ದರ್ಶನ್ ಪ್ರಕರಣ | ಮೊಬೈಲ್‌ಗಾಗಿ ಪೌರಕಾರ್ಮಿಕರನ್ನು ರಾಜಕಾಲುವೆಗೆ ಇಳಿಸಿದ ಪೊಲೀಸರು; ದಸಂಸ ಖಂಡನೆ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷನಾಶದ ಸಲುವಾಗಿ ಮೃತ ವ್ಯಕ್ತಿ ಬಳಕೆ ಮಾಡುತ್ತಿದ್ದ ಮೊಬೈಲ್‌ ಅನ್ನು ನಟ ದರ್ಶನ್ ಮತ್ತು ಆರೋಪಿಗಳ ತಂಡ ರಾಜಕಾಲುವೆಗೆ ಎಸೆದಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆ ಮೊಬೈಲ್‌ಗಾಗಿ ಮಲಮೂತ್ರ ತುಂಬಿದ ರಾಜಕಾಲುವೆಗೆ ಪೌರಕಾರ್ಮಿಕರನ್ನು ಇಳಿಸಿದ್ದಾರೆ. ಪೊಲೀಸರ ನಡೆಯನ್ನು ದಸಂಸ ಖಂಡಿಸಿದೆ.

ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ದೂರು ನೀಡಿವೆ. ಮಲಮೂತ್ರದೊಂದಿಗೆ ತುಂಬಿದ ಕೊಳಚೆ ರಾಜಕಾಲುವೆಗೆ ಅಮಾಯಕ, ಅವಿದ್ಯಾವಂತ ಪರಿಶಿಷ್ಟ ಜಾತಿಯ ಪೌರಕಾರ್ಮಿಕರನ್ನು ಯಾವುದೇ ಸುರಕ್ಷಿತ ವಿಧಾನಗಳನ್ನು ಅಳವಡಿಸಿಕೊಳ್ಳದೇ ಕೊಲೆ ಪ್ರಕರಣದ ತನಿಖೆಯಲ್ಲಿ ಬಳಕೆ ಮಾಡಿಕೊಂಡಿರುವುದು ಕಾನೂನು ಉಲ್ಲಂಘನೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿವೆ.

ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಎಂಬಾತನನ್ನು ಕೊಲೆ ಮಾಡಿ ಸುಮನಹಳ್ಳಿ, ಸುಂಕದಕಟ್ಟೆ ರಾಜಕಾಲುವೆ ಬಳಿ ಮೃತದೇಹವನ್ನು ಎಸೆಯಲಾಗಿತ್ತು. ಮಾತ್ರವಲ್ಲದೆ, ಸಾಕ್ಷನಾಶದ ಸಲುವಾಗಿ ಆತನ ಮೊಬೈಲ್‌ಅನ್ನು ಅದೇ ರಾಜಕಾಲುವೆಗೆ ಆರೋಪಿಗಳು ಎಸೆದಿದ್ದರು. ಪ್ರಕರಣದ ತನಿಖೆಗಾಗಿ ಪೊಲೀಸರು ಮೊಬೈಲ್‌ನ್ನು ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಮೊಬೈಲ್‌ಗಾಗಿ ರಾಜಕಾಲುವೆಯಲ್ಲಿ ಹುಡುಕಲು ಬಿಬಿಎಂಪಿ ಸಹಾಯದೊಂದಿಗೆ ಪೌರಕಾರ್ಮಿಕರನ್ನು ಬಳಕೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕಾಲುವೆಯಲ್ಲಿ ನಡೆದ ಕಾರ್ಯಾಚರಣೆಗೆ ಕಾರ್ಮಿಕರನ್ನು ಬಳಸಿಕೊಂಡಿರುವುದು ನಿಯಮಾವಳಿ ಉಲ್ಲಂಘನೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ದಸಂಸ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ | ಟಿಕೆಟ್ ರಹಿತ ಪ್ರಯಾಣ; ಒಂದೇ ತಿಂಗಳಲ್ಲಿ ₹6.54 ಲಕ್ಷ ದಂಡ ಸಂಗ್ರಹ

ಮಲಮೂತ್ರದೊಂದಿಗೆ ತುಂಬಿದ ರಾಜಕಾಲುವೆಗೆ ಪೌರಕಾರ್ಮಿಕರನ್ನು ಇಳಿಸಲಾಗಿದ್ದು, ಬರಿಗೈ ಹಾಗೂ ಬರಿಗಾಲಲ್ಲಿ ಕೊಚ್ಚೆ ನೀರಿನಲ್ಲಿ ತಡಕಾಡುವಂತೆ ಮಾಡಲಾಗಿದೆ. ಘಟನೆಯಲ್ಲಿ ಪೌರಕಾರ್ಮಿಕರ ಹಕ್ಕುಗಳು ವಿಧಿವಿಧಾನಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಪ್ರಕರಣದಲ್ಲಿ ಸಂಬಂಧಪಟ್ಟ ಬಿಬಿಎಂಪಿ, ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳು ಪಾಲಿಕೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು.

ಪೌರಕಾರ್ಮಿಕರನ್ನು ಸುರಕ್ಷತಾ ಕ್ರಮಗಳಿಲ್ಲದೆ ರಾಜಕಾಲುವೆಗೆ ಇಳಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪರಿಶಿಷ್ಟ ಜಾತಿ / ವರ್ಗದ ದೌರ್ಜನ್ಯ ತಡೆ ಅಧಿನಿಯಮ 1989, ಮ್ಯಾನುವೆಲ್ ಸ್ಕ್ಯಾವೆಂಜರ್ಸ್ ವೃತ್ತಿ / ಕೆಲಸ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013 ಮತ್ತು ಇತರೆ ಲಭ್ಯವಿರುವ ಕಾನೂನಿನ ನಿಯಮಾವಳಿಗಳಡಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...