ದಾವಣಗೆರೆ | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಮುಸ್ಲಿಂ ಒಕ್ಕೂಟ ಮಾನವ ಸರಪಳಿ ರಚಿಸಿ ಫ್ರತಿಭಟನೆ

Date:

ಕೇಂದ್ರ ಸರ್ಕಾರ ತಂದಿರುವ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ, ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಾನೂನು ಹೋರಾಟ ಮಾಡಿಕೊಂಡು ಬಂದಿದೆ. ಇದರ ಬೆಂಬಲವಾಗಿ 2025, ಜುಲೈ 4 ರಂದು ಶುಕ್ರವಾರ ಪ್ರಾರ್ಥನೆ ನಂತರ ರಾಷ್ಟ ವ್ಯಾಪಿ ಮಾನವ ಸರಪಳಿ ನಿರ್ಮಿಸಿ ಹೋರಾಟಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದಾವಣಗೆರೆ ತಂಜೀಮುಲ್ ಮುಸ್ಲಿಮೀನ್, ಮುಸ್ಲಿಂ ಒಕ್ಕೂಟದ ಸದಸ್ಯರು ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ, ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ದಾವಣಗೆರೆಯಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

1002268340
Oplus_131072

ಹಳೇ ದಾವಣಗೆರೆಯ ಚಾರ್ಲಿ ಪೈಲ್ವಾನ್ ಆಟೋ ನಿಲ್ದಾಣದಿಂದ ಎಸ್ ಎಸ್ ಎಂ ನಗರದ ಹೊಸ ಖಬರ್ಸ್ಥಾನ್ ವರೆಗೆ ಮಾನವ ಸರಪಳಿ ರಚಿಸಿ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ದಾವಣಗೆರೆ ಮುಸ್ಲಿಂ ಒಕ್ಕೂಟದ ಸಂಚಾಲಕರಾದ ಟಿ.ಅಸ್ಗರ್, ‘‘ವಕ್ಫ್ ಆಸ್ತಿ ನಮ್ಮ ಪೂರ್ವಜರು, ಹಿರಿಯರು ಅಲ್ಲಾಹನನ್ನು ಸಂತೃಪ್ತಪಡಿಸಲು, ಮುಸ್ಲಿಮರ ಸಬಲೀಕರಣಕ್ಕಾಗಿ ದಾನ ಮಾಡಿದ ಜಮೀನಾಗಿದೆ. ವಕ್ಫ್‌ಗೆ ಸೇರಿರುವ ಜಮೀನುಗಳು ಯಾರಿಂದಲೋ ಕಬಳಿಸಿದ ಜಮೀನಲ್ಲ. ಯಾರಿಂದಲೋ ಕಬಳಿಸಿದ ಜಮೀನು ವಕ್ಫ್ ಆಗಲು ಸಾಧ್ಯವೂ ಇಲ್ಲ. ಧರ್ಮದ ಗೋಡೆಯನ್ನು ಬದಿಗಿಟ್ಟು ಎಲ್ಲಾ ಭಾರತೀಯರು ಹೋರಾಟದಲ್ಲಿ ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

1002255978
ವಕ್ಫ್ ತಿದ್ದುಪಡಿ ಕಾಯ್ದೆ 2025 ವಿರೋಧಿಸಿ ಮಾನವ ಸರಪಳಿ ರಚಿಸಿ ಮುಸ್ಲಿಂ ಒಕ್ಕೂಟದ ಹೋರಾಟ

“ಇಂದು ಮುಸ್ಲಿಮರು ಗುರಿಯಾಗಿದ್ದರೆ, ನಾಳೆ ಎಲ್ಲಾ ಶೋಷಿತ, ದಮನಿತ ವರ್ಗಗಳು ಹೆಜ್ಜೆ ಹೆಜ್ಜೆಗೆ ಗುರಿಯಾಗುತ್ತವೆ. ನಮ್ಮ ಹೋರಾಟ ಹಿಂದೂ-ಮುಸ್ಲಿಂ ಹೋರಾಟವಲ್ಲ. ನಮ್ಮ ಹೋರಾಟ ಹಿಂದೂಗಳ ವಿರುದ್ಧವಲ್ಲ. ನಮ್ಮ ಹೋರಾಟ ಸಂವಿಧಾನ ನೀಡಿರುವಂತಹ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿದೆ. ಈ ಕಾಯ್ದೆ ಮುಸ್ಲಿಮರ ಹಿತಕ್ಕೆ ವಿರುದ್ಧವಾಗಿದೆ. ಇದು ಮುಸ್ಲಿಮರ ಜಮೀನು ಕಬಳಿಸುವ ಯತ್ನವಾಗಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ಈ ರೀತಿಯ ಕ್ರಮಗಳು ನಮ್ಮ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ದವಾಗಿದೆ. ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆನ್ಲೈನ್ ಗೇಮಿಂಗ್ ಗೆ ಯುವಕ ಬಲಿ; ಕ್ರಮಕ್ಕೆ ಡೆತ್ ನೋಟಿನಲ್ಲಿ ಸಿಎಂ, ಡಿಸಿಎಂ, ಸಂಸದೆ, ನ್ಯಾಯಾಧೀಶರಿಗೆ ಮನವಿ

“ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಈ ಕಾಯ್ದೆ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ದಾವಣಗೆರೆಯಲ್ಲಿ ಇನ್ನೂ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ. ಮುಸ್ಲಿಂರ ಹೋರಾಟವನ್ನು ಅರಿತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ, ಮಾರಕ ವಕ್ಫ್ ತಿದ್ದುಪಡಿ ಕಾಯ್ದೆ 2025ನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.‌

ಮಾನವ ಸರಪಳಿ ಮತ್ತು ಪ್ರತಿಭಟನೆ ಕಾರ್ಯಕ್ರಮದಲ್ಲಿ ಮೌಲಾನಾ ನಾಸಿರ್ ಅಹಮದ್ ,ತಂಜಿಮ್ ಅದ್ಯಕ್ಷರಾದ ಜನಾಬ್ ದಾದು ಸೇಟ್, ಷಂಷುದ್ದೀನ್ ರಜ್ವಿ, ಕಾರ್ಯದರ್ಶಿ ಮಹಮ್ಮದ್ ಜಬಿಉಲ್ಲಾ, ಸಾಬಿರ್ ಅಲಿ , ಖಾದರ್ ಬಾಷ ರಜ್ವಿ, ಶೌಕತ್ ಅಲಿ ವಕೀಲರು, ಮಟನ್ ಮಹಮ್ಮದ್ ಅಲಿ , ಇಮ್ರಾನ್ ರಜಾ, ಜಬಿವುಲ್ಲಾ ವೈ, ಜಬಿ ಟೈಲ್ಸ್, ಸಯ್ಯದ್ ರಫಿಕ್ ಸಾಬ್ , ದಾದಪೀರ್ (ಶೆಕರಪ್ಪ)ಸನಾವುಲ್ಲಾ, ಷನವಾಜ್ ಖಾನ್, ನೂರ್ ಅಹಮದ್ , ಜಾಕಿರ್ ಅರ್ಚನ, ಮುಷ್ತಾಖ್, ಎನ್ ಅರ್ ರಫಿ, ಸಯ್ಯದ್ ಸ್ಯಪುಲ್ಲಾ, ಟ್ರಾನ್ಸ್‌ಪೋರ್ಟ್‌, ಕೆ ಸಿ ಮೊಹಮ್ಮದ್, ಗ್ಯಾರೆಜ್ ಅಷ್ಷು, ಸಯ್ಯದ್ ಇಮ್ತಿಯಾಜ್,( ಚೊಟು ಇಂಜಿನಿಯರಿಂಗ್) ಬೇಗ್, ಸಲಿಂ ಸಾಗರ್, ಮ್ಯಾನೇಜರ್ ಮಹಮ್ಮದ್ ಜಾಬಿರ್ , ಅಬು ಸ್ವಾಲೆಹಾ, ಬರ್ಕತ್ ಹಬಿಬ್

ತಂಜೀಮುಲ್ ಮುಸ್ಲಿಮೀನ್ ಮುಖಂಡರು ಹಾಗೂ ಸದಸ್ಯರು, ನಜೀರ್, ಅಹ್ಮದ್, ತಾಹೀರ್ ಅಹ್ಮದ್, ಮಹಮ್ಮದ್ ಅಲಿ ಶೋಯೇಬ್, ಸಾಜಿದ್ ಅಹ್ಮದ್, ಮಹಮ್ಮದ್ ಅಲ್ತಾಫ್, ರಜ್ವಿ ರಿಯಾಜ್ ಸಾಬ್, ಇಲು, ನೂರ್ ಅಹ್ಮದ್, ಅಹ್ಮದ್ ರಜಾ, ಯು. ಎಂ ಮನ್ಸೂರ್ ಅಲಿ, ಅತೀಕ್ ಹಜರತ್, ನಾಸೀರ್ ಸಿಲಿಂಡರ್, ಅಜ್ಮತ್, ತಮನ ರಫೀಕ್, ಅರಬ್, ಅಸ್ಗರ್ ಹಾಗೂ ಇತರರು ಭಾಗವಹಿಸಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...