ಇಡಿ, ಸಿಬಿಐ, ಐಟಿ – ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಡಾ. ಮುಖ್ಯಮಂತ್ರಿ ಚಂದ್ರು

Date:

“ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ” ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟವು ಬೃಹತ್‌ ಶಾಂತಿಯುತ ಪ್ರತಿಭಟನೆ ನಡೆಸಿತು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, “ಕಳೆದ 10 ವರ್ಷಗಳಲ್ಲಿ ನಾವು ನೋಡಿದ್ದು ಪ್ರಜಾಪ್ರಭುತ್ವದ ಕಗ್ಗೋಲೆ, ವಿವಿಧತೆಯಲ್ಲಿ ಏಕತೆಯಿಂದಿರುವ ಭಾರತದ ನಾಶ, ಜನತಂತ್ರ ವ್ಯವಸ್ಥೆಯ ಸರ್ವನಾಶ, ಸಂವಿಧಾನ ಬದಲಿಸುವ ಪ್ರಯತ್ನ, ಪಾರದರ್ಶಕತೆ ಇಲ್ಲದ ಆಡಳಿತ, ಕೋಮುಗಲಭೆಗಳಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಕಡಿವಾಣ ಹಾಕುತ್ತಿದ್ದಾರೆ. ದೆಹಲಿಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಮೂಲಕ ರಾಜ್ಯದ ಆಡಳಿತವನ್ನು ಹತೋಟಿಯಲ್ಲಿಡಲು ಯತ್ನಿಸುತ್ತಿದ್ದಾರೆ. ಜೈಲಿನಲ್ಲಿರಬೇಕಾದ ಕಡು ಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಮಂತ್ರಿ, ಮುಖ್ಯಮಂತ್ರಿಗಳನ್ನಾಗಿಸುತ್ತಿದ್ದಾರೆ. ರಾಜಕೀಯ ಎದುರಾಳಿಗಳನ್ನು ಇಡಿ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ತನಿಖಾ ಸಂಸ್ಥೆಗಳ ಮೂಲಕ ಸುಳ್ಳು ಪ್ರಕರಣಗಳಡಿ ಆರೋಪಿಗಳಾಗಿಸಿ ಕಿರುಕುಳ ಕೊಡುತ್ತಿದ್ದಾರೆ. ಈ ದೇಶ ಉಳಿಯಬೇಕೆಂದರೇ ಸರ್ವಾಧಿಕಾರಿಯ ಆಡಳಿತಕ್ಕೆ ಅಂತ್ಯ ಹಾಡಬೇಕು” ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

“ದುಡ್ಡು ಇರುವವರ ಹತ್ತಿರ ಇ.ಡಿ ಹೋಗುತ್ತೆ. ಆಮೇಲೆ ಒಳಗೆ ಹೋಗ್ತಿರಾ, ಹೊರಗೆ ಇರ್ತಿರಾ ಎಂದು ಕೇಳುತ್ತೆ. ಹೊರಗಿರಬೇಕಾದ್ರೆ ಬಿಜೆಪಿ ಹುಂಡಿಗೆ ಕಾಸು ಹಾಕಿ. ಇಲ್ದೇ ಹೋದ್ರೆ ಒಳಗೋಗಿ. ಇದು ನೂರಾರು ಉದ್ಯಮಿಗಳ ಪರಿಸ್ಥಿತಿಯಾಗಿದೆ. ಸಾವಿರಾರು ಕೋಟಿ ರೂ. ಅಕ್ರಮ ಹಣವನ್ನು ಚುನಾವಣಾ ಬಾಂಡ್‌ ಮೂಲಕ ತನ್ನ ಹುಂಡಿಗೆ ಹಾಕಿಸಿಕೊಂಡು ಸಕ್ರಮ ಮಾಡುತ್ತಿದೆ. ಸ್ವಿಸ್‌ ಬ್ಯಾಂಕಿನಲ್ಲಿರುವ ಎಲ್ಲ ಕಳ್ಳ ದುಡ್ಡನ್ನು ತಂದು ಭಾರತದ ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಹಾಕುತ್ತೇನೆ ಎಂದು 10 ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಹೇಳಿದ್ದರು. ಆದರೆ, ಅವರೇ ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಹಣವನ್ನು ಗುಡ್ಡೆ ಹಾಕಿಕೊಂಡಿದ್ದಾರೆ. ಸರ್ಕಾರಿ ಆಸ್ತಿಗಳನ್ನು ಒಂದುಕಡೆಯಿಂದ ಮಾರಾಟ ಮಾಡಿಕೊಂಡು ಬಂದಿದ್ದರೆ. ದೇಶದ ಸಾಲವನ್ನು ಕೇವಲ 10 ವರ್ಷಗಳಲ್ಲಿ 200 ಪಟ್ಟು ಹೆಚ್ಚಿದ್ದಾರೆ. ಮೊದಲೆಲ್ಲ ಭಾರತದಲ್ಲಿ ಹುಟ್ಟುವ ಪ್ರತಿ ಮಗುವಿನ ಮೇಲೆ ₹50 ಸಾವಿರ ಸಾಲವಿತ್ತು. ಆದರೆ, ಈಗ ಬರೋಬ್ಬರಿ ₹1.5 ಲಕ್ಷ  ಸಾಲವಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ‌ ಎರಡು ನಕಲಿ ಆದೇಶ; ₹4 ಕೋಟಿ ಗುತ್ತಿಗೆ ವಂಚನೆ

ಎಸ್‌ಡಿಪಿಐನ ಅಬ್ದುಲ್‌ ಮಜಿದ್‌, ಸಾಮಾಜಿಕ ಹೋರಾಟಗಾರ ನೂರ್‌ ಶ್ರೀಧರ್‌, ಸಲೀಲ್‌ ಶೆಟ್ಟಿ, ಎಎಪಿ ರಾಜ್ಯ ಉಪಾಧ್ಯಕ್ಷರಾದ ಮೋಹನ್‌ ದಾಸರಿ, ವಿಜಯ್‌ ಶರ್ಮಾ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ಅನೇಕ ಮಂದಿ ಪಕ್ಷಾತೀತರಾಗಿ ಪಾಲ್ಗೊಂಡಿದ್ದರು.

ಪ್ರತಿಭಟನೆ ವೇಳೆ ಹೆಚ್ಚಿನವರು ಕಪ್ಪು ಪಟ್ಟಿ ಧರಿಸಿದ್ದರು. ಸಂವಿಧಾನ ವಿರೋಧಿ ನರೇಂದ್ರ ಮೋದಿ, ಭ್ರಷ್ಟ ಮೋದಿ ಧಿಕ್ಕಾರ, ಬಾಂಡ್‌ ಮೋದಿಗೆ ಧಿಕ್ಕಾರ ಘೋಷಣೆಗಳು ಕೇಳಿಬಂದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...