ದಾವಣಗೆರೆ | ಅಸ್ಪೃಶ್ಯತೆ, ಅವಮಾನ ಎದುರಿಸಿ, ಜ್ಞಾನ ಸಂಪಾದನೆಯಿಂದ ಸಂವಿಧಾನ ಕೊಟ್ಟವರು ಅಂಬೇಡ್ಕರ್: ಜಿಬಿ ವಿನಯ್ ಕುಮಾರ್

Date:

ಅಸ್ಪೃಶ್ಯತೆ, ಅವಮಾನವನ್ನು ಎದುರಿಸಿದರೂ, ಜ್ಞಾನ ಸಂಪಾದನೆ, ಜೀವನದಲ್ಲಿ ಕಲಿತ ಪಾಠಗಳಿಂದ ಸಾದನೆ ಮಾಡಿ ಸಂವಿಧಾನ ಕೊಟ್ಟವರು ಡಾ.ಬಿಆರ್ ಅಂಬೇಡ್ಕರ್ ಎಂದು ದಾವಣಗೆರೆಯ ಸ್ವಾಭಿಮಾನಿ ಬಳಗದ ಸಂಸ್ಥಾಪಕ, ಇನ್ ಸೈಟ್ಸ್ ಐಎಎಸ್‌ ಸಂಸ್ಥಾಪಕ ನಿರ್ದೇಶಕರು, ರಾಜ್ಯಾಧ್ಯಕ್ಷರಾದ ಜಿ.ಬಿ. ವಿನಯ್ ಕುಮಾರ್ ಅಭಿಪ್ರಾಯ ಪಟ್ಟರು.

ಪೂಜಾ ಭಗವತ್ ಸ್ಮಾರಕ ಮಹಾಜನ ವಿದ್ಯಾಕೇಂದ್ರದ ಪ್ರವಾಸಿ ಇಲಾಖೆಯ ಸಭಾಂಗಣದಲ್ಲಿ ನಡೆದ ಐಎಎಸ್‌/ಕೆಎಎಸ್ ಒಂದು ದಿನದ ಉಚಿತ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸುದೀರ್ಘ ಸಂವಾದದ ನಂತರ ಅವರನ್ನು ಮೈಸೂರಿನ ಯುವ ಅಭಿಮಾನಿ ಬಳಗದಿಂದ ವಿಶೇಷವಾಗಿ ಸನ್ಮಾನಿಸಲಾಯಿತು.

1001746773

ಈ ವೇಳೆ ಮಾತನಾಡಿದ ಅವರು, “ಏಪ್ರಿಲ್ 14, 1891 ಅಂಬೇಡ್ಕರ್ ಅವರ ಜನ್ಮದಿನ ಇನ್ನೇನು ಕೆಲವೇ ದಿವಸಗಳಲ್ಲಿ ನಾವು ಅಂಬೇಡ್ಕರ್ ಜಯಂತಿಯನ್ನು ಆಚರಿಸುತ್ತಿದ್ದೇವೆ. ಆದರೆ ಅವರ ಶಿಕ್ಷಣ, ಬದುಕು ಸಂಘರ್ಷಗಳಿಂದ ಕೂಡಿದೆ. ಅಂದಿನ ಸಮಯದಲ್ಲಿ ಅಸ್ಪೃಶ್ಯ ಜಾತಿಯಲ್ಲಿ ಹುಟ್ಟಿದವರನ್ನು ಯಾರು ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿರಲಿಲ್ಲ, ಮುಟ್ಟುತ್ತಿರಲಿಲ್ಲ. ನೆರಳು ಬಿದ್ದರೆ ಮನೆಗೆ ಹೋಗಿ ಸ್ನಾನ ಮಾಡಬೇಕು ಎನ್ನುವ ಪರಿಸ್ಥಿತಿ ಇತ್ತು, ಅಂಬೇಡ್ಕರ್ ಶಾಲೆಗೆ ಹೋದರೆ ಗೋಣಿಚೀಲವನ್ನು ತೆಗೆದುಕೊಂಡು ಹೋಗಿ ಕುಳಿತುಕೊಂಡು, ಮತ್ತೆ ವಾಪಸ್ ಬರುವಾಗ ಅದನ್ನು ಮನೆಗೆ ಜೊತೆಯಲ್ಲೇ ತರುವ ಪರಿಸ್ಥಿತಿ ಅಂದಿನ ದಿನಗಳಲ್ಲಿತ್ತು. ಇಷ್ಟೆಲ್ಲಾ ಅವಮಾನ ಅಸಹನೆಯನ್ನು ಎದುರಿಸಿದರೂ, ಅಂಬೇಡ್ಕರ್ ರವರು ಎದೆಗುಂದದೆ ವಿದ್ಯಾಭ್ಯಾಸ, ಸಾಧನೆ ಮುಂದುವರಿಸಿದರು. ಅಂತಿಮವಾಗಿ ಅವರ ವಿದ್ವತ್ತು 1948ರ ಸಂವಿಧಾನ ರಚನೆಯಲ್ಲಿ ಪ್ರಮುಖವಾದ ಪಾತ್ರವಹಿಸಿತ್ತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001746774

“ಇಂದು ನಾವು ನೀವು ಇಲ್ಲಿ ಕುಳಿತು ಮಾತನಾಡುತ್ತಿದ್ದೇವೆ ದೇಶದಲ್ಲಿ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂದರೆ ಅದಕ್ಕೆ ಎಂದರೆ ಅದಕ್ಕೆ ಅಂಬೇಡ್ಕರ್ ಬರೆದ ಸಂವಿಧಾನವೇ ಕಾರಣ. ಅಂತಹ ಜ್ಞಾನ ಅಂಬೇಡ್ಕರ್ ಅವರಲ್ಲಿದ್ದು. ಇದಕ್ಕೆಲ್ಲ ಕಾರಣವಾಗಿದ್ದು ಅವರು ಬದುಕಿನಲ್ಲಿ ಸಂಪಾದಿಸಿದ ಜ್ಞಾನ ಮತ್ತು ಅವರು ಬದುಕಿನಲ್ಲಿ ಕಲಿತ ಪಾಠಗಳಿಂದ ಅವರ ಸಾಧನೆ ಸಾದ್ಯವಾಗಿದೆ. ಅಂತಹ ಸಾಧನೆಯನ್ನು ನಾವು ಕೂಡ ಮೈಗೂಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ನಾವೇನಾದರೂ ದೊಡ್ಡ ಕನಸು ಕಂಡರೆ ಅದು ಸಮಾಜದ ಸೇವೆ ಮಾಡುವ ಗುರಿಯನ್ನು ಹೊಂದಿರಬೇಕು. ನಮ್ಮ ಸ್ವಾರ್ಥಕ್ಕಾಗಿ ನಾವು ಕನಸನ್ನು ಕಾಣಬಾರದು. ನಮ್ಮ ಕೆಲಸದಲ್ಲಿ ಯಾವಾಗ ಒಳ್ಳೆಯ ಉದ್ದೇಶ, ಕೆಲಸದಲ್ಲಿ ಪ್ರಾಮಾಣಿಕತೆ ಮತ್ತು ನಮ್ಮ ಕೆಲಸದ ಬಗ್ಗೆ ನಿರ್ದಿಷ್ಟತೆ ಇರುತ್ತದೆಯೋ, ಆಗ ನೀವು ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಸಾಧನೆಗೆ ಅಧ್ಯಯನ, ಓದು ಅತಿ ಮುಖ್ಯವಾಗುತ್ತದೆ. ಜೊತೆಗೆ ಸಮಾಜದಲ್ಲಿ ಏನು ನಡೆಯುತ್ತಿದೆ ಎನ್ನುವ ಅರಿವು ಕೂಡ ಮುಖ್ಯವಾಗುತ್ತದೆ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ, ಕ್ರಮಕ್ಕೆ ಮಹಿಳಾ ಒಕ್ಕೂಟ ಆಗ್ರಹ.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಡಾ. ಸಿ.ಕೆ. ರೇಣುಕಾಚಾರ್ಯ, ಒಕ್ಕಲಿಗ ಯುವ ಬ್ರಿಗೇಡ್ ಅಧ್ಯಕ್ಷರಾದ ಶ್ರೀ ನಂಜೇಗೌಡ ನಂಜುಂಡ, ಶ್ರಿ ಸತ್ಯನಾರಾಯಣ, ಪತ್ರಕರ್ತರಾದ ಶ್ರೀ ಅಂಶಿ ಪ್ರಸನ್ನಕುಮಾರ್, ಡಾ. ಭಾವನ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...