ದಾವಣಗೆರೆ | ಮುಸ್ಲಿಂ ಸಮಾಜದ ವಿರುದ್ಧ ಕೋಮುವಾದಿ ಹೇಳಿಕೆ: ಕ್ರಮಕ್ಕೆ ಮುಖಂಡರ ಆಗ್ರಹ

Date:

*ಇತ್ತೀಚೆಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಆಜಾದ್ ನಗರದಲ್ಲಿ ನಡೆದಿರುವ ಮುಸ್ಲಿಂ ಯುವಕರ ಗುಂಪುಗಳ ನಡುವಿನ ಘರ್ಷಣೆಯ ನಂತರ ಸಮಾಜದ ವಿರುದ್ಧ ಕೆಟ್ಟ ಅಭಿಪ್ರಾಯ ಬರುವ ರೀತಿಯಲ್ಲಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿರುವವರು ಕುರಿತು ಕ್ರಮಕೈಗೊಳ್ಳುವಂತೆ ಎಐಎಂಐಎಂ ಪಕ್ಷಿದ ಮುಖಂಡರು ಹಾಗೂ ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

1003634079
ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಮುಖಂಡರು

ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷರಾದ ಜನಾಬ್ ಶೇಕ್ ದಾದಾಪೀರ್ (ದಾದು ಸೇಠ್) ರವರ ನೇತೃತ್ವದ ತಂಡ ಹಾಗೂ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ ಶೋಯೆಬ್ ನೇತೃತ್ವದ ಎಐಎಂಐಎಂ (AIMIM) ನಿಯೋಗವು ಇಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಭೇಟಿಯಾಗಿ, ಇತ್ತೀಚೆಗೆ ಯುವ ಗುಂಪುಗಳ ನಡುವಿನ ಘರ್ಷಣೆಯನ್ನು ಕೋಮುವಾದೀಕರಣಗೊಳಿಸುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.‌

ಈ ವೇಳೆ ಮಾತನಾಡಿದ ಮಹಮದ್ ಅಲಿ ಶೋಯೆಬ್ “ಬಿಜೆಪಿ ಸದಸ್ಯರು “ಜಿಹಾದಿ “ಮತಾಂಧ”ನಂತಹ ಪ್ರಚೋದನಕಾರಿ ಪದಗಳನ್ನು ಬಳಸಿಕೊಂಡು ಘಟನೆಯನ್ನು ಪೊಲೀಸ್-ವರ್ಸಸ್-ಸಮುದಾಯ ಸಮಸ್ಯೆಯಂತೆ ಸುಳ್ಳಾಗಿ ತಿರುಚುತ್ತಿದ್ದಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ಬಳಸುತ್ತಿದ್ದಾರೆ. ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಾಜದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಾಮರಸ್ಯದಿಂದ ಇದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಡಬೇಕು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸ್ಲಿಂ ಸಮಾಜದ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದಿ ಹೇಳಿಕೆ ಗಳು ನೀಡಿರುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ದ್ವೇಷಪೂರಿತ ಹೇಳಿಕೆಗಳನ್ನು ನೀಡಿ ಸಮಾಜದ ಸಾಮರಸ್ಯ ಹಾಳು ಮಾಡುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ತಂಜೀಂ ಮುಖಂಡ ದಾದು ಸೇಠ್ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಸತಿ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಅನಿರ್ದಿಷ್ಟ ಧರಣಿ

ವಿಷಯವನ್ನು ಪರಿಶೀಲಿಸಿ, ನಿಷ್ಪಕ್ಷಪಾತ ಕಾನೂನು ಜಾರಿ ಮತ್ತು ಶಾಂತಿಗೆ ಇಲಾಖೆಯ ಬದ್ಧವಾಗಿದೆ ಎಂದು ಎಸ್ಪಿ ಭರವಸೆ ನೀಡಿದರು.

ಈ ಸುದ್ದಿ ಓದಿ – ದಾವಣಗೆರೆ | ಬಸ್ ನಿಲ್ದಾಣದಲ್ಲಿ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆಗೆ ಆಮ್ ಆದ್ಮಿ ಪಕ್ಷದ ಒತ್ತಾಯ

ಈ ವೇಳೆ ಎಐಎಂಐಎಂ ಪಕ್ಷದ ಕಾರ್ಯಕರ್ತರು ತಂಜೀಮ್ ನ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...