ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

Date:

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ವಾರ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ತರಗತಿಗಳು ಸರಿಯಾಗಿ ನಡೆದಿಲ್ಲ. ಹಾಗಾಗಿ ಕೂಡಲೇ ದಾವಣಗೆರೆ ವಿಶ್ವವಿದ್ಯಾಲಯವು ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿದರು.‌ ನಂತರ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಿಗೆ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ನಿಯೋಗವು ಮನವಿ ಪತ್ರ ಸಲ್ಲಿಸಿತು.

ಈ ವೇಳೆ ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ  “ಸರ್ಕಾರವು ಹಿಂದಿನ ಶೈಕ್ಷಣಿಕ ವರ್ಷದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸುತ್ತೇವೆ ಎಂದು ಸುತ್ತೋಲೆಯನ್ನು ಹೊರಡಿಸಿದೆ. ಈ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ ಪ್ರತಿ ವಿಷಯಕ್ಕೆ ಕನಿಷ್ಠ 30 ಗಂಟೆಗಳ ಪಾಠವಿಲ್ಲದೆ ಈಗಾಗಲೇ ಪರೀಕ್ಷೆಗಳನ್ನು ಘೋಷಿಸಿರುವುದು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆದ್ದರಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ  ಪಾಠ ನಡೆಯದೆ ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸುತ್ತೆವೆ. ಸೆಮಿಸ್ಠರ್‌ ಪರೀಕ್ಷೆಗಳನ್ನು, ಪರೀಕ್ಷಾ ಶುಲ್ಕದ ಸುತ್ತೋಲೆಯನ್ನು, ಈ ಕೂಡಲೇ ಮುಂದೂಡಬೇಕು ಹಾಗೂ ಅದಕ್ಕನುಗುಣವಾಗಿ ಕಾಲೇಜಿನಲ್ಲಿಯೂ ಆಂತರಿಕ ಪರೀಕ್ಷೆಗಳನ್ನು ಮುಂದೂಡಬೇಕು” ಎಂದು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

WhatsApp Image 2025 10 01 at 12.30.55 PM 1
ದಾವಣಗೆರೆ ಜಯದೇವ ವೃತ್ತದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

“ವಿದ್ಯಾರ್ಥಿಗಳ ಹೋರಾಟದಿಂದ ಸರ್ಕಾರವು ಅತಿಥಿ ಉಪನ್ಯಾಸಕರನ್ನು ನೇಮಿಸುವುದಾಗಿ ಸುತ್ತೋಲೆ ಹೊರಡಿಸಿದೆ . ಇದು ವಿದ್ಯಾರ್ಥಿಗಳ ಅಭೂತಪೂರ್ವ ಜಯವಾಗಿದೆ. ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿಯವರ ಆದರ್ಶಗಳಿಂದ ಪ್ರೇರಿತರಾಗಿ ತಮ್ಮ ಶಿಕ್ಷಣದ ಹಕ್ಕನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕಿಂದು ಜಯ ದೊರೆತಿದೆ. ಹೋರಾಟದಿಂದ ಮಾತ್ರವೇ ಬದಲಾವಣೆ ಸಾಧ್ಯ ಎಂಬ ಸಂದೇಶವನ್ನು ಕರ್ನಾಟಕದ ವಿದ್ಯಾರ್ಥಿಗಳು ಈ ಮೂಲಕ ಎಲ್ಲೆಡೆ ಸಾರಿದ್ದಾರೆ” ಎಂದು ಅಭಿಪ್ರಾಯಪಟ್ಟರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸಲು ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್, ಜಿಲ್ಲಾ ಸಂಘಟನಕಾರರಾದ ಎಚ್ ಡಿ ಗಂಗಾಧರ್, ಹಲವು ಕಾಲೇಜುಗಳ ವಿದ್ಯಾರ್ಥಿಗಳಾದ ಸಿದ್ದಿಕ್ ಅವರಗೆರೆ, ವಿಕಾಸ್ ಎಂ ಆರ್, ಗಂಗಾಧರ್ ಎನ್, ಪ್ರೇಮಾ, ವರಲಕ್ಷ್ಮಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...