2026ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ,
ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಸಹಾಯಧನವನ್ನು ನೀಡಲು ದಾವಣಗೆರೆ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. 20 ರಿಂದ 55 ವರ್ಷದೊಳಗಿರಬೇಕು. ಅಭ್ಯರ್ಥಿಗಳು 10ನೇ ತರಗತಿ ಪಾಸಾದ ಪ್ರಮಾಣ ಪತ್ರ ಹಾಗೂ ಖಾಯಂ ಲಘು ವಾಹನ ಚಾಲನಾ ಪರವಾನಗಿ ನಕಲು ಪ್ರತಿಯನ್ನು ಸಲ್ಲಿಸಬೇಕು. ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು ವಿವರ ತುಂಬಿದ ಅರ್ಜಿಯನ್ನು ದಾಖಲೆಗಳೊಂದಿಗೆ ಮಾರ್ಚ್13 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ಇವರಿಗೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂ:08192-230123 ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಕಾವ್ಯ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ದೌರ್ಜನ್ಯ ತಡೆ ಅಧಿನಿಯಮ ಮತ್ತು ಪಿಸಿಆರ್ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆಗಳು ಸಹಯೋಗ, ಸಮನ್ವಯದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ, ಅರಿವು ಮೂಡಿಸಲು ವಿಚಾರಗೋಷ್ಠಿ ಮತ್ತು ಕಾರ್ಯಗಾರವನ್ನು ನಡೆಸಲು ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆ.26 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಇಲ್ಲಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ





