ಚುನಾವಣೆ 2023 | ವರುಣಾದಲ್ಲಿ ಸಿದ್ದರಾಮಯ್ಯಗೆ ಸವಾಲೊಡ್ಡುವವರಾರು?

Date:

ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.

2008ರಲ್ಲಿ ವರುಣಾ ಕ್ಷೇತ್ರ ರಚನೆಯಾದಾಗಿನಿಂದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಜೇಯವಾಗಿ ಮುನ್ನುಗ್ಗುತ್ತಿದೆ. 2008 ಮತ್ತು 2013ರಲ್ಲಿ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಗೆದ್ದಿದ್ದರು. 2018ರಲ್ಲಿ ತಮ್ಮ ಪುತ್ರ ಯತೀಂದ್ರಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಆ ಚುನಾವಣೆಯಲ್ಲಿ ಯತೀಂದ್ರ 51.1% ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದರು. ಈಗ, ಸಿದ್ದರಾಮಯ್ಯ ಮತ್ತೆ ಕ್ಷೇತ್ರಕ್ಕೆ ಮರಳಿದ್ದಾರೆ. ಈ ಬಾರಿಯೂ, ಸಿದ್ದರಾಮಯ್ಯ ಗೆಲುವು ಖಚಿತ ಎಂಬ ಅಭಿಪ್ರಾಯವಿದೆ.

ಇಲ್ಲಿ ಕಾಂಗ್ರೆಸ್‌ನ ಪ್ರತಿಸ್ಪರ್ಧಿ ಬಿಜೆಪಿಯೇ ಆಗಿದ್ದರು, ಅದು ಗೆಲ್ಲಲು ಹೆಣಗಾಡುತ್ತಿದೆ. 2013ರಲ್ಲಿ ಬಿಜೆಪಿಯಿಂದ ಬಂಡೆದ್ದು ಯಡಿಯೂರಪ್ಪ ಹೊಸ ಪಕ್ಷ ಕಟ್ಟಿದ್ದಾಗ, ಬಿಜೆಪಿ 10ನೇ ಸ್ಥಾನಕ್ಕೆ ಕುಸಿದಿತ್ತು. ಯಡಿಯೂರಪ್ಪ ಅವರ ಆಪ್ತ ಕಾಪು ಸಿದ್ದಲಿಂಗ ಸ್ವಾಮಿ ಕೆಜೆಪಿಯಿಂದ ಸ್ಪರ್ಧಿಸಿ 34% ಮತಗಳನ್ನು ಪಡೆದು, ಎರಡನೇ ಸ್ಥಾನ ಪಡೆದಿದ್ದರು. ಬಳಿಕ, ಕೆಜೆಪಿ ಮತ್ತು ಬಿಜೆಪಿ ಒಗ್ಗೂಡಿದವು. ಈಗ ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕ್ಷೇತ್ರವನ್ನು ಗೆದ್ದುಕೊಳ್ಳಲು ತಿಣಕಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ವರುಣಾಗೆ ವಾಪಾಸ್ ಆಗಿರುವುದು ಬಿಜೆಪಿಗೆ ಮತ್ತಷ್ಟು ಬಿಕ್ಕಟ್ಟನ್ನು ಸೃಷ್ಟಿಸಿದೆ. ಆದರೂ, ವರುಣಾ ಗೆಲ್ಲಲೇಬೇಕೆಂದು ಕೇಸರಿ ಪಡೆ ಸಂಕಲ್ಪ ಮಾಡಿದೆ. ಈ ಬಾರಿ ಕ್ಷೇತ್ರದಲ್ಲಿ ಪ್ರಬಲ ಹೋರಾಟ ನಡೆಸಲಿದೆ ಎಂದು ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಹೇಳಿದ್ದಾರೆ. ”ಪಕ್ಷದ ನಾಯಕತ್ವವು ವರುಣಾ ಕುರಿತು ತೀವ್ರವಾಗಿ ಚರ್ಚಿಸುತ್ತಿದೆ. ಹಿಂದಿನಂತೆ ಯಾವುದೇ ರಾಜಿ ಇಲ್ಲ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕತ್ವ ಯೋಜಿಸುತ್ತಿದೆ ಎಂದೂ ಹೇಳಲಾಗುತ್ತಿದೆ. ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಜೆಪಿ ಮೂರು ಹಂತದ ಪ್ರಕ್ರಿಯೆಗಳನ್ನು ನಡೆಸಿದ್ದು, ಸಂಸದೀಯ ಮಂಡಳಿಗೆ ಪಟ್ಟಿಯೊಂದನ್ನು ಕಳಿಸಲಾಗಿದೆ. ಮಂಡಳಿಯು ಏಪ್ರಿಲ್‌ 10ರೊಳಗೆ ಹೆಸರನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ಸೋಮಣ್ಣ ಮತ್ತು ವಿಜಯೇಂದ್ರ ಇಬ್ಬರೂ ಲಿಂಗಾಯತ ಸಮುದಾಯಕ್ಕೆ ಸೇರಿದವರು. ವರುಣಾದಲ್ಲಿ 25% ಲಿಂಗಾಯತ ಮತಗಳಿವೆ ಮತ್ತು ಸುತ್ತೂರು ಮಠದ ಪ್ರಭಾವವೂ ಇದೆ. ಅಲ್ಲಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ನಿರಂತರ ಗೆಲುವು ದಾಖಲಿಸಿದ್ದಾರೆ. ಅವರ ಗೆಲುವಿಗೆ ಕುರುಬ (14%), ಮುಸ್ಲಿಂ (5%), ದಲಿತ (33%), ಮತ್ತು ಇತರೆ ಮತಗಳು ಪಾತ್ರವಹಿಸಿವೆ. ಈ ಬಾರಿ, ಲಿಂಗಾಯತರೊಂದಿಗೆ ಒಕ್ಕಲಿಗರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಸುದೀಪ್ ರಾಜಕೀಯವಾಗಿ ಚಾಣಾಕ್ಷ, ಬಿಸಿನೆಸ್‌ನಲ್ಲಿ ಬುದ್ಧಿವಂತ

2018ರಲ್ಲಿ ಬಿಜೆಪಿ ವಿಜಯೇಂದ್ರ ಹೆಸರನ್ನು ಘೋಷಿಸಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅದನ್ನು ಹಿಂತೆಗೆದುಕೊಂಡಿತು. ಈಗ ಸೋಮಣ್ಣ ಮತ್ತು ವಿಜಯೇಂದ್ರ ಹೆಸರುಗಳು ಮತ್ತೆ ಮುನ್ನೆಲೆಗೆ ಬಂದಿವೆ. ಆದರೆ, ಅಲ್ಲಿನ ಸ್ಪರ್ಧೆಯಿಂದ ಎದುರಾಗಬಹುದಾದ ಅಪಾಯಗಳನ್ನು ಅರಿತಿರುವ ಇಬ್ಬರೂ ಸ್ಪರ್ಧೆಗೆ ಹಿಂಜರಿಯುತ್ತಿದ್ದಾರೆ. ಆದರೆ, ಯಡಿಯೂರಪ್ಪ ಬೆಂಬಲಿಗರ ಒಂದು ವರ್ಗ, `ಸಿದ್ದರಾಮಯ್ಯನವರ ಬಗ್ಗೆ ಯಡಿಯೂರಪ್ಪ ‘ಸಾಫ್ಟ್ ಕಾರ್ನರ್’ ಹೊಂದಿದ್ದಾರೆ ಎಂಬ ಆರೋಪದಿಂದ ವಿಜಯೇಂದ್ರ ಅವರು ಮುಕ್ತಗೊಳಿಸುತ್ತಾರೆ’ ಎನ್ನುತ್ತಿದ್ದಾರೆ.

ಸಿದ್ದರಾಮಯ್ಯ ಅವರನ್ನು ಸೋಲಿಸಿದರೆ ವಿಜಯೇಂದ್ರ ಅವರು ಪ್ರಬಲ ನಾಯಕರಾಗಿ ಹೊರಹೊಮ್ಮುತ್ತಾರೆ ಎಂದು ಯಡಿಯೂರಪ್ಪ ಬೆಂಬಲಿಗರ ಮತ್ತೊಂದು ಗುಂಪು ಹೇಳುತ್ತಿದೆ. ಆದರೆ, ಚೌಕಾಸಿ ಎಂಬಂತೆ ‘ಶಿಕಾರಿಪುರದಿಂದಲೂ ವಿಜಯೇಂದ್ರ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಬೇಕು’ ಎಂದೂ ಒತ್ತಾಯಿಸುತ್ತಿದ್ದಾರೆ.

ವರುಣಾದಲ್ಲಿ ಕಣಕ್ಕಿಳಿದರೆ ಎರಡು ಸ್ಥಾನದಿಂದ ಸ್ಪರ್ಧಿಸುವ ಇರಾದೆಯನ್ನು ಸೋಮಣ್ಣ ಹೊಂದಿದ್ದಾರೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಅವಕಾಶ ನೀಡುವಂತೆ ಸೋಮಣ್ಣ ಕೇಳಿದ್ದಾರೆ. ಆದರೆ, ಚಾಮರಾಜನಗರದೊಂದಿಗೆ ಸೋಮಣ್ಣ ಹೆಸರು ತಳುಕು ಹಾಕಿಕೊಳ್ಳುತ್ತಿದ್ದಂತೆ ಸ್ಥಳೀಯ ಮುಖಂಡರು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ವರುಣಾದಿಂದ ಸೋಮಣ್ಣ ಹಾಗೂ ವಿಜಯೇಂದ್ರ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಅಂತಿಮವಾಗಿ ಬಿಜೆಪಿಯಿಂದ ವರುಣಾದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ. ಅವರು ಸಿದ್ದರಾಮಯ್ಯ ಕೋಟೆಯನ್ನು ಭೇದಿಸುವರೇ ಎಂಬುದಕ್ಕೆ ಉತ್ತರ ಶೀಘ್ರವೇ ದೊರೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...