ಕರಾವಳಿಗರ ಭಾರೀ ವಿರೋಧದ ನಡುವೆ ಬೆಂಗಳೂರು – ಮಂಗಳೂರು – ಕಣ್ಣೂರು ರೈಲು ಕೊಯಿಕ್ಕೋಡ್‌ಗೆ ವಿಸ್ತರಣೆ

Date:

ಕರಾವಳಿಗರ ಭಾರೀ ವಿರೋಧವಿದ್ದರೂ ಬೆಂಗಳೂರು – ಮಂಗಳೂರು – ಕಣ್ಣೂರು ರೈಲನ್ನು ಕೇರಳದ ಕೊಯಿಕ್ಕೋಡ್‌ ವರೆಗೂ ವಿಸ್ತರಣೆ ಮಾಡುವ ದಕ್ಷಿಣ ರೈಲ್ವೆಯ ಪ್ರಸ್ತಾವಕ್ಕೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು ವಿರೋಧಿಸಿ ಪೋಸ್ಟ್ ಹಾಕಲಾಗುತ್ತಿದೆ. ಬೆಂಗಳೂರು–ಮಂಗಳೂರು – ಕಾರವಾರ ರೈಲು ಮಂಜೂರಾದ ಬಳಿಕ ಕೆಲವೇ ದಿನಗಳಲ್ಲಿ ಅದರ ಕೆಲವು ಬೋಗಿಗಳನ್ನು ಕಣ್ಣೂರಿಗೆ ವಿಸ್ತರಿಸಲಾಗಿತ್ತು. ಈ ಪ್ರಸ್ತಾವಕ್ಕೂ ಮಂಗಳೂರಿನ ರೈಲು ಪ್ರಯಾಣಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ, ಕಣ್ಣೂರಿಗೆ ವಿಸ್ತರಣೆ ಆದ ರೈಲು ಇದೀಗ ಕೊಯಿಕ್ಕೋಡ್‌ಗೆ ವಿಸ್ತರಣೆ ಆಗಿದೆ.

ಇದೀಗ ಮತ್ತೆ ಕೇರಳ ಲಾಬಿ ಕೆಲಸ ಮಾಡಿದ್ದು, 2ನೇ ಬಾರಿಗೆ ಬೆಂಗಳೂರು-ಮಂಗಳೂರು ರೈಲನ್ನು ವಿಸ್ತರಣೆ ಮಾಡಲಾಗುತ್ತಿದೆ. ಕಣ್ಣೂರಿಗೆ ವಿಸ್ತರಣೆ ಆದ ರೈಲು ಇದೀಗ ಕೊಯಿಕ್ಕೋಡ್‌ಗೆ ರೈಲು ವಿಸ್ತರಣೆ ಆಗಿದೆ. ಈ ರೈಲು ಕಣ್ಣೂರಿಗೆ ವಿಸ್ತರಣೆ ಆದ ಬಳಿಕ, ಆ ಎಂಟು ಬೋಗಿಗಳಲ್ಲಿ ಕೇರಳದ ಪ್ರಯಾಣಿಕರೇ ತುಂಬಿರುತ್ತಾರೆ. ಈಗ ಕೊಯಿಕ್ಕೋಡ್‌ಗೆ ರೈಲು ವಿಸ್ತರಣೆ ಆದರೆ, ಮಂಗಳೂರಿನ ಜನರು ತಮ್ಮ ಕೋಟಾದ ಮತ್ತಷ್ಟು ಸೀಟು ಕಳೆದುಕೊಳ್ಳಬೇಕಾಗುತ್ತದೆ ಎಂಬುದು ರೈಲ್ವೆ ಹೋರಾಟಗಾರರ ಆತಂಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ರೈಲ್ವೆ ಬೆಂಗಳೂರು – ಮಂಗಳೂರು – ಕಣ್ಣೂರು ರೈಲನ್ನು ಕೊಯಿಕ್ಕೋಡ್‌ ತನಕ ವಿಸ್ತರಣೆ ಮಾಡಲು ಪ್ರಸ್ತಾವನೆ ಸಲ್ಲಿಕೆ ಮಾಡಿತ್ತು. ಆದರೆ, ಕರ್ನಾಟಕದ ಕರಾವಳಿ ಭಾಗದ ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರಾತ್ರಿ 9.35ಕ್ಕೆ ಹೊರಡುವ ಈ ರೈಲು ಮರುದಿನ ಬೆಳಗ್ಗೆ 10.55ಕ್ಕೆ ಕಣ್ಣೂರು ತಲುಪಲಿದೆ. ಅಲ್ಲಿಂದ ಬೆಳಗ್ಗೆ 11ಕ್ಕೆ ಹೊರಟು ಮಧ್ಯಾಹ್ನ 12.40ಕ್ಕೆ ಕೊಯಿಕ್ಕೋಡ್‌ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3.30ಕ್ಕೆ ಹೊರಟು ಸಂಜೆ 5ಕ್ಕೆ ಕಣ್ಣೂರು ತಲುಪಲಿದೆ. ಅಲ್ಲಿಂದ ಸಂಜೆ 5.05ಕ್ಕೆ ಹೊರಟು ಬೆಳಗ್ಗೆ 6.35ಕ್ಕೆ ಬೆಂಗಳೂರು ತಲುಪಲಿದೆ. ತಲಶ್ಶೇರಿ, ವಡಗರ ಹಾಗೂ ಕುಯಿಲಾಂಡಿಗಳಲ್ಲಿ ವಾಣಿಜ್ಯ ನಿಲುಗಡೆ ನೀಡುವುದಕ್ಕೂ ಸಚಿವಾಲಯ ಒಪ್ಪಿಗೆ ಸೂಚಿಸಿದೆ.

ರೈಲ್ವೆ ಇಲಾಖೆ ಕರ್ನಾಟಕದ ಕರಾವಳಿಗೆ ಅನ್ಯಾಯ ಮಾಡಿದೆ. ರೈಲನ್ನು ಕೊಯಿಕ್ಕೋಡ್‌ಗೆ ವಿಸ್ತರಣೆ ಮಾಡಿರುವುದರಿಂದ ಕರ್ನಾಟಕದ ಭಾಗದ ಜನರಿಗೆ ರೈಲಿನಲ್ಲಿ ಸೀಟು ಸಿಗುವುದಿಲ್ಲ. ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವೆ ಈಗಲೇ ರೈಲುಗಳು ಕಡಿಮೆ ಇವೆ. ಬೆಂಗಳೂರು-ಮಂಗಳೂರು ನಡುವೆ ಹಾಸನ ಮೂಲಕ ಹೊಸ ರೈಲು ಓಡಿಸಿ, ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಬೇಕು ಎಂದು ಬೇಡಿಕೆ ಇಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳ ಅಭಿವೃದ್ಧಿಗೆ ಬಿಬಿಎಂಪಿ ಯೋಜನೆ

ರೈಲ್ವೆ ಮಂಡಳಿಯು ದಕ್ಷಿಣ ರೈಲ್ವೆ ಹಾಗೂ ನೈರುತ್ಯ ರೈಲ್ವೆ ವಲಯಗಳಿಗೆ ಜ.23ರಂದು ಪತ್ರ ಬರೆದು, “ಹೊಸ ವೇಳಾಪಟ್ಟಿ ಬಗ್ಗೆ ಆದಷ್ಟು ಬೇಗ ಸೂಕ್ತ ದಿನಾಂಕ ನಿಗದಿಪಡಿಸಿ ಈ ಮಾರ್ಪಾಡನ್ನು ತುರ್ತಾಗಿ ಜಾರಿಗೆ ತರಬೇಕು” ಎಂದು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...