ಎಂ.ಉಷಾ ಅವರ‌ ‘ಬಾಳ‌ ಬಟ್ಟೆ’ ಕಾದಂಬರಿಗೆ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

Date:

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ ಅವರ ‘ಬಾಳ‌ ಬಟ್ಟೆ’ ಕಾದಂಬರಿಯನ್ನು ಆಯ್ಕೆ ಮಾಡಿದೆ.

‘ಬಾಳ ಬಟ್ಟೆ’ ಕಾದಂಬರಿಯನ್ನು ಶಿವಮೊಗ್ಗದ ‘ಅಹರ್ನಿಶಿ’ ಪ್ರಕಾಶನ ಪ್ರಕಟಿಸಿದೆ. ಇನ್ನು 2022ರಲ್ಲಿ ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಸ್ಥಾಪನೆ ಮಾಡಿತ್ತು. ನಂತರ, ಈ ಪ್ರಶಸ್ತಿಗೆ 2020-2023ರ ಅವಧಿಯಲ್ಲಿ ಮಹಿಳೆಯರು ಪ್ರಕಟಿಸಿದ ಕಾದಂಬರಿಗಳನ್ನು ಆಹ್ವಾನಿಸಲಾಗಿತ್ತು.

ಲೇಖಕಿಯರು/ಪ್ರಕಾಶಕರು ಒಟ್ಟು 24 ಕಾದಂಬರಿಗಳನ್ನು ಕಳುಹಿಸಿದ್ದರು. ಈ ಕಾದಂಬರಿಗಳನ್ನು ಹಿರಿಯ‌ ಲೇಖಕರು, ಸಾಹಿತ್ಯ ವಿಮರ್ಶಕರಾದ ಪ್ರೊ.ಓ.ಎಲ್.ನಾಗಭೂಷಣ ಸ್ವಾಮಿ, ಡಾ.ಡಿ.ವಿಜಯಲಕ್ಷ್ಮಿ, ಡಾ.ಎಚ್.ಎಂ.ಕಲಾಶ್ರೀ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಅವಲೋಕನ ಮಾಡಿದೆ. ಈ ಪೈಕಿ ಉಷಾ ಅವರ ಮೊದಲ‌ ಕಾದಂಬರಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಈ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ₹25,000 ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಜಯಾ ದಬ್ಬೆ ಹೆಸರಿನ ಪ್ರಶಸ್ತಿಯನ್ನು ಅವರ ವಿದ್ಯಾರ್ಥಿನಿಯೂ ಆದ ಭಾಷಾಂತರ, ಮಹಿಳಾ ಅಧ್ಯಯನ, ಸಾಹಿತ್ಯ ವಿಮರ್ಶೆ, ಸಾಂಸ್ಕೃತಿಕ ಅಧ್ಯಯನಗಳಲ್ಲಿ ಎರಡೂವರೆ ದಶಕದಿಂದ ತೊಡಗಿಸಿಕೊಂಡಿರುವ ಉಷಾ ಅವರಿಗೆ ನೀಡಲು ಸಂಸ್ಥೆ‌ ಹೆಮ್ಮೆ ಪಡುತ್ತದೆ. ಜುಲೈ 21ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ” ಎಂದು ಕೇಂದ್ರದ ಅಧ್ಯಕ್ಷೆ ಡಾ. ಸಬಿಹಾ ಭೂಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂ.ಉಷಾ ಅವರ ಪರಿಚಯ

ಎಂ. ಉಷಾ ಅವರು ಮೂಲತಃ‌ ಚಾಮರಾಜನಗರ‌‌ ಜಿಲ್ಲೆಯವರು. ಮೈಸೂರು ವಿವಿಯಲ್ಲಿ‌ ಎಂ.ಎ, ಬೆಂಗಳೂರು ವಿವಿಯಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಹಂಪಿ‌ ಕನ್ನಡ ವಿವಿ‌‌‌ ಭಾಷಾಂತರ‌ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ‌ನಿರ್ವಹಿಸಿ 2019 ರಲ್ಲಿ ಸ್ವಯಂ‌ ನಿವೃತ್ತಿ ‌ಪಡೆದಿದ್ದಾರೆ.

ಸಂಸ್ಕೃತಿ ಚಿಂತನೆ ಮತ್ತು‌ ಭಾರತೀಯ ಸ್ತ್ರೀವಾದ, ಮಹಿಳಾ ಚಳುವಳಿ ಮತ್ತು ಮಹಿಳಾ ವಿಷಯಗಳು, ಮಹಿಳೆ ಮತ್ತು ಜಾತಿ, ಆಧುನಿಕ ಮಹಿಳಾ ಸಾಹಿತ್ಯ, ಇನ್ನಷ್ಟು ಪುಟಗಳು (ಸಂ), ಸುರುಚಿ, ಒಳಗಣ ರಣರಂಗ ಹೊರಗಣ ಶೃಂಗಾರ , ಭಾಷಾಂತರ ಮತ್ತು ಲಿಂಗರಾಜಕಾರಣ, ಭಾಷಾಂತರ ಪ್ರವೇಶಿಕೆ, ಕನ್ನಡ ಮ್ಯಾಕ್ ಬೆತ್, ಲಿಖ್ಯಂತೆ ದೇಶಭಾಷೆಯೊಳ್, ಹೆಣ್ಣೆಂಬ ಶಬುದ (ಸಂ) ಮುಂತಾದವು ಇವರ ಮುಖ್ಯ ಪ್ರಕಟಣೆಗಳು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಜಾಹೀರಾತು ಮುಕ್ತ ಅಭಿಯಾನ’ಕ್ಕೆ ಕೈ ಜೋಡಿಸಲು ನಾಗರಿಕರಲ್ಲಿ ಮನವಿ ಮಾಡಿದ ಬಿಬಿಎಂಪಿ

ಇವರ ‘ಶೂಲಿ ಹಬ್ಬ’ ಬೆಂಗ್ಳೂರು ನಾಟಕೋತ್ಸವ -2013 ರಲ್ಲಿ ಉತ್ತಮ ನಾಟಕ ರಚನಾ ಬಹುಮಾನ‌‌, ಕರ್ನಾಟಕ ಲೇಖಕಿಯರ ಸಂಘದ ಇಂದಿರಾವಾಣಿ ರಾವ್ ದತ್ತಿನಿಧಿ- 2015 ಬಹುಮಾನ ಮತ್ತು ‘ಅರ್ಧಕಥಾನಕ’ ಭಾಷಾಂತರ ಕೃತಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ‌ಪಡೆದಿವೆ. ಕನ್ನಡ ಮ್ಯಾಕ್ ಬೆತ್ ಕೃತಿ ಕರ್ನಾಟಕ ಸಾಹಿತ್ಯ‌ ಅಕಾಡೆಮಿಯ 2019 ರ ಪಿ.ಶ್ರೀನಿವಾಸ ರಾವ್ ದತ್ತಿ  ಮತ್ತು ಬಿಎಂಶ್ರೀ ಪ್ರತಿಷ್ಠಾನದ 2019ರ ಆರಗಂ ವಿಮರ್ಶಾ ಪ್ರಶಸ್ತಿಗಳಿಗೆ ಭಾಜನವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...