ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಸಚಿವ ಎಂ ಬಿ ಪಾಟೀಲ್

Date:

ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಶನಿವಾರ ಹೇಳಿದರು.

ದೇಶದಲ್ಲೇ ಅತಿ ಉದ್ದದ (100 ಅಡಿ ಅಥವಾ 31 ಮೀಟರ್) ಯು-ಗರ್ಡರ್ ನಿರ್ಮಾಣ ಪ್ರಕ್ರಿಯೆಯನ್ನು ವೀಕ್ಷಿಸಲು ದೇವನಹಳ್ಳಿ ಬಳಿಯ ಗೊಲ್ಲಹಳ್ಳಿಯ ಕ್ಯಾಸ್ಟಿಂಗ್ ಕಾರ್ಯಾಗಾರಕ್ಕೆ ಭೇಟಿ ನೀಡಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

“ಎಂಜಿನಿಯರಿಂಗ್ ಅದ್ಭುತ ಈ ಎನ್ನಲಾಗಿರುವ ಈ 100 ಅಡಿ ಉದ್ದದ ಯು-ಗರ್ಡರ್ ಅನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಉಪನಗರ ರೈಲು ಯೋಜನೆಗೆ ಬಳಸಲಾಗುತ್ತಿದೆ. ಮಲ್ಲಿಗೆ ಕಾರಿಡಾರ್ ನ (ನಂಬರ್ 2) ಭಾಗವಾದ ಹೆಬ್ಬಾಳ- ಯಶವಂತಪುರದ 8 ಕಿಮೀ ನಡುವೆ ಇಂತಹ ಸುಮಾರು 450 ಯು-ಗರ್ಡರ್ ಗಳನ್ನು ಬಳಸಲಾಗುತ್ತದೆ. ಇದಕ್ಕೆ ಮುಂಚೆ, ದೇಶದಲ್ಲಿ ಬೇರೆ ರೈಲ್ವೆ ಯೋಜನೆಗಳಲ್ಲಿ 28 ಮೀ. ಉದ್ದದ ಯು- ಗರ್ಡರ್ ಗಳನ್ನು ಬಳಸಲಾಗುತ್ತಿತ್ತು”‌ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಎಲ್ ಅಂಡ್ ಟಿ ಕ್ಯಾಸ್ಟಿಂಗ್ ಯಾರ್ಡ್ ನಲ್ಲಿ ಐ-ಗರ್ಡರ್ ಮತ್ತು ಫೈಯರ್ ಕ್ಯಾಪ್ ಗಳನ್ನು ಕೂಡ ಕ್ಯಾಸ್ಟಿಂಗ್ ಮಾಡಲಾಗುತ್ತದೆ. ಮೇಲಿನ ಮಾರ್ಗದಲ್ಲಿ ಇಂತಹ 323 ಐ-ಗರ್ಡರ್, 283 ಫೈಯರ್ ಕ್ಯಾಪ್ ಗಳನ್ನು ಬಳಸಲಾಗುತ್ತದೆ” ಎಂದು ಹೇಳಿದರು.

“ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಈವರೆಗೆ ಶೇಕಡ 20ರಷ್ಟು ಕಾಯಂ ಕಾಮಗಾರಿಗಳು ಮುಗಿದಿವೆ. ಕಾರಿಡಾರ್ -2ರಲ್ಲಿ (ಚಿಕ್ಕಬಾಣಾವರ-ಬೆನ್ನಿಗಾನಹಳ್ಳಿ) ಅಗತ್ಯವಿರುವ 120.44 ಎಕರೆ ಭೂಮಿಯ ಪೈಕಿ 119.18 ಎಕರೆ ಜಮೀನು (ಶೇಕಡ 98.5 ರಷ್ಟು) ಈಗಾಗಲೇ ಸ್ವಾಧೀನಗೊಂಡಿದೆ” ಎಂದು ತಿಳಿಸಿದರು.

“ಕಾರಿಡಾರ್ – 2ರಲ್ಲಿ ಉತ್ತಮವಾಗಿ ಕೆಲಸ ನಡೆಯುತ್ತಿದೆ. ನಾಗರಿಕ ಸೇವೆಗಳನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಸ್ಎನ್ಎಲ್ ಹಾಗೂ ಇನ್ನಿತರ ಖಾಸಗಿ ಸಂಸ್ಥೆಗಳ ಜೊತೆ ಮಾತುಕತೆ ನಡೆಯುತ್ತಿದೆ” ಎಂದು ಪಾಟೀಲ್ ಹೇಳಿದರು.

“ಕೆಂಗೇರಿ- ವೈಟ್ ಫೀಲ್ಡ್ ಕಾರಿಡಾರನಲ್ಲಿ ಕೆಂಗೇರಿ- ಕಂಟೋನ್ಮೆಂಟ್ ನಡುವೆ ಉಪನಗರ ಯೋಜನೆ ಜಾರಿಗೆ ಯಾವ ಆತಂಕವೂ ಇಲ್ಲ. ಆದರೆ ಕಂಟೋನ್ಮೆಂಟ್- ವೈಟ್ ಫೀಲ್ಡ್ ನಡುವೆ ಜಾಗದ ಸಮಸ್ಯೆ ಇದ್ದು, ಇಲ್ಲಿ ಎತ್ತರಿಸಿದ ಮಾರ್ಗ ನಿರ್ಮಿಸಬೇಕೆ ಅಥವಾ ಬೇರೆ ಯಾವ ರೀತಿಯಲ್ಲಿ ಯೋಜನೆ ಅನುಷ್ಠಾನ ಮಾಡಬಹುದು ಎಂಬುದರ ಬಗ್ಗೆ ರೈಲ್ವೆ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು” ಎಂದರು.

“ಒಟ್ಟಾರೆ, ರೂ 15,677 ಕೋಟಿಯ ಯೋಜನೆಯ ನಾಲ್ಕೂ ಕಾರಿಡಾರ್ ಗಳ 148.17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಮಗಾರಿ ಡಿಸೆಂಬರ್ 2027ಕ್ಕೆ ಮುಗಿಯಲಿದೆ. ಈ ಗುರಿಗೆ ಪೂರಕವಾಗಿ ರೈಲ್ವೆ ಇಲಾಖೆಯು ಸಿ-1 ಮತ್ತು ಸಿ- 3 ಕಾರಿಡಾರ್ ಗಳ ಕಾಮಗಾರಿಗಾಗಿ ಒತ್ತುವರಿ ತೆರವುಗೊಳಿಸಿದ ಭೂಮಿಯನ್ನು ನಮಗೆ ಹಸ್ತಾಂತರಿಸಬೇಕು ಹಾಗೂ ಡಿಪಿಆರ್ ನಲ್ಲಿ ಇರುವಂತೆ ಅಲೈನ್ಮೆಂಟಿಗೆ ಅನುಮತಿ ನೀಡಬೇಕು” ಎಂದು ಕೋರಿದರು.

ರೈಲ್ವೆ ಇಲಾಖೆಯು ಮುಂಬರುವ ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವರ್ತುಲ ರೈಲ್ವೆ ಯೋಜನೆಗೆ ಉಪನಗರ ರೈಲು ಯೋಜನೆಯನ್ನು ಸಂಪರ್ಕಿಸುವ ಜೊತೆಗೆ ಅದನ್ನು ಬೆಂಗಳೂರು ಸುತ್ತಲ ಉಪನಗರಗಳಿಗೆ ವಿಸ್ತರಿಸುವ ಬಗ್ಗೆಯೂ ಕೆ-ರೈಡ್ ಈಗಾಗಲೇ ಚಿಂತನೆ ನಡೆಸುತ್ತಿದೆ. ಇದರ ಬಗ್ಗೆ ರೈಲ್ವೆ ಇಲಾಖೆ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...