ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

Date:

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ಕೂಡ ವಿವಾದದ ಹೇಳಿಕೆ ನೀಡಿದ್ದಾರೆ. “ಫ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗ್ ಹೋಗ್ತಿದ್ದಾರೆ ಅಂತ ಗೊತ್ತಾಗ್ತಿಲ್ಲ” ಎಂದು ಹೇಳಿರುವ ಶೃತಿ ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ ಶಕ್ತಿ ಸಿಂಧು ಮಹಿಳಾ ಸಮಾವೇಶದಲ್ಲಿ ಹೇಳಿಕೆ ನೀಡಿದ ಅವರು, “ದಿನ ನಿತ್ಯ ಗಂಡಸರು ಅಳತಾ ಇದ್ದಾರೆ. ನನ್ನ ಹೆಂಡತಿ ಎಲ್ಲಿ ಹೋದ್ಲು ಅಂತ, ಮಕ್ಕಳು ಮನೇಲಿ ಉಪವಾಸ ಬಿದ್ದಿದ್ದಾರೆ ಅಂತ ಗೋಳಾಡುತ್ತಿದ್ದಾರೆ. ಫ್ರೀ ಬಸ್‌ ಕೊಟ್ಟ ತಕ್ಷಣ ಮಹಿಳೆಯರು ಎಲ್ಲೆಲ್ಲೋ ಹೋಗುತ್ತಿದ್ದಾರೆ. ತೀರ್ಥಯಾತ್ರೆ ಹೋಗಬೇಕು ಅನ್ನುವ ನೆಪದಲ್ಲಿ ಎಲ್ಲಿಗೆ ಹೋಗಬೇಕು ಅನ್ನೋದು ಗೊತ್ತಿಲ್ಲ. ಗೊತ್ತು ಗುರಿಯಿಲ್ಲದೆ ಇರುವ ಹಾಗೇ ಮಾಡಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಫ್ರೀ ಬಸ್‌ ಹೆಸರಿನಲ್ಲಿ ನಾವು ಯಾವತ್ತು ಸಂಸ್ಕೃತಿ ದಾಟಿದ್ದೆ ಇಲ್ಲ. ಹೆಣ್ಣು ಮಕ್ಕಳ ಮೇಲೆ ಯಾವಾಗಲೂ ಒಂದು ದೂಷಣೆ ಇದೆ. ಆದರೆ, ನಾವು ಹೆಣ್ಣು ಮಕ್ಕಳು ಜಗಳ ಆಡಿದ್ದು ಇತಿಹಾಸದಲ್ಲೇ ಇಲ್ಲ. ಆದರೆ ಕೆಲವರು ಸೀಟ್‌ಗೋಸ್ಕರ ಜುಟ್ಟು ಹಿಡಿದುಕೊಂಡು ಜಗಳ ಆಡೋ ಹಾಗೇ ಮಾಡಿದ್ದಾರೆ. ಆಟೋ ಓಡಿಸೊ ಜನರು ಕಣ್ಣೀರು ಹಾಕತಾ ಇದಾರೆ” ಎಂದು ಹೇಳಿದ್ದಾರೆ.

”ಯಾವುದೇ ಯೋಜನೆ ಕೊಟ್ಟರೂ ಅದು ಮಹಿಳೆಯರ ರಕ್ಷಣೆಗೆ ಕೊಡಬೇಕೇ ಹೊರತು ಕೇವಲ ಆಕರ್ಷಣೆಗೋಸ್ಕರ ಆಗಿರಬಾರದು. ಭಾರತದ ಸಂಸ್ಕೃತಿ, ಪರಂಪರೆಯ ಲಕ್ಷ್ಮಣ ರೇಖೆಯನ್ನ ನೀವು ದಾಟಿ ಹೋದರೇ, ಕಾಂಗ್ರೆಸ್‌ ಪಕ್ಷದವರು ನಿಮ್ಮನ್ನು ಅಪಹರಣ ಮಾಡುತ್ತಾರೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

”ಯಾಕೆ ಕಾಂಗ್ರೆಸ್‌ ಅವರು ಕೇವಲ ಹೆಣ್ಣುಮಕ್ಕಳನ್ನು ಟಾರ್ಗೆಟ್‌ ಮಾಡಿ ಈ ರೀತಿಯ ಯೋಜನೆ ಕೊಡತಾ ಇದಾರೆ ಎಂಬ ಬಗ್ಗೆ ಯೋಚನೆ ಮಾಡಿ” ಎಂದರು.

ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ವೈ ರಾಘವೇಂದ್ರ, ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಈ ವೇಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...