ದೇವೇಗೌಡರ ʼಮಾನಸ ಪುತ್ರʼ ವೈ ಎಸ್‌ ವಿ ದತ್ತ ಮರಳಿ ಜೆಡಿಎಸ್‌ ಗೂಡಿಗೆ

Date:

  • ಡಿಕೆಶಿ ಕುರಿತು ವಿವಾದಿತ ಹೇಳಿಕೆ ನೀಡಿ ಟಿಕೆಟ್‌ ವಂಚಿತರಾಗಿದ್ದ ದತ್ತ
  • ಪಕ್ಷ ಸೇರಿ ಮೂರು ತಿಂಗಳು ಕಳೆಯುವ ಮುನ್ನವೇ ಕಾಂಗ್ರೆಸ್‌ಗೆ ಗುಡ್‌ ಬೈ

ಒಂದು ಕಾಲದ ಜೆಡಿಎಸ್‌ ಮೇಷ್ಟ್ರು, ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ಅಂತಲೇ ಹೆಸರಾಗಿದ್ದ ವೈ ಎಸ್‌ ವಿ ದತ್ತ ಮತ್ತೆ ಜೆಡಿಎಸ್‌ಗೆ ಮರಳಿದ್ದಾರೆ.

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್‌ ಬಯಸಿ ಜೆಡಿಎಸ್‌ ತೊರೆದಿದ್ದರು. ಜನವರಿ 15ರಂದು ಕಾಂಗ್ರೆಸ್‌ ಸೇರಿದ್ದ ದತ್ತ ಈಗ ಮೂರು ತಿಂಗಳು ಕಳೆಯುವ ಮುನ್ನವೇ ಕಾಂಗ್ರೆಸ್ಸಿಗೂ ಗುಡ್‌ ಬೈ ಹೇಳಿದ್ದಾರೆ.

‌ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕುರಿತು ದತ್ತ ಅವರು ವಿವಾದಿತ ಹೇಳಿಕೆ ನೀಡಿದ್ದೆ ಟಿಕೆಟ್‌ ತಪ್ಪಲು ಕಾರಣವಾಗಿದೆ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲೇ ಕೇಳಿಬಂದಿವೆ. ಕಡೂರು ಕ್ಷೇತ್ರಕ್ಕೆ ಕೆ ಎಸ್‌ ಆನಂದ್‌ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಇದರಿಂದ ಮುನಿಸಿಕೊಂಡ ದತ್ತ ತನ್ನ ಬೆಂಬಲಿಗರೊಂದಿಗೆ ಸಭೆ ಕರೆದು ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿಗಳು

ಆ ಸಭೆ, ಚರ್ಚೆಯ ನಂತರ ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ದತ್ತ ಅವರು, “ಕಾಂಗ್ರೆಸ್‌ನಲ್ಲಿ ಅನ್ಯಾಯ ಆಗೋಯ್ತು” ಅಂತ ಅಳಲು ತೋಡಿಕೊಂಡು, ಪಕ್ಷಕ್ಕೆ ವಾಪಾಸ್ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ದೇವೇಗೌಡರೊಂದಿಗಿನ ಮಾತುಕತೆ ಬಳಿಕ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರು ಗುರುವಾರ ವೈ ಎಸ್‌ ವಿ ದತ್ತ ಅವರ ಮನೆಗೆ ಭೇಟಿ ನೀಡಿ, ಅಧಿಕೃತವಾಗಿ ಅವರನ್ನು ಮರಳಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...