ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ: ಮೇ 10ರಂದು ಮತದಾನ, ಮೇ 13ಕ್ಕೆ ಫಲಿತಾಂಶ

Date:

  • ಮೇ 23ರಂದು ಪ್ರಸ್ತುತ ಸರ್ಕಾರದ ಅವಧಿ ಮುಕ್ತಾಯ
  • ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ

ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ರಾಜ್ಯ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ಸಿದ್ಧವಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಮಾತನಾಡಿದ ರಾಜೀವ್ ಕುಮಾರ್, “ನಾವೀಗ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಲು ಇಲ್ಲಿ ನೆರೆದಿದ್ದೇವೆ. ನಿಷ್ಪಕ್ಷಪಾತ ಮತ್ತು ವಿಶ್ವಾಸಾರ್ಹ ಪರೀಕ್ಷೆ ನಡೆಸುವುದು ನಮ್ಮ ಉದ್ದೇಶ. ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ನಡೆಯಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 20ನೇ ತಾರೀಕು ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ, ಏ.13ರಂದು ಅಧಿಸೂಚನೆ ಪ್ರಕಟ, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭ. ನಾಮಪತ್ರ ಸಲ್ಲಿಸಲು ಕೊನೆಯ ದಿನ ಏ. 20, ನಾಮಪತ್ರ ಪರಿಶೀಲನೆ ಏ.21, ನಾಮಪತ್ರ ವಾಪಾಸು ಪಡೆಯಲು ಏ.24 ಕೊನೆಯ ದಿನವಾಗಿದೆ ಎಂದು ಹೇಳಿದರು.WhatsApp Image 2023 03 29 at 12.28.09 PM

“ಈ ಭಾರಿ ಒಟ್ಟು 5,21,73,579 ಮತದಾರರು ಮತ ಚಲಾಯಿಸಲಿದ್ದಾರೆ. ಆ ಪೈಕಿ 2,26,42,561 ಪುರುಷರಿದ್ದರೆ, 2,59,26,319 ಮಹಿಳೆಯರಿದ್ದಾರೆ ಹಾಗೂ 4,699 ಲಿಂಗತ್ವ ಅಲ್ಪಸಂಖ್ಯಾತ ಮತದಾರರಿದ್ದಾರೆ. 12.15 ಲಕ್ಷ ಯುವ ಮತದಾರರಿದ್ದಾರೆ” ಎಂದು ತಿಳಿಸಿದರು.

“ಒಟ್ಟು 9.17 ಲಕ್ಷ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ” ಎಂದು ರಾಜೀವ್ ಕುಮಾರ್ ತಿಳಿಸಿದರು.

“ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುವುದು. ಈ ಪೈಕಿ 24,063 ಮತಗಟ್ಟೆಗಳು ನಗರ ಪ್ರದೇಶಗಳಲ್ಲಿದ್ದು, ಗ್ರಾಮೀಣ ಭಾಗದಲ್ಲಿ 34,219 ಮತಗಟ್ಟೆಗಳು ಇರಲಿವೆ. ಜೇನು ಕುರುಬ, ಕಾಡು ಕುರುಬ ಮತ್ತು ಸೋಲಿಗ ಸಮುದಾಯಗಳು ತಮ್ಮ ಊರುಗಳಿಂದಲೇ ಮತ ಚಲಾಯಿಸುವಂತೆ ವ್ಯವಸ್ಥೆ ಮಾಡುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣಾ ದಿನಾಂಕ ಪ್ರಕಟ ಹಿನ್ನೆಲೆ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

12,000 ಸೂಕ್ಷ್ಮ ಮತಗಟ್ಟೆಗಳೆಂದು ನಿರ್ಧರಿಸಲಾಗಿದ್ದು, 1,320 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿವರ್ಗ ನಿರ್ವಹಣೆ ಮಾಡಿದರೆ, 226 ಮತಗಟ್ಟೆಗಳನ್ನು ಯುವಕರು ನಿರ್ವಹಿಸಲಿದ್ದಾರೆ. ಬೆಂಗಳೂರು ನಗರವನ್ನು ಸಿಲಿಕಾನ್ ಸಿಟಿ ಎಂದು ಕರೆಯಲಾಗುತ್ತದೆ. ಕಳೆದ ಬಾರಿ ಈ ನಗರದಲ್ಲಿ ಕಡಿಮೆ ಮತದಾತ- 53% ಆಗಿತ್ತು. ಈ ಬಾರಿ ಮತದಾನ ಉತ್ತೇಜಿಸಲು ಪ್ರಯತ್ನಿಸುತ್ತಿದ್ದೇವೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮಾಹಿತಿ, ಪ್ರಮಾಣಪತ್ರ ಚುನಾವಣಾ ವೆಬ್ ಸೈಟಿನಲ್ಲಿ ಲಭ್ಯವಾಗಲಿದೆ” ಎಂದು ಹೇಳಿದರು.

“ರಾಜ್ಯದ 19 ಜಿಲ್ಲೆಗಳಲ್ಲಿ 171 ಚೆಕ್‌ಪೋಸ್ಟ್‌ ನಿರ್ಮಿಸಲಾಗುವುದು. ಅಕ್ರಮಗಳ ಮೇಲೆ ಕಣ್ಣಿಡಲು ಪೊಲೀಸರು, ಅರಣ್ಯ, ಅಬಕಾರಿ ಅಧಿಕಾರಿಗಳು ಹಾಗೂ ಚುನಾವಣಾ ಆಯೋಗ ಸಿದ್ಧವಿದೆ. ಇಡಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಣದ ವರ್ಗಾವಣೆ ಮೇಲೆ ಕಣ್ಣಿಡಲಿದ್ದಾರೆ. ಚುನಾವಣಾ ಕೆಲಸಕ್ಕಾಗಿ 2,400 ವಿಶೇಷ ವೀಕ್ಷಕರನ್ನು ನೇಮಿಸಲಾಗುತ್ತದೆ. ಚುನಾವಣಾ ಅಕ್ರಮ ತಡೆಯಲು 2,016 ಫ್ಲೈಯಿಂಗ್ ಸ್ಕ್ವಾಡ್ ಗಳನ್ನು ರಚನೆ ಮಾಡಲಾಗುತ್ತದೆ” ಎಂದು ಹೇಳಿದರು.

ಈ ಬಗ್ಗೆ ತುರ್ತು ಆದೇಶ ಹೊರಡಿಸಿರುವ ಚುನಾವಣಾ ಆಯೋಗ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದೆ.

ಮೇ 23ರಂದು ಪ್ರಸ್ತುತ ಸರ್ಕಾರದ ಅವಧಿ ಮುಗಿಯುವುದರಿಂದ ಅದರೊಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಚುನಾವಣೆ ನಡೆಸಬೇಕಾಗಿದ್ದು, ಅದಕ್ಕೆ ಅಗತ್ಯ ಸಿದ್ಧತೆಯನ್ನು ಚುನಾವಣಾ ಆಯೋಗ ನಡೆಸುತ್ತಿದೆ.

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ತರುವ ಉದ್ದೇಶದಿಂದ ವಿಧಾನಸಭಾ ಕ್ಷೇತ್ರವಾರು ಮಾದರಿ ನೀತಿ ಸಂಹಿತೆ ಜಾರಿಗೊಳಿಸಲು ಹಾಗೂ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ನಿಗಾವಹಿಸಲು ತಂಡವನ್ನು ರಚಿಸಲಾಗಿದೆ. ತಂಡಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಇನ್ನು ಚುನಾವಣಾ ಕಾರ್ಯಗಳಿಗೆ ಈಗಾಗಲೇ ವಿಧಾನಸಭಾ ಕ್ಷೇತ್ರವಾರು ಚುನಾವಣಾಧಿಕಾರಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...