ದಾವಣಗೆರೆ | ಕರ್ನಾಟಕ ಬಂದ್, ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಎಂಇಎಸ್ ನಿಷೇಧಕ್ಕೆ ಆಗ್ರಹ.

Date:

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ ಉಪನೋಂದಣಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಕನ್ನಡಪರ ಸಂಘಟನೆಗಳ ಕರ್ನಾಟಕ ಬಂದ್ ನಲ್ಲಿ ಭಾಗವಹಿಸಿ ಉಪನೋಂದಣಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

1001722065
ವಿಕರವೇ ಕಾರ್ಯಕರ್ತರು ಎಸಿ ಕಛೇರಿ ಮುಂದೆ

ಬೆಳಗಾವಿಯಲ್ಲಿ ಇತ್ತೀಚೆಗೆ “ಕನ್ನಡ ಮಾತಾಡಿ” ಎಂದು ಕಂಡಕ್ಟರ್ ಹೇಳಿದ್ದಕ್ಕೆ ತಿರುಗಿ ಕಂಡಕ್ಟರ್‌ನನ್ನೇ ಮರಾಠಿ ಮಾತಾಡುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಲ್ಲದೇ ಕಂಡಕ್ಟರ್ ಮೇಲೆ ನಡೆಸಿರುವ ಮಾರಣಾಂತಿಕ ಹಲ್ಲೆ ಹಾಗೂ ಸುಳ್ಳು ಫೋಕ್ಲೋ ಕೇಸ್ ದಾಖಲಿಸಿದ್ದು, ಬಲವಂತವಾಗಿ ಹೆಣ್ಣು ಮಗಳಿಂದ ಸುಳ್ಳು ಕೇಸ್ ದಾಖಲಿಸಿ ನಂತರ ವಾಪಾಸ್ ಪಡೆದಿರುತ್ತಾರೆ. ಎಂಇಎಸ್ ಪುಂಡರು, ಪುಂಡಾಟಿಕೆ ಮತ್ತು ಉದ್ಧಟತನವನ್ನು ಪ್ರತೀ ಬಾರಿಯೂ ಮಾಡುತ್ತಲೇ ಬಂದಿದ್ದಾರೆ ಎಂದು ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಮತಗಳಿಗೋಸ್ಕರ ಪುಂಡರ ಇಂತಹ ಚಟುವಟಿಕೆಯನ್ನು ಯಾವ ರಾಜಕೀಯ ಧುರೀಣರೂ ಖಂಡಿಸಿಲ್ಲ. ಭಾಷಾವಾರು ಪ್ರಾಂತ್ಯಗಳ ರಚನೆಯ ನಂತರ ಎಂಇಎಸ್ ಮತ್ತು ಶಿವಸೇನೆ ಬೆಳಗಾವಿ ಗಡಿಭಾಗದಲ್ಲಿ ಮರಾಠಿಗರು ಮತ್ತು ಕನ್ನಡಿಗರ ಮಧ್ಯೆ ಭಾಷಾ ಸಾಮರಸ್ಯವನ್ನು ಹದಗೆಡಿಸಿ ದ್ವೇಷದ ವಾತಾವರಣ ಮೂಡಿಸಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸಿರುತ್ತಾರೆ. ಅಲ್ಲದೇ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂ.ಇ.ಎಸ್. ಹಾಗೂ ಶಿವಸೇನೆಯ ಸಂಘಟನೆಗಳು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಈ ಹಿಂದೆ ಭಗ್ನಗೊಳಿಸಿರುತ್ತಾರೆ. ಇವರ ಈ ದುಷ್ಕೃತ್ಯಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಇವರನ್ನು ಕರ್ನಾಟಕದಿಂದಲೇ ಗಡಿಪಾರು ಹಾಗೂ ನಿಷೇಧ ಮಾಡಬೇಕು ಎಂದು ಕನ್ನಡಪರ ಸಂಘಟನೆಗಳ ಪರವಾಗಿ ಸರ್ಕಾರ, ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು. ನಿಷೇಧ ಮಾಡದೇ ಇದ್ದಲ್ಲಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಕೆ.ಜಿ.‌ ಯಲ್ಲಪ್ಪ ಮಾತನಾಡಿ, “ಕರ್ನಾಟಕದಲ್ಲಿ ಆಡಳಿತ ಮಾಡಿದ ಇದುವರೆಗಿನ ಯಾವ ಸರ್ಕಾರಗಳು ಕೂಡ ಗಡಿಭಾಗದ ಕನ್ನಡಿಗರ ರಕ್ಷಣೆ ಮಾಡಿಲ್ಲ. ಅದರಲ್ಲೂ ಬಹುಭಾಗ ಬೆಳಗಾವಿಯಲ್ಲಿ ಮರಾಠಿಗರ ಪ್ರಾಬಲ್ಯ ಇರುವುದರಿಂದ ಅವರ ಮತದ ಆಸೆಗೆ ರಾಜಕಾರಣಿಗಳು, ಮುಖ್ಯಮಂತ್ರಿಗಳು ಕನ್ನಡಿಗರ ಹಿತವನ್ನು ಕಡೆಗಣಿಸುತ್ತಿದ್ದಾರೆ. ಹೀಗಾಗಿ ಭಾಷಾ ಪ್ರಾಂತ್ಯ ರಚನೆಯಾದಾಗಿನಿಂದಲೂ ಮರಾಠಿಗರ ಹಾವಳಿ ಮುಂದುವರೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬೇರೆ ರಾಜ್ಯಗಳಲ್ಲಿ ನಾವು ಆಯಾ ಭಾಷಿಕರೆಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಆದರೆ ಕರ್ನಾಟಕದಲ್ಲಿ ನಾವು ಕನ್ನಡಿಗರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಿಲ್ಲ. ಇಲ್ಲಿ ಜಾತಿವಾರು ವಿಂಗಡಣೆಯಾಗಿದೆ. ಜನ ಮತ್ತು ರಾಜಕಾರಣಿಗಳು ಜಾತಿಯಿಂದ ಗುರುತಿಸಿಕೊಳ್ಳುತ್ತಾರೆ. ಇದು ಕನ್ನಡಿಗರ ದುಸ್ಥಿತಿ‌. ಗಡಿಭಾಗದಲ್ಲಿ ತೆಲುಗು, ತಮಿಳು, ಮಲಯಾಳಂ ಮತ್ತು ಮರಾಠಿಗರ ಹಾವಳಿಯಿಂದ ಕನ್ನಡಿಗರು ತತ್ತರಿಸುತ್ತಿದ್ದಾರೆ. ಈಗಲಾದರೂ ಮುಖ್ಯಮಂತ್ರಿಗಳು ಮತ್ತು ಸರ್ಕಾರ ಎಚ್ಚೆತ್ತು ಅನ್ಯಭಾಷಿಕ ಪುಂಡರ ಹಾವಳಿಯಿಂದ ಕನ್ನಡಿಗರನ್ನು ರಕ್ಷಿಸಬೇಕಿದೆ” ಎಂದು ಕಿಡಿಕಾರಿದರು.

1001722069 2
ವಿಕರವೇ ಅಧ್ಯಕ್ಷ ಯಲ್ಲಪ್ಪ ಮಾಧ್ಯಮಗಳೊಂದಿಗೆ

ಪ್ರತಿಭಟನೆಯಲ್ಲಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರಾದ ಎಂ ರವಿ, ಸಂತೋಷ್ ದೊಡ್ಮನಿ, ದಯಾನಂದ್ ಬಿ ಇ, ಮಂಜುನಾಥ್, ಶಾಬಾಜ್ ಜಬಿವುಲ್ಲಾ, ನವೀನ್ ಕೆಎಚ್, ಮಹಬೂಬ್, ಬಾಬುರಾವ್, ಗಿರೀಶ್, ಫಾರೂಕ್ ಹಟೆಲಿ,ಶಾರುಖ್ ಅಶ್ಮಿ, ಹನುಮಂತಪ್ಪ, ಗದಿಗೆಪ್ಪ, ಶಾರುಖ್, ಮಂಜುನಾಥ್ ಶೆಟ್ಟಿ, ಇಮ್ರಾನ್, ಮಂಜುನಾಥ್ ಬಿವಿ ಹಾಗೂ ಸಂಘಟನೆ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...