಆಗುವ ಮಾರ್ಗದಲ್ಲಿ ಮಾರ್ಚ್ 23ರಂದು ರಾತ್ರಿ ಅಡಚಣೆ ಉಂಟಾಗಿತ್ತು. ರಾತ್ರೋರಾತ್ರಿ ನಮ್ಮ ಸಿಬ್ಬಂದಿ ವರ್ಗದವರು ಈ ದುರಸ್ತಿ ಕಾರ್ಯವನ್ನು ಕೈಗೊಳ್ಳುವುದರ ಮೂಲಕ ನೀರು ಸರಾಗವಾಗಿ ಹರಿಯಲು ನೆರವಾದರು. ಇದರಿಂದ ಆಗಬಹುದಾಗಿದ್ದ ನೀರಿನ ಅಭಾವವನ್ನು ತಪ್ಪಿಸಿದ್ದಾರೆ. ಇದಕ್ಕೆ ಕಾರಣರಾದ ಜಲಮಂಡಳಿಯ ಶ್ರಮಜೀವಿಗಳಿಗೆ ನಮನಗಳು” ಎಂದು ಹೇಳಿದರು.

“ನಗರದ ಹೊರ ವಲಯದ 110 ಹಳ್ಳಿಗಳಲ್ಲಿ ಕಾವೇರಿ ನೀರಿನ ಸಂಪರ್ಕವಿಲ್ಲ. ಈ ಪ್ರದೇಶಗಳು ಬೋರ್‌ವೆಲ್‌ಗಳನ್ನೇ ಅವಲಂಬಿಸಿವೆ. ಇಂತಹ ಕಡೆ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಬಿಡಬ್ಲ್ಯುಎಸ್‌ಎಸ್‌ಬಿ-ಬಿಬಿಎಂಪಿ ಜಂಟಿಯಾಗಿ ನೀರು ಪೂರೈಕೆ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉತ್ತರಪ್ರದೇಶ | ಹೋಳಿ ಆಚರಣೆ ವೇಳೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ; ನಾಲ್ವರ ಬಂಧನ

ಕೆಂಗೇರಿಯ ಗಾಂಧಿನಗರ ಹಾಗೂ ರಾಜರಾಜೇಶ್ವರಿ ನಗರದ ಬಂಗಾರಪ್ಪ ನಗರದ ಸ್ಲಂಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಅಗತ್ಯವಿದ್ದಲ್ಲಿ ಹೆಚ್ಚುವರಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ರಾಮ್‌ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಮಂಡಳಿಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...