ಧರ್ಮಸ್ಥಳ ಪ್ರಕರಣ | ಮಾಧ್ಯಮಗಳ ಮೇಲೆ ನಿರ್ಬಂಧವನ್ನು ಪ್ರಶ್ನಿಸಿದ ಹೈಕೋರ್ಟ್‌

Date:

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧವನ್ನು ವಿಧಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಪ್ರಶ್ನಿಸಿದೆ.

ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ಆದೇಶವನ್ನು ಪ್ರಶ್ನಿಸಿ ಡಿಜಿಟಲ್‌ ಮಾಧ್ಯಮ ಸಂಸ್ಥೆ ಕುಡ್ಲ ರ‍್ಯಾಂಪೇಜ್‌ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, “ನಿರ್ಲಜ್ಜವಾಗಿ ಎಲ್ಲರನ್ನು ನಿರ್ಬಂಧಿಸುವ ಇದೆಂಥಾ ಆದೇಶ” ಎಂದು ಹರ್ಷೇಂದ್ರ ಕುಮಾರ್‌ ಪರ ವಕೀಲರನ್ನು ಪ್ರಶ್ನಿಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ದೂರುದಾರನ ಮಾಹಿತಿ ಬಹಿರಂಗಪಡಿಸಿದವರ ವಿರುದ್ಧ ಪ್ರತ್ಯೇಕ ತನಿಖೆ: ಎಸ್‌ಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಎ ವೇಲನ್‌, “ಎಫ್‌ಐಆರ್‌ನಲ್ಲಿನ ಅಂಶಗಳ ಬಗ್ಗೆ ಮಾತನಾಡದಂತೆ 390 ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ. 9,000 ಯುಆರ್‌ಎಲ್‌ಗಳನ್ನು ಡಿಲೀಟ್‌ ಮಾಡಬೇಕು ಎಂದು ವಿಚಾರಣಾಧೀನ ನ್ಯಾಯಾಲಯ ಮೂರು ಗಂಟೆಗಳಲ್ಲಿ ಆದೇಶಿಸಿದೆ. ಇದರಿಂದಾಗಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಹಾನಿಯಾಗಿದೆ. ಈ ನ್ಯಾಯಾಲಯಕ್ಕೆ ವ್ಯಾಪ್ತಿ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿದ್ದು, ಅದನ್ನು ಸಾಬೀತುಪಡಿಸಲಾಗುವುದು” ಎಂದರು.

“ಮಾಧ್ಯಮಗಳನ್ನು ನಿರ್ಬಂಧಿಸಿರುವ ಆದೇಶ ಪ್ರಶ್ನಿಸಲಾಗಿದೆ ಎಂಬುದು ತಿಳಿದಿದೆ. ವಿಚಾರಣಾಧೀನ ನ್ಯಾಯಾಲಯ ಪರಿಗಣಿಸದಿದ್ದರೆ ನೀವು ಇಲ್ಲಿ ಬರಬಹುದಿತ್ತು. ಆದರೆ ಇದು ಈ ನ್ಯಾಯಾಲಯದ ವ್ಯಾಪ್ತಿಯಲ್ಲ. ನಿಮ್ಮ ವಾದ ಆಲಿಸಲಾಗುವುದು. ಆದರೆ ಮೊದಲು ಈ ಪ್ರಕರಣ ಈ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ಸಾಬೀತುಪಡಿಸಬೇಕು” ಎಂದು ಪೀಠ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, “ಈ ನ್ಯಾಯಾಲಯಕ್ಕೆ ವಿಚಾರಣಾ ವ್ಯಾಪ್ತಿ ಇದೆ ಎಂಬುದನ್ನು ಮನನ ಮಾಡಿಕೊಡಲಾಗುವುದು” ಎಂದು ತಿಳಿಸಿದ್ದಾರೆ.

ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...