ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಜೀವನಾಧಾರಿತ ‘ಡೈರೆಕ್ಟ್ ಆ್ಯಕ್ಷನ್’ ನಾಟಕ ಪ್ರದರ್ಶನ

Date:

ಬಾಲ್ಯದಿಂದಲೇ ವೈಚಾರಿಕ ಚಿಂತನೆಗಳನ್ನು ಬೆಳೆಸಿಕೊಂಡು ಬಂದವರು ಹಸಿರು ಶಾಲಿನ ಹರಿಕಾರ, ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕ ಪ್ರೊ. ಎಂ.ಡಿ.ನಂಜುಂಡಸ್ವಾಮಿ. ರಾಜ್ಯದ ರೈತರ ಪರವಾಗಿದ್ದ ಅವರ ಗಟ್ಟಿದನಿ, ವಿಚಾರಗಳು, ಖಚಿತ ಅಂಕಿ-ಅಂಶಗಳನ್ನು ಒಳಗೊಂಡ ಭಾಷಣಗಳು ಸರ್ಕಾರವನ್ನೇ ನಡುಗಿಸುತ್ತಿದ್ದವು. ಅವರ ಬಾಲ್ಯ, ಹೋರಾಟ, ಬದುಕನ್ನು ಚಿಂತಕ ನಟರಾಜ್ ಹುಳಿಯಾರ್ ಅವರು ನಾಟಕದ ರೂಪದಲ್ಲಿ ಹೆಣೆದಿದ್ದಾರೆ. ‘ಡೈರೆಕ್ಟ್ ಆ್ಯಕ್ಷನ್’ ಹೆಸರಿನಲ್ಲಿ ರಂಗದ ಮೇಲೆ ತಂದಿದ್ದಾರೆ. ನಾಟಕವು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಿ.18 ಮತ್ತು 19ರಂದು ಪ್ರದರ್ಶನಗೊಳ್ಳುತ್ತಿದೆ. ದಿಟ್ಟ ಹೋರಾಟಗಾರರೊಬ್ಬರ ಬದುಕು ರಂಗದ ಮೇಲೆ ತೆರೆದುಕೊಳ್ಳುತ್ತಿದೆ.

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಮಾಡ್ರಹಳ್ಳಿ ಗ್ರಾಮದ ಜಮೀನ್ದಾರಿ ಕುಟುಂಬದಲ್ಲಿ ಹುಟ್ಟಿದ ನಂಜುಂಡಸ್ವಾಮಿ ಅವರು ಲೋಹಿಯಾ ಹಾಗೂ ಗಾಂಧೀವಾದವನ್ನು ತಮ್ಮ ಬದುಕಿನಲ್ಲಿ  ಅಳವಡಿಸಿಕೊಂಡಿದ್ದರು. ಜಾತಿ ವ್ಯವಸ್ಥೆಯ ವಿರುದ್ಧವೂ ಧ್ವನಿ ಎತ್ತಿದ್ದರು. ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ವೃತ್ತಿ ಜತೆಗೆ ಸಾಹಿತ್ಯ, ಸಂಸ್ಕೃತಿ, ರಾಜಕೀಯ ವಲಯಗಳಲ್ಲಿ ವಿಚಾರವಂತ ಯುವಜನರನ್ನು ತಯಾರು ಮಾಡುತ್ತಿದ್ದರು. ಸಮಾಜವಾದಿ ಆಂದೋಲನಕ್ಕೆ ಅವರನ್ನು ಸೆಳೆದು ತರುತ್ತಿದ್ದರು. ಎಂಬತ್ತರ ದಶಕದಲ್ಲಿ ರೈತರ ಪರವಾಗಿ ರೈತ ಸಂಘಟನೆಗೆ ಇಳಿದರು.

ಪತಿಯನ್ನು ಕಳೆದುಕೊಂಡ ತಮ್ಮ ಅಕ್ಕ ಲೀಲಾ ಅವರ ಮೇಲೆ ಮನೆಯವರು ಸಂಪ್ರದಾಯದ ಕಟ್ಟು ಕಟ್ಟಳೆಗಳನ್ನು ಹೇರಲು ಹೊರಟಿದ್ದನ್ನು ನಂಜಂಡಸ್ವಾಮಿ ಬಾಲಕನಾಗಿದ್ದಾಗಲೇ ತೀಕ್ಷ್ಣವಾಗಿ ಖಂಡಿಸಿ ಬಂಡೆದ್ದಿದ್ದರು. ‘ನಮ್ಮಕ್ಕನ್ನ ಮುಟ್ಟೀರಿ ಜೋಕೆ’ ಎಂದು ಕೆರಳಿ ನಿಂತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂಜುಡಸ್ವಾಮಿ

ಎಳವೆಯಲ್ಲಿಯೇ ವೈಚಾರಿಕ ನೋಟ ಬೆಳೆಸಿಕೊಂಡಿದ್ದರು. ವಿಜ್ಞಾನ ಅವರಿಗೆ ಪ್ರಿಯವಾದ ವಿಷಯವಾಗಿತ್ತು. ಬಿ.ಎಸ್ಸಿ ವ್ಯಾಸಂಗ ಮಾಡಿದ್ದ ಅವರು, ನಂತರ ಕಾನೂನು ಪದವಿ ಪಡೆದರು. ಪಿಎಚ್.ಡಿ ಪದವಿಗಾಗಿ ಜರ್ಮನಿಗೆ ತೆರಳಿದ್ದ ಅವರು ವ್ಯಾಸಂಗವನ್ನು ಅರ್ಧದಲ್ಲೇ ಬಿಟ್ಟು ಬಂದರು. ಬೆಂಗಳೂರಿನ ಬಿಎಂಎಸ್ ಸಂಜೆ ಕಾನೂನು ಕಾಲೇಜಿನಲ್ಲಿ ಕಾನೂನು ಬೋಧಿಸಿ, ಅಚ್ಚುಮೆಚ್ಚಿನ ‘ಮೇಷ್ಟ್ರು’ ಕೂಡ ಆಗಿದ್ದರು.

ಅವರು ‘ಸಾಂವಿಧಾನಿಕ ಕಾನೂನು’ ವಿಷಯವನ್ನು ಬೋಧಿಸಿದ ವೈಖರಿಯು ರವಿವರ್ಮ ಕುಮಾರ್ ಅವರಂತಹ  ವಿಚಾರವಂತ ತರುಣ ವಕೀಲರ ಪಡೆಯನ್ನೇ ಸೃಷ್ಟಿಸಿತು. ಒಮ್ಮೊಮ್ಮೆ ಎಂಡಿಎನ್ ಪಾಠ ಮುಗಿಸಿದ ನಂತರ ಅಲ್ಲೇ ಹತ್ತಿರವಿದ್ದ ಕಿರಂ ನಾಗರಾಜರ ಮನೆಯಲ್ಲಿ ಸಾಹಿತ್ಯ, ಸಂಸ್ಕೃತಿ, ರಾಜಕಾರಣಗಳ ಚರ್ಚೆಯೂ ನಡೆಯುತ್ತಿತ್ತು. ಆಗಿನ್ನೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರಾಗಿ ಸೇರಿದ್ದ ಕಿರಂ ಮಾತಿನ ನಡುವೆ ಅವರನ್ನು ಕೇಳಿದ್ದರು: ‘ಸಾರ್, ಸಾಹಿತ್ಯ ಪಾಠ ಮಾಡುವಾಗ ರಾಜಕೀಯ, ಸಮಾಜವಾದ ಇವೆಲ್ಲವನ್ನೂ ಬೆರೆಸಿ ಹೇಳುವುದು ಹೇಗೆ?’

ಈ ಸುದ್ದಿ ಓದಿದ್ದೀರಾ? ಐಟಿ ದಾಳಿ | ಜುವೆಲ್ಲರಿ ಶಾಪ್ ಮಾಲೀಕರ ಮನೆಯಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

‘ಅವೆಲ್ಲವನ್ನೂ ನೇರವಾಗಿ ಹೇಳಬಾರದು’ ಎಂದ ಎಂಡಿಎನ್, ಪಠ್ಯದ ಸಂದರ್ಭಕ್ಕೆ ತಕ್ಕಂತೆ ಸಮಾಜವಾದವನ್ನು ಬೆರೆಸಿ ಪಾಠ ಮಾಡುವ ಕಲೆಯನ್ನು ಕಿರಂಗೆ ಹೇಳಿಕೊಟ್ಟರು. ಅಗ್ರಹಾರ ಕೃಷ್ಣಮೂರ್ತಿ, ಕರೀಗೌಡ ಬೀಚನಹಳ್ಳಿ ಮುಂತಾದ ಜಾಣ ತರುಣರು ಕೂತಿರುತ್ತಿದ್ದ ಎಂಎ ತರಗತಿಗಳಲ್ಲಿ ಕುಮಾರವ್ಯಾಸನ ಕೃಷ್ಣನನ್ನು ವ್ಯಾಖ್ಯಾನಿಸಲು ಕಿರಂ ಲೋಹಿಯಾರ ‘ರಾಮ, ಕೃಷ್ಣ, ಶಿವ’ ಲೇಖನವನ್ನು ಓದಿಕೊಂಡು ಹೋದರು. ಲೋಹಿಯಾ ಚಿಂತನೆಯನ್ನು ಬಿತ್ತಿದರು. ಕನ್ನಡ ಅಧ್ಯಯನ ಕೇಂದ್ರದ ತರುಣರು ಸಮಾಜವಾದದತ್ತ ತಿರುಗುವ ಜೊತೆಗೆ ಉದಾರವಾದಿ ಜಾತ್ಯತೀತ ಲೇಖಕರಾದ ಹಿನ್ನೆಲೆಯಲ್ಲಿ ಇಂತಹ ಹಲವು ಸಂಗತಿಗಳಿದ್ದವು.

ತಮ್ಮ ಹೋರಾಟದ ಹಾದಿಯಲ್ಲಿ ಹಲವಾರು ನಾಯಕರನ್ನು, ಲೇಖಕರನ್ನು ನಂಜುಂಡಸ್ವಾಮಿ ಮುನ್ನೆಲೆಗೆ ತಂದಿದ್ದಾರೆ. ಅವರ ಗರಡಿಯಲ್ಲಿ ಬೆಳೆದವರು ಇಂದು ರೈತಸಂಘವನ್ನು ಮುನ್ನಡೆಸುತ್ತಿದ್ದಾರೆ. ಅವರ ಜೊತೆಗೆ ಬೆಳೆದ ನಟರಾಜ್ ಹುಳಿಯಾರ್ ಅವರು ತಾವು ಕಂಡ ನಂಜುಂಡಸ್ವಾಮಿ ಅವರ ಬದುಕನ್ನು ‘ಡೈರೆಕ್ಟ್ ಆ್ಯಕ್ಷನ್’ ಎಂಬ ನಾಟಕವಾಗಿ ಚಿತ್ರಿಸಿದ್ದಾರೆ. ನಂಜುಂಡಸ್ವಾಮಿ ಅವರ ಬದುಕನ್ನ ನಾಟಕದ ರೂಪದಲ್ಲಿ ಕಣ್ತುಂಬಿಕೊಳ್ಳಲು ಆಹ್ವಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...