ದಾವಣಗೆರೆ | ಮಹರ್ಷಿ ವಾಲ್ಮೀಕಿ ಜಯಂತೋತ್ಸವ: ಐತಿಹಾಸಿಕ ಬೈಕ್‌ ರ‍್ಯಾಲಿ 

Date:

ʼʼಜಿಲ್ಲಾ ವಾಲ್ಮೀಕಿ ಯುವ ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ  ಅಕ್ಟೋಬರ್ 7ರಂದು ದಾವಣಗೆರೆಯಲ್ಲಿ ನಡೆಯಲಿದ್ದು  ಇದರ ಪ್ರಯುಕ್ತ ಜನಜಾಗೃತಿಗಾಗಿ ಎಂಟನೇ ವರ್ಷದ ಐತಿಹಾಸಿಕ ಬೃಹತ್ ಬೈಕ್‌ ರ‍್ಯಾಲಿಯನ್ನು ಅ. 5ರ ಭಾನುವಾರ  ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆʼʼ ಎಂದು ದಾವಣಗೆರೆ ಜಿಲ್ಲಾ ವಾಲ್ಮೀಕಿ ಯುವ ಘಟಕದ  ಮುಖಂಡರಾದ ಶ್ರೀನಿವಾಸ್ ದಾಸ ಕರಿಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ʼʼಭಾನುವಾರ  ನಡೆಯಲಿರುವ ಬೈಕ್‌ ರ‍್ಯಾಲಿಯನ್ನು ರಾಜನಹಳ್ಳಿ ಮಹರ್ಷಿ ಶ್ರೀ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಜಗಳೂರು ಶಾಸಕರಾದ ದೇವೇಂದ್ರಪ್ಪ ಮಾಜಿ ಶಾಸಕರುಗಳಾದ ಎಸ್ ವಿ ರಾಮಚಂದ್ರ. ಹೆಚ್ ಪಿ ರಾಜೇಶ್. ಜಿಲ್ಲಾ ಅಧ್ಯಕ್ಷ ಬಿ ವೀರಣ್ಣ ಹದಡಿ ಹಾಲಪ್ಪ ನಿಟ್ಟುವಳ್ಳಿ ಆರ್. ಎಸ್. ಶೇಖರಪ್ಪ ಸೇರಿದಂತೆ ಸಮಾಜದ ಅನೇಕ ಗಣ್ಯ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆʼʼ ಎಂದು ತಿಳಿಸಿದರು.

WhatsApp Image 2025 10 03 at 7.48.06 PM

ಜಿಲ್ಲಾಧ್ಯಕ್ಷ ತೋಟದ ಬಸವರಾಜ್ ಮಾತನಾಡಿ  ʼʼಬೈಕ್‌ ರ‍್ಯಾಲಿಯು ರಾಜವೀರ ಮದಕರಿನಾಯಕ ವೃತ್ತದಿಂದ ಹೊಂಡದ ವೃತ್ತ, ದುರ್ಗಾಂಬಿಕ ದೇವಿ ದೇವಸ್ಥಾನ. ಹಗೆದಿಬ್ಬ ಸರ್ಕಲ್. ಅರಳಿಮರ ವೃತ್ತ. ಬಂಬೂ ಬಜಾರ್. ಎಪಿಎಂಸಿ. ಪಿಬಿ ರಸ್ತೆ. ಅರುಣಾ ಟಾಕೀಸ್. ವಿನೋಬನಗರ ಎರಡನೇ ಕ್ರಾಸ್, ಚರ್ಚ್ ರಸ್ತೆ. ರಾಂ ಅಂಡ್ ಕೋ ಸರ್ಕಲ್. ಅಂಬೇಡ್ಕರ್ ಸರ್ಕಲ್. ಶಿವಪ್ಪಯ್ಯ ಸರ್ಕಲ್. ಕೆ.ಟಿ.ಜೆ ನಗರ. ಎಚ್ ಕೆ ಆರ್ ಸರ್ಕಲ್. ನಿಟ್ವುವಳ್ಳಿ ದುರ್ಗಾಂಬಿಕಾ ದೇವಿ ದೇವಸ್ಥಾನ. ಬಳಿ ಕೊನೆಗೊಳ್ಳಲಿದೆʼʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼʼಬೃಹತ್  ಬೈಕ್‌ ರ‍್ಯಾಲಿಗೆ ಸಮಾಜದ ಎಲ್ಲಾ ಯುವಕರು, ಮುಖಂಡರು,  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಬೈಕ್ ರಾಲಿ ಮುಗಿದ ನಂತರ ಸಮಾಜದ ಯುವಕರಿಗೆ ಸಮಾಜದ ಸ್ಥಿತಿಗತಿ ಆಗು ಹೋಗುಗಳು ಮತ್ತು ಆರ್ಥಿಕ , ಸಾಮಾಜಿಕ, ಶೈಕ್ಷಣಿಕವಾಗಿ ಸಮಾಜ ಸಂಘಟನೆಯ ಹಿತದೃಷ್ಟಿಯಿಂದ  ಅವರನ್ನು ಜಾಗೃತಿ ಗೊಳಿಸಲಾಗುವುದು ಎಂದು ಆರ್.  ಲಕ್ಷ್ಮಣ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ಸುದ್ದಿಗೋಷ್ಠಿಯಲ್ಲಿ ಪ್ರಶಾಂತ್ ಪಚ್ಚಿ, ಮಾಜಿ ಮಹಾಪೌರರಾದ ವಿನಾಯಕ ಪೈಲ್ವಾನ್, ಪ್ರವೀಣ್ ಹುಲುಮನಿ, ಪ್ರವೀಣ್ ಶಾಮನೂರು, ಜಗದೀಶ್ ಎನ್. ಎಚ್., ಹಾಲೇಶ್, ಪ್ರವೀಣ್ ದೇವರಮನಿ, ನಾಗೇಶ್ ಅವರಗೆರೆ, ಸುರೇಶ್, ಶಶಿ, ಸತೀಶ್, ಪರಶುರಾಮ್ ಪಣಿಯಾಪುರ, ಲಿಂಗರಾಜ್  ಸೇರಿದಂತೆ  ಮುಖಂಡರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...