ಜೆಡಿಎಸ್‌ನಿಂದ ಎಚ್‌ಡಿಕೆ, ನಿಖಿಲ್‌ ಉಚ್ಚಾಟನೆ ಸುಳ್ಳು; ಇಬ್ರಾಹಿಂ ಸ್ಪಷ್ಟನೆ

Date:

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಉಚ್ಚಾಟಿಸಿದ್ದಾರೆಂದು ಪಕ್ಷದ ಲೆಟರ್‌ ಹೆಡ್‌ನಲ್ಲಿ ಪತ್ರವೊಂದನ್ನು ಹರಿಬಿಡಲಾಗಿದೆ.

ಸಿ.ಎಂ.ಇಬ್ರಾಹಿಂ ಅವರ ನಕಲಿ ಸಹಿಯನ್ನು ಒಳಗೊಂಡಿರುವ ಈ ಪತ್ರದಲ್ಲಿ, “ಜೆಡಿಎಸ್‌ ಪಕ್ಷವು ದಶಕಗಳಿಂದ ಜಾತ್ಯತೀತ ಸಿದ್ಧಾಂತವನ್ನು ಪಾಲಿಸುತ್ತಾ ಬಂದಿದೆ. ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದಾರೆ. ಇತ್ತೀಚೆಗೆ ಜೆಡಿಎಸ್‌ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ” ಎಂದು ಬರೆಯಲಾಗಿದೆ. ಆದರೆ ಇದನ್ನು ಸಿಎಂ ಇಬ್ರಾಹಿಂ ತಳ್ಳಿಹಾಕಿದ್ದಾರೆ.

ಈ ಕುರಿತು ತಿಳಿಯಲು ದೂರವಾಣಿ ಮೂಲಕ ಸಿ.ಎಂ.ಇಬ್ರಾಹಿಂ ಅವರನ್ನು ಸಂಪರ್ಕಿಸಿದಾಗ, “ಈ ರೀತಿಯ ಯಾವುದೇ ನಿರ್ಧಾರವನ್ನು ಪಕ್ಷವು ತೆಗೆದುಕೊಂಡಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ ಜರುಗಿಸಲಾಗುವುದು. ಶೀಘ್ರದಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

May be an image of text that says "ಸಿ.ಎಂ. ಇಬ್ಾಹಿಂ ರಾಜ್ಯಾಧ್ಯಕ್ಷರು ಮಾಡಿ ೇಂದರ ಸಚಿವರು ಭಾರa ಕneಕ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಜೆಸಿ ಭವರ, 19/1, ದ್ಾಳವಾರು 吃 ಕಿದಾರಿಗ್ರಳಿ ಬೆಂಗಸಿಜಿ-549 020 ಬಣ 099-23461984 ದಿನಾಂಕ 17/10/2023 ಪತ್ರಿಕಾ ಪ್ರಕಟಣೆ ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ದಾಂತವನ್ನು ಪಾಲಿಸುತ್ತಾ ಬಂದಿದ್ದು ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ. (ಸಿ.ಎಂ ಇಬ್ರಾಹಿಂ) ಮಾನ್ಯ ಸಂಪಾದಕರು/ ಪ್ರತಿನಿಧಿಗಳು/ ಎಲೆಕ್ಟಾನಿಕ್ ಮಾಧ್ಯಮದವರು ಮನೆ ವಿಣಾಸ ಸಂ. ಬೆನ್ಸನ್ ಕ‍ුಸ ರಸ್ತೆ, ಬೆನ್‌ಸೆನ್ ಚೌಸ್, ಬೆಂಗಮೂರು-560 046"

ಜೆಡಿಎಸ್‌ನಲ್ಲಿ ಸಿಎಂ ಇಬ್ರಾಹಿಂ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ತಿಕ್ಕಾಟ ನಡೆಯುತ್ತಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬಾರದೆಂದು ಸಿ.ಎಂ. ಇಬ್ರಾಹಿಂ ಬಣ ಅಭಿಪ್ರಾಯಪಟ್ಟಿದೆ.

“ನಮ್ಮದೇ ಒರಿಜಿನಲ್‌ ಜೆಡಿಎಸ್‌, ನಾವು ಐಎನ್‌ಡಿಐಎ ಕೂಟಕ್ಕೆ ಬೆಂಬಲ ನೀಡ್ತೀವಿ” ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಇದರಿಂದ ಸಿಟ್ಟಿಗೆದ್ದಿರುವ ಕುಮಾರಸ್ವಾಮಿಯವರು, “ಅವರದೇ ಒರಿಜಿನಲ್‌ ಅಂತಾ ಬೋರ್ಡ್‌ ಹಾಕಿಕೊಳ್ಳಲಿ, ಅವರನ್ನು ಬೇಡ ಅಂದಿರೋರು ಯಾರು?” ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿರುವ ಕುಮಾರಸ್ವಾಮಿ, “ಸಿ.ಎಂ. ಇಬ್ರಾಹಿಂ ಅವರ ಮಾತಿಗೆಲ್ಲಾ ಯಾಕ್ರಿ ಸಿರಿಯಸ್‌ ಆಗಿ ಹೇಳಿಕೆ ಕೊಡಬೇಕು. ಅವರ ವಿಚಾರವನ್ನು ಯಾಕೆ ಗಂಭೀರವಾಗಿ ತಗೋತಿರಾ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...