ದಾವಣಗೆರೆ | ಕರವೇ ಜಿಲ್ಲಾ ಘಟಕದಿಂದ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಧ್ವಜಾರೋಹಣ

Date:

ದಾವಣಗೆರೆ ನಗರದ ಡಾ.ಎಂ.ಸಿ. ಮೋದಿ ವೃತ್ತದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದಾವಣಗೆರೆ ಜಿಲ್ಲಾ ಘಟಕದಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವ ಆಚರಿಸಲಾಯಿತು.‌

ನಿವೃತ್ತ ಬ್ಯಾಂಕ್ ಉದ್ಯೋಗಿ, ಸಾಹಿತಿ ಎನ್.ಟಿ. ಯರ‍್ರಿ ಸ್ವಾಮಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, “ರಾಜ್ಯದಲ್ಲಿ ಸುಮಾರು 12 ಸಾವಿರ ಬ್ಯಾಂಕುಗಳಿದ್ದು, ಎಲ್ಲಾ ಶಾಖೆಗಳಲ್ಲಿ ಕನ್ನಡ ಬಳಸುವಂತಾದರೆ ಅದು ಅದ್ಭುತ ಬದಲಾವಣೆಯಾಗಲಿದೆ. ಪ್ರತಿಯೊಂದು ಬ್ಯಾಂಕುಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಆಗಬೇಕು. ಗ್ರಾಮೀಣ ಜನರಿಗೆ ಬಹಳ ತೊಂದರೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕರವೇ ಸಾಕಷ್ಟು ಹೋರಾಟ ಮಾಡುತ್ತಾ ಬರುತ್ತಿದೆ “ಎಂದು ತಿಳಿಸಿದರು.

1003018806

“ಎಟಿಎಂಗಳಲ್ಲಿ ಸಹಾ ಕನ್ನಡ, ಇಂಗ್ಲೀಷ್, ಹಿಂದಿ ಮೂರು ಭಾಷೆಗಳು ಇರುತ್ತವೆ. ಆದರೆ ಅವುಗಳಲ್ಲಿ ಕನ್ನಡ ಬಿಟ್ಟು ಇನ್ನೆರಡು ಭಾಷೆ ಬಳಸಲು ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಜವಾಗಿಯೂ ಬೇಸರದ ಸಂಗತಿಯಾಗಿದೆ. ನಾವು ನಿರಭಿಮಾನಿಗಳಾಗದೇ ಸ್ವಾಭಿಮಾನಿಗಳಾಗಿ ಕನ್ನಡ ಭಾಷೆಯನ್ನು ಎಲ್ಲೆಲ್ಲಿ ಬಳಸಲು ಸಾಧ್ಯವಿದೆಯೋ ಅಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ಕೊಡಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡ ಪ್ರಭ ಪತ್ರಿಕೆ ಜಿಲ್ಲಾ ಪ್ರಧಾನ ವರದಿಗಾರ ನಾಗರಾಜ್ ಬಡದಾಳ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, “ಎರಡೂವರೆ ಸಾವಿರ ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಗೆ ತನ್ನದೇ ಆದ ಒಂದು ಲಿಪಿ ಇದೆ, ಏನು ಬರೆಯುತ್ತೇವೆಯೋ ಅದನ್ನು ಓದುತ್ತೇವೆ, ಏನು ಓದುತ್ತೇವೆಯೋ ಅದನ್ನು ಬರೆಯುತ್ತೇವೆ. ನಾಡು ನುಡಿಗಾಗಿ ಹೋರಾಡಿದವರಲ್ಲಿ ನಮ್ಮ ದಾವಣಗೆರೆಯ ಮಹಾಲಿಂಗರು ಒಬ್ಬರು. ನಮ್ಮ ಹೆಮ್ಮೆಯ ಭಾಷೆಯ ಕವಿಗಳಿಗೆ 8 ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಷಯ. 8 ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಹನೀಯರ ಜೊತೆಗೆ ಮಹಾಲಿಂಗ ರಂಗರ ಹೆಸರು ಸಹಾ ಸೇರ್ಪಡೆಯಾಗಬೇಕು” ಎಂದು ಅಭಿಪ್ರಾಯಪಟ್ಟರು.

1003018808

“ನಮ್ಮ ಭಾಷೆ, ನಮ್ಮತನವನ್ನು ನಾವು ಇಂದು ಮರೆಯಬಾರದು. ಹಾಗೆಯೇ ನಾವು ನಮ್ಮ ಮನೆಯಿಂದಲೇ ಕನ್ನಡ ಬಳೆಸುವ ಕಾರ್ಯ ಮಾಡಬೇಕಿದೆ. ದಾವಣಗೆರೆಯಲ್ಲಿ ಪ್ರಮುಖ ವೃತ್ತಗಳಿಗೆ ಮಹನೀಯರ ಹೆಸರಿದ್ದರೂ ಸಹಾ ಬೇರೆ ಹೆಸರಿನಿಂದ ಕರೆದು ರೂಢಿ ಮಾಡಿಕೊಂಡಿದ್ದಾರೆ. ಅದು ಬದಲಾವಣೆ ಆಗಬೇಕಿದೆ. ನಮ್ಮ ಮಕ್ಕಳಿಗೆ ತಿಳಿ ಹೇಳಬೇಕಿದೆ” ಎಂದರು.

ಪಾಲಿಕೆ ಮಾಜಿ ಸದಸ್ಯ ಗಡಿಗುಡಾಳ ಮಂಜುನಾಥ ಮಾತನಾಡಿ, “ಕನ್ನಡ ಉಳಿಸಿ ಬೆಳೆಸಲು 1947 ರಿಂದಲೂ ಕೂಡಾ ಅನೇಕ ಮಹನೀಯರು ಹೋರಾಟ ಮಾಡುತ್ತಾ ಬಂದಿದ್ದಾರೆ. 1956ರಲ್ಲಿ ಏಕೀಕರಣವಾಯಿತು. ಇದಕ್ಕೂ ಮೊದಲು ಸುಮಾರು 500 ಕ್ಕೂ ಹೆಚ್ಚು ರಾಜ ವಂಶಸ್ತರು ಆಡಳಿತ ಮಾಡಿಕೊಂಡು ಬಂದಿದ್ದರು. ಕನ್ನಡ ಏಕೀಕರಣವಾದ ಮೇಲೆ ಒಂದಾಗಿದೆ. ನಾವು ಇಂತಹ ಪವಿತ್ರ ನೆಲದಲ್ಲಿ ಇದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದು ನೆಲೆಸಿದ್ದಾರೆ. ಇದರಿಂದ ನಮ್ಮ ಕನ್ನಡ ಭಾಷೆ ಬಳಕೆ ಕಡಿಮೆಯಾಗುತ್ತಿದೆ. ಈ ವಿರುದ್ಧ ನಾವುಗಳು ಹೋರಾಟ ಮಾಡಬೇಕಾಗಿದೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ ಕರವೇ ಹೋರಾಟದ ಹಾದಿಯನ್ನು ಸವಿವರವಾಗಿ ವಿವರಿಸಿದರು.

1003018807

ದಾವಣಗೆರೆ ಹರಿಹರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಅವರು ಮಾತನಾಡಿ “ರಾಜ್ಯದಲ್ಲಿ ಆಂಗ್ಲ ನಾಮಫಲಕ ವಿರುದ್ಧ ಕರವೇ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವ ಮೂಲಕ ನಮ್ಮ ಸರ್ಕಾರದಲ್ಲಿ ಅಧಿಕೃತವಾಗಿ ಆದೇಶ ಮಾಡುವ ಮೂಲಕ ಹೋರಾಟ ನಡೆಸಿದ ಕ್ರಮ ಅಭಿನಂದನಾರ್ಹ, ಇದಕ್ಕೆ ನಮ್ಮ ರಾಜ್ಯ ಸರ್ಕಾರ ಸ್ಪಂದಿಸಿ ಶೇಕಡ 40 /60 ಅನುಪಾತದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕಬೇಕೆಂದು ಮಾನ್ಯ ಮುಖ್ಯಮಂತ್ರಿಗಳು ಆದೇಶ ಮಾಡಿದ್ದಾರೆ ಅದರಂತೆ ರಾಜ್ಯದಲ್ಲಿ ಎಲ್ಲರೂ ಕನ್ನಡ ನಾಮಫಲಕ ಹಾಕಬೇಕು” ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಭಾರೀ ಮಳೆ | ನೆಲಕಚ್ಚಿದ ಮೆಕ್ಕೆಜೋಳದ ಇಳುವರಿ ಕುಸಿತ: ನಷ್ಟದಲ್ಲಿರುವ ರೈತರನ್ನು ಮೇಲೆತ್ತುವವರು ಯಾರು?

ಮಹಾನಗರ ಪಾಲಿಕೆ ಸದಸ್ಯ ಏ ನಾಗರಾಜ್, ಮಾಂತೇಶ್, ಕರವೇ ಜಿಲ್ಲಾ ಗೌರವಾಧ್ಯಕ್ಷ ವಾಸುದೇವ ರಾಯ್ಕರ್, ಪತ್ರಕರ್ತ ಎಂ.ಎಸ್.ಚನ್ನಬಸವ ಶೀಲವಂತ್, ಜೆ.ಎಚ್.ಪಟೇಲ್ ಕಾಲೇಜು ಕಾರ್ಯದರ್ಶಿ ಮುಸ್ತಫ, ಕರವೇ ವಿವಿಧ ಘಟಕಗಳ ಪದಾಧಿಕಾರಿಗಳಾದ ಮಹೇಶ್ವರಪ್ಪ, ಶ್ರೀನಿವಾಸ್, ಸಂತೋಷ್ ಜಿಎಸ್ ,ಮಂಜುನಾಥ, ನಾಗರಾಜ, ಚಂದ್ರು, ಸುರೇಶ, ಮಂಜುಶ್ರೀಗೌಡ, ಕರಿಬಸಪ್ಪ, ತುಳಸಿರಾಮ್, ಸಂಜು, ಗಿರೀಶ ಕುಮಾರ, ಪರಮೇಶ್ವರ, ಗೋಪಾಲ ದೇವರಮನಿ, ಜಮೀವುಲ್ಲಾ, ಅನ್ವರ್, ದಾದಾಪೀರ್, ರಫೀಕ್, ಈಶ್ವರ್ ,ತನ್ವೀರ್ ,ಭಾಷಾ, ಮಹಿಳಾ ಘಟಕದ ಬಸಮ್ಮ, ಆಲೂರು ನಾಗಮ್ಮ, ಮಂಜುಳಾ ಮಹಾಂತೇಶ, ಅಕ್ಷಯ್, ರಾಕೇಶ್, ಚಂದ್ರು, ಧೀರೇಂದ್ರ, ಮಂಜುಳಾ ಗಣೇಶ, ಸಾವಿತ್ರಮ್ಮ ಸಾಕಮ್ಮ, ಸೇರಿದಂತೆ ಅನೇಕರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...