ಜನರ ಮನೆಬಾಗಿಲಿಗೆ ಆಡಳಿತ ಆಶಯ, ಸಿಎಂ ಜನಸ್ಪಂದನ ಮಹತ್ವದ ಹೆಜ್ಜೆ: ಡಿ ಕೆ ಶಿವಕುಮಾರ್

Date:

  • ಸಿಎಂ ಜನಸ್ಪಂದನ ಅಭೂತಪೂರ್ವ ಯಶಸ್ಸು: ಡಿ ಕೆ ಶಿವಕುಮಾರ್‌
  • ಮುಖ್ಯಮಂತ್ರಿ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಗೆ ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಸಮಸ್ಯೆಯನ್ನು ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ. ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಮಹತ್ವದ ಹೆಜ್ಜೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣ್ಣಿಸಿದರು.

ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಿಡ್ಡುಗಟ್ಟಿತ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುರುಕು ನೀಡಲಾಗಿದೆ. ಉಳಿದ ಸಮಸ್ಯೆಗಳನ್ನು ಆಯಾ ಇಲಾಖೆ ಮುಖ್ಯಸ್ಥರು ಕಾಲಮಿತಿಯಲ್ಲಿ ಬಗೆಹರಿಸಿ ವಾಸ್ತವ ಸಂಗತಿಯನ್ನು ಅರ್ಜಿದಾರರಿಗೆ ಒದಗಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ತತ್ತರಿಸಿ ಹೋಗಿದ್ದರು. ಅವರ ಸಮಸ್ಯೆಗಳಿಗೆ ಪರಿಹಾರ ಸಿಗದೆ ಹೈರಾಣ ಆಗಿದ್ದರು. ಇದೀಗ ಆ ಪರಿಸ್ಥಿತಿ ಬದಲಾಗಿದೆ. ಅದರ ಮುಂದಿನ ಹೆಜ್ಜೆಯಾಗಿ ಜನಸ್ಪಂದನ ಕಾರ್ಯಕ್ರಮವು ಆಡಳಿತದಲ್ಲಿ ಬಹು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

“ಮುಂದಿನ ದಿನಗಳಲ್ಲಿ ಆಡಳಿಕ್ಕೆ ವೇಗ ನೀಡಿ ಸರಕಾರದ ಎಲ್ಲಾ ಯೋಜನೆಗಳ ಲಾಭ ನೂರಕ್ಕೆ ನೂರರಷ್ಟು ಫಲಾನುಭವಿಗಳಿಗೆ ತಲುಪಿಸುವಂತೆ ಎಚ್ಚರ ವಹಿಸಲಾಗುವುದು. ಈಗಾಗಲೇ ಎಲ್ಲ ಸಚಿವರು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಜನರ ಮನೆ ಬಾಗಿಲಿಗೆ ಆಡಳಿತ ಎಂಬ ಮಾತನ್ನು ಈಡೇರಿಸಿದ ಸಂತೃಪ್ತ ಭಾವ ತಮಗಿದೆ” ಎಂದಿದ್ದಾರೆ.

“ಸರಕಾರದ ಆಶಯಗಳಿಗೆ ತಕ್ಕಂತೆ ನಮ್ಮ ಯೋಜನೆ ಮತ್ತು ಕಾರ್ಯಕ್ರಮಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ತಿಳಿದುಕೊಳ್ಳಲು ಸಮೀಕ್ಷೆ ನಡೆಸುವ ಆಲೋಚನೆಯೂ ಇದೆ. ಈ ಬಗ್ಗೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

“ಇಂದು ಬಹುದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡ ಜನರಿಗೆ ಇಲಾಖಾವಾರು ಉತ್ತರವನ್ನು ಕಾಲಮಿತಿಯಲ್ಲಿ ನೀಡುವ ಬಗ್ಗೆ ಸಿಎಂ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆಯೂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...