ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

Date:

“ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದೆ” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಹೇಳಿದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ವಿಶೇಷ ಚೇತನರ ದ್ವಿಚಕ್ರ / ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, “ವಿಶೇಷ ಚೇತನರು, 85 ವರ್ಷ ಮೇಲ್ಪಟ್ಟವರು ಹಾಗೂ ತೃತೀಯ ಲಿಂಗಿಗಳು ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ತಪ್ಪದೆ ಮತದಾನ ಮಾಡಲು ಮನವಿ ಮಾಡಲಾಗುತ್ತಿದೆ” ಎಂದರು.

“ವಿಶೇಷ ಚೇತನರು ಮತದಾನ ಮಾಡುವ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತಗಟ್ಟೆಗಳ ಬಳಿ ರ್ಯಾಂಪ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಲ್ಲ ವಿಶೇಷ ಚೇತನರು ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ತಪ್ಪದೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

ವಿಶೇಷ ಚೇತನರ ದ್ವಿಚಕ್ರ / ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮವು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ನಿಂದ ಪ್ರಾರಂಭವಾಗಿ ಕೆ.ಆರ್ ವೃತ್ತ, ನೃಪತುಂಗ ರಸ್ತೆ, ಹಡ್ಸನ್ ವೃತ್ತದ ಮೂಲಕ ಕಂಠೀರವ ಕ್ರೀಡಾಂಗಣದವರೆಗೆ ಸಾಗಿ ಮುಕ್ತಾಯವಾಯಿತು. ಈ ವೇಳೆ,  ತಪ್ಪದೆ ಮತದಾನ‌ ಮಾಡುವ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ವೇಳೆ ನೆರೆದಿದ್ದ ವಿಶೇಷ ಚೇತನರು ಹಾಗೂ ಅಧಿಕಾರಿಗಳು ಪ್ರತಿಜ್ಞಾನ ವಿಧಿಯನ್ನು ಸ್ವೀಕರಿಸಿದರು‌.

ಈ ವೇಳೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಯಾದ ಕೂರ್ಮ ರಾವ್, ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜ್, ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...