ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

Date:

“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜೂನ್ 16ರಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜತೆಗೆ ಮಾತನಾಡಿದರು.

ಚುನಾವಣೆಯಲ್ಲಿ ಸೋತಿರುವುದಕ್ಕೆ ಸೇಡು ತೀರಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ ಎಂಬ  ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ, “ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಒಂಭತ್ತು ಸ್ಥಾನಗಳನ್ನು  ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ, ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ. ಮೋದಿ ಅಲೆ ಕಡಿಮೆಯಾಗಿದೆ” ಎಂದರು.

“ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 2021ರ ಏಪ್ರಿಲ್ 11ರಂದು  ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ.7 ರಷ್ಟು ಕಡಿಮೆ ಮಾಡಿದರು. ಏಕೆಂದರೆ, ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ ₹99.85 ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. ₹102 ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ ₹106.66 ಇದೆ. ಆಂಧ್ರದ ಅನಂತಪುರದಲ್ಲಿ ₹109.44, ತೆಲಂಗಾಣದ ಹೈದರಾಬಾದ್‌ನಲ್ಲಿ ₹107.40 ಹಾಗೂ ಮಹಾರಾಷ್ಟ್ರದಲ್ಲಿ ₹104.46 ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು, “ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ ₹104.86 ಇದೆ. ಮಧ್ಯಪ್ರದೇಶದಲ್ಲಿ ₹106.47 ಇದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಗಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ತಲೆಬದ್ಧಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ” ಎಂದರು.

ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅನುದಾನವನ್ನು ನೀಡಲಾಗಿದೆ. ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...